ವಾಯುಮಾಲಿನ್ಯದೊಂದಿಗೆ ಸೆಣಸುತ್ತಿರುವ ದೆಹಲಿಯಲ್ಲಿ ‘ವಾಕಿಂಗ್‌ ನ್ಯುಮೋನಿಯಾ’ ಸಮಸ್ಯೆ

KannadaprabhaNewsNetwork |  
Published : Nov 23, 2024, 12:36 AM ISTUpdated : Nov 23, 2024, 04:26 AM IST
ದೆಹಲಿ | Kannada Prabha

ಸಾರಾಂಶ

ಕಳೆದ ಕೆಲ ದಿನಗಳಿಂದ ವಾಯುಮಾಲಿನ್ಯದೊಂದಿಗೆ ಸೆಣಸುತ್ತಿರುವ ದೆಹಲಿಯ ಜನ ಇದೀಗ ಹೊಸ ರೀತಿಯ ಉಸಿರಾಟ ಸಂಬಂಧಿತ ಕಾಯಿಲೆಯೊಂದಕ್ಕೆ ತುತ್ತಾಗುತ್ತಿದ್ದಾರೆ.

ನವದೆಹಲಿ: ಕಳೆದ ಕೆಲ ದಿನಗಳಿಂದ ವಾಯುಮಾಲಿನ್ಯದೊಂದಿಗೆ ಸೆಣಸುತ್ತಿರುವ ದೆಹಲಿಯ ಜನ ಇದೀಗ ಹೊಸ ರೀತಿಯ ಉಸಿರಾಟ ಸಂಬಂಧಿತ ಕಾಯಿಲೆಯೊಂದಕ್ಕೆ ತುತ್ತಾಗುತ್ತಿದ್ದಾರೆ. ಕಲುಷಿತ ಗಾಳಿಯ ಸೇವನೆಯಿಂದಾಗಿ ಹಲವರಲ್ಲಿ ‘ವಾಕಿಂಗ್‌ ನ್ಯುಮೋನಿಯಾ’ ಎಂಬ ಸಮಸ್ಯೆ ಕಾಣಿಸಿಕೊಳ್ಳತೊಡಗಿದೆ.

ಮೈಕೋಪ್ಲಾಸ್ಮಾ ನ್ಯುಮೋನಿಯಾ ಎಂಬ ಬ್ಯಾಕ್ಟೀರಿಯಾದಿಂದ ಉದ್ಭವಿಸುವ ಈ ಕಾಯಿಲೆಯ ತೀವ್ರತೆಯು ಮಾಮೂಲಿ ನ್ಯುಮೋನಿಯಾಗಿಂತ ಕಡಿಮೆಯಾಗಿದ್ದರೂ, ಇದು ಉಸಿರಾಟದಲ್ಲಿ ತೊಂದರೆ ಉಂಟುಮಾಡುತ್ತದೆ. ಈ ಸಮಸ್ಯೆಯನ್ನು ದೈಹಿಕ ಪರೀಕ್ಷೆ ಅಥವಾ ಎಕ್ಸರೇ ಮೂಲಕ ಪತ್ತೆ ಮಾಡಬಹುದು.

ಸಾಮಾನ್ಯವಾಗಿ ಸ್ವಾಸ್ಥ್ಯ ಹದಗೆಟ್ಟಾಗ ಬೇಕೆನಿಸುವ ವಿಶ್ರಾಂತಿ, ವಾಕಿಂಗ್‌ ನ್ಯುಮೋನಿಯಾ ಪೀಡಿತರಲ್ಲಿ ಕಾಣಿಸದ ಕಾರಣ ಇದಕ್ಕೆ ಈ ಹೆಸರಿಡಲಾಗಿದೆ.

ವಾಕಿಂಗ್‌ ನ್ಯುಮೋನಿಯಾ ಹರಡುವಿಕೆ, ಲಕ್ಷಣ:

ಈ ಸಮಸ್ಯೆಯಿಂದ ಬಳಲುತ್ತಿರುವ ವ್ಯಕ್ತಿ ಕೆಮ್ಮಿದಾಗ ಅಥವಾ ಸೀನಿದಾಗ ಹೊರಬರುವ ಕಣಗಳೊಂದಿಗೆ ಸಂಪರ್ಕದಲ್ಲಿ ಬಂದಾಗ ವಾಕಿಂಗ್‌ ನ್ಯುಮೋನಿಯಾ ಹರಡುತ್ತದೆ. ಸಾಮಾನ್ಯವಾಗಿ ಜನಸಂದಣಿ ಇರುವ ಸ್ಥಳಗಳಲ್ಲಿ ಇದರ ಹರಡುವಿಕೆಯ ಪ್ರಮಾಣ ಅಧಿಕವಾಗಿರುತ್ತದೆ.

ವಾಕಿಂಗ್‌ ನ್ಯುಮೋನಿಯಾದಿಂದ ಬಳಲುತ್ತಿರುವ ವ್ಯಕ್ತಿಯಲ್ಲಿ ಜ್ವರ, ಕೆಮ್ಮು, ಗಂಟಲು ನೋವಿನ ಲಕ್ಷಣಗಳು ಕಂಡುಬರುತ್ತವೆ. ಅಂಥವರು ಉಸಿರಾಡಲು ಕಷ್ಟ ಪಡುತ್ತಾರೆ. ಇದು 3ರಿಂದ 5 ದಿನಗಳ ವರೆಗೆ ಮುಂದುವರೆಯುವ ಸಾಧ್ಯತೆ ಇರುತ್ತದೆ.

ಕಳಪೆ ವಾಯುಗುಣಮಟ್ಟ: 3 ದಿನ ಗ್ರಾಪ್‌-4 ಮುಂದುವರಿಕೆಗೆ ಸುಪ್ರೀಂ ಸೂಚನೆ

ನವದೆಹಲಿ: ಕಳಪೆ ವಾಯುಗುಣಮಟ್ಟದಿಂದ ಉಸಿರುಗಟ್ಟುತ್ತಿರುವ ರಾಷ್ಟ್ರರಾಜಧಾನಿ ದೆಹಲಿ ಹಾಗೂ ಸುತ್ತಲಿನ ವಲಯಗಳಲ್ಲಿ ಜಾರಿಗೊಳಿಸಲಾಗಿರುವ 4ನೇ ಹಂತದ ಮಾಲಿನ್ಯ ವಿರೋಧಿ ಗ್ರಾಪ್‌ ಅನ್ನು ಇನ್ನೂ 3 ದಿನ ಮುಂದುವರೆಸುವಂತೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿದೆ.

ಈ ಕುರಿತ ಮುಂದಿನ ವಿಚಾರಣೆಯನ್ನು ಸೋಮವಾರ ನಡೆಸುವುದಾಗಿ ತಿಳಿಸಿರುವ ನ್ಯಾ। ಅಭಯ್‌ ಎಸ್‌. ಒಕಾ ನೇತೃತ್ವದ ಪೀಠ, ನ.25ರಂದು ಪರಿಸ್ಥಿತಿಯನ್ನು ಅವಲೋಕಿಸಿದ ಬಳಿಕ ಗ್ರಾಪ್‌ ಅನ್ನು 4ನೇ ಹಂತದಿಂದ 2ನೇ ಹಂತಕ್ಕೆ ಇಳಿಸುವ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದೆ.

ಇದೇ ವೇಳೆ, ಗ್ರಾಪ್‌-4 ಅಡಿಯಲ್ಲಿ ಟ್ರಕ್‌ಗಳ ದೆಹಲಿ ಪ್ರವೇಶ ನಿರ್ಬಂಧಿಸಲಾಗಿದ್ದರೂ ಅದು ಸರಿಯಾಗಿ ಪಾಲನೆಯಾಗದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿತು.ಶುಕ್ರವಾರ ದೆಹಲಿಯಲ್ಲಿ ವಾಯುಗುಣಮಟ್ಟ (ಎಕ್ಯುಐ) ಗಂಭೀ ಎಂದು ಪರಿಗಣಿಸಲಾಗುವ 401 ಅಂಕ ಇದ್ದು, ತಾಪಮಾನ 11.3 ಡಿಗ್ರಿ ಉಷ್ಣಾಂಶ ವರದಿಯಾಗಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಕಾಂತಾರಾ ಹಿಂದಿಕ್ಕಿದ ಧುರಂಧರ್‌: 876 ಕೋಟಿ ಸಂಪಾದನೆಯ ದಾಖಲೆ
ಛತ್ತೀಸ್‌ಗಢ ಮದ್ಯ ಹಗರಣ: ಮಾಜಿ ಸಿಎಂ ಪುತ್ರಗೆ ₹250 ಕೋಟಿ ಲಂಚ