ಇರಾನ್‌ ವಿಚಾರದಲ್ಲಿ ಮೋದಿ ಮೌನ ಏಕೆ?: ಸೋನಿಯಾ ಕಿಡಿ

KannadaprabhaNewsNetwork |  
Published : Jun 22, 2025, 01:18 AM ISTUpdated : Jun 22, 2025, 05:35 AM IST
ಸೋನಿಯಾ | Kannada Prabha

ಸಾರಾಂಶ

ಮಧ್ಯ ಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಗಾಜಾ ಮತ್ತು ಇರಾನ್ ಮೇಲಿನ ಇಸ್ರೇಲ್ ದಾಳಿ ವಿಚಾರದಲ್ಲಿ ಭಾರತ ತಟಸ್ಥ ನಿಲುವು ಹೊಂದಿರುವುದಕ್ಕೆ ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಕಿಡಿ ಕಾರಿದ್ದು, ‘ಇದು ಧ್ವನಿಯ ನಷ್ಟ ಮಾತ್ರವಲ್ಲ, ಮೌಲ್ಯಗಳ ಶರಣಾಗತಿ’ ಎಂದು ಕೇಂದ್ರದ ವಿರುದ್ಧ ಹರಿಹಾಯ್ದಿದ್ದಾರೆ.

 ನವದೆಹಲಿ: ಮಧ್ಯ ಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಗಾಜಾ ಮತ್ತು ಇರಾನ್ ಮೇಲಿನ ಇಸ್ರೇಲ್ ದಾಳಿ ವಿಚಾರದಲ್ಲಿ ಭಾರತ ತಟಸ್ಥ ನಿಲುವು ಹೊಂದಿರುವುದಕ್ಕೆ ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಕಿಡಿ ಕಾರಿದ್ದು, ‘ಇದು ಧ್ವನಿಯ ನಷ್ಟ ಮಾತ್ರವಲ್ಲ, ಮೌಲ್ಯಗಳ ಶರಣಾಗತಿ’ ಎಂದು ಕೇಂದ್ರದ ವಿರುದ್ಧ ಹರಿಹಾಯ್ದಿದ್ದಾರೆ.

‘ದಿ ಹಿಂದು ಪತ್ರಿಕೆ’ಗೆ ಬರೆದ ಲೇಖನದಲ್ಲಿ ಈ ಬಗ್ಗೆ ಪ್ರಸ್ತಾಪಿಸಿರುವ ಸೋನಿಯಾ, ‘ಈ ಹಿಂದೆ ಇಸ್ರೇಲ್‌ನಿಂದ ದಾಳಿಗೆ ಒಳಗಾದ ಗಾಜಾ ವಿವಾದದಲ್ಲಿ ಮೋದಿ ಸರ್ಕಾರ ಮೌನ ತಾಳಿತ್ತು. ಸ್ವತಂತ್ರ ಪ್ಯಾಲೆಸ್ತೀನ್ ಪರ ವಾದ ಮಂಡಿಸಿರಲಿಲ್ಲ. ಇದೀಗ ಇರಾನ್ ವಿರುದ್ಧ ಇಸ್ರೇಲ್‌ ಅಪ್ರಚೋದಿತ ದಾಳಿ ಮಾಡುತ್ತಿದೆ. ಈ ಬಗ್ಗೆ ಕೂಡ ಮೋದಿ ಮೌನ ವಹಿಸಿರುವುದು ಸಲ್ಲದು. ಇದು ನಮ್ಮ ನೈತಿಕತೆ ಮತ್ತು ರಾಜತಾಂತ್ರಿಕ ಸಂಪ್ರದಾಯದಿಂದ ದೂರ ಸರಿಯುವುದನ್ನು ಪ್ರತಿಬಿಂಬಿಸುತ್ತದೆ, ಇದು ಕೇವಲ ಧ್ವನಿಯ ನಷ್ಟ ಮಾತ್ರವಲ್ಲದೇ ಮೌಲ್ಯಗಳ ಶರಣಾಗತಿ ಕೂಡ ಆಗಿದೆ’ ಎಂದಿದ್ದಾರೆ.

 ಮುಂದುವರೆದಂತೆ ಭಾರತ ಎರಡೂ ರಾಷ್ಟ್ರಗಳ ನಡುವಿನ ಶಾಂತಿ ಸ್ಥಾಪನೆಗೆ ಭಾರತ ಜವಾಬ್ದಾರಿಯುತ ನಡೆ ಅನುಸರಿಸಬೇಕೆಂದು ಆಗ್ರಹಿಸಿರುವ ಅವರು, ‘ಇನ್ನೂ ತಡವಾಗಿಲ್ಲ. ಭಾರತವು ಸ್ಪಷ್ಟವಾಗಿ ಮಾತನಾಡಬೇಕು. ಜವಾಬ್ದಾರಿಯುತವಾಗಿ ವರ್ತಿಸಬೇಕು. ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಶಮನ, ಶಾಂತಿ ಸ್ಥಾಪನೆಗೆ ಲಭ್ಯವಿರುವ ಪ್ರತಿಯೊಂದು ರಾಜತಾಂತ್ರಿಕ ಮಾರ್ಗವನ್ನು ಬಳಸಬೇಕು ’ ಎಂದಿದ್ದಾರೆ.ಇದೇ ವೇಳೆ ಸೋನಿಯಾ ಗಾಂಧಿ ಅವರು ಇರಾನ್ ನೆಲದಲ್ಲಿ ನಡೆದ ಬಾಂಬ್ ದಾಳಿ, ನಾಗರಿಕರ ಹತ್ಯೆಯನ್ನು ರಾಷ್ಟ್ರೀಯ ಕಾಂಗ್ರೆಸ್ ಖಂಡಿಸುತ್ತದೆ ಎಂದು ಹೇಳಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಬೆಂಗಳೂರಿನದ್ದು ಸೇರಿ 16 ಉಪಗ್ರಹಗಳು ಆಗಸದಲ್ಲೇ ಕಾಣೆ
ಅಣ್ಣಾಮಲೈ ರಸಮಲೈ ಎಂದು ರಾಜ್‌ ಠಾಕ್ರೆ ಕೀಳುಭಾಷೆ ಟೀಕೆ