ಭಾರೀ ಹೈಡ್ರಾಮಾ ಬಳಿಕ ಸಿಎಂ ಅರವಿಂದ್‌ ಕೇಜ್ರಿವಾಲ್‌ಗೆ ಪೊಲೀಸರ ನೋಟಿಸ್‌

KannadaprabhaNewsNetwork |  
Published : Feb 04, 2024, 01:32 AM ISTUpdated : Feb 04, 2024, 12:31 PM IST
arvind kejriwal

ಸಾರಾಂಶ

ಬಿಜೆಪಿ ವಿರುದ್ಧ ಶಾಸಕರ ಖರೀದಿ ಆರೋಪ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಹಾಗೂ ಆಪ್‌ ನಾಯಕ ಅರವಿಂದ್‌ ಕೇಜ್ರಿವಾಲ್‌ ಮನೇಲಿ 5 ತಾಸು ಕಾದು ನೋಟಿಸ್‌ ಕೊಟ್ಟ ದೆಹಲಿ ಪೊಲೀಸ್‌

ನವದೆಹಲಿ: ತಲಾ 25 ಕೋಟಿ ರು. ಆಫರ್‌ ನೀಡುವ ಮೂಲಕ 7 ಆಪ್‌ ಶಾಸಕರನ್ನು ಬಿಜೆಪಿ ಖರೀದಿಸುತ್ತಿದೆ ಎಂದು ಆರೋಪ ಹೊರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಹಾಗೂ ಆಪ್‌ ನಾಯಕ ಅರವಿಂದ್‌ ಕೇಜ್ರಿವಾಲ್‌ಗೆ ನೋಟಿಸ್‌ ನೀಡಲು ದಿಲ್ಲಿ ಪೊಲೀಸರು ಐದು ಗಂಟೆಗಳ ಕಾಲ ಕಾದು ಕುಳಿತ ಹೈಡ್ರಾಮಾ ನಡೆದಿದೆ.

ನೋಟಿಸ್‌ ನೀಡಲು ಶುಕ್ರವಾರವೇ ಕೇಜ್ರಿವಾಲ್‌ ಮನೆಗೆ ಆಗಮಿಸಿದ್ದ ಪೊಲೀಸರು, ಕೇಜ್ರಿವಾಲ್‌ ಮನೆಯಲ್ಲಿಲ್ಲದ ಕಾರಣಕ್ಕೆ ನೋಟಿಸ್‌ ನೀಡದೇ ಹಿಂದಿರುಗಿದ್ದರು.

ಖುದ್ದು ಕೇಜ್ರಿವಾಲ್‌ಗೇ ನೋಟಿಸ್‌ ಹಸ್ತಾಂತರಿಸುವ ಉದ್ದೇಶದಿಂದ ಮತ್ತೆ ಶನಿವಾರ ಅವರ ನಿವಾಸಕ್ಕೆ ಆಗಮಿಸಿದ್ದ ಪೊಲೀಸರು ಐದು ಗಂಟೆಗಳ ಕಾಲ ಅವರಿಗಾಗಿ ಕಾದ ಬಳಿಕ ನೋಟಿಸ್‌ ನೀಡಿ ತೆರಳಿದ್ದಾರೆ. 

ಆಪ್‌ ಶಾಸಕರನ್ನು ಬಿಜೆಪಿ ಖರೀದಿಸುತ್ತಿದೆ ಎಂಬ ಕೇಜ್ರಿವಾಲ್‌ ಆರೋಪ ಸುಳ್ಳು ಎಂದು ಬಿಜೆಪಿ ದೂರು ನೀಡಿತ್ತು. ಈ ಪ್ರಕರಣದಲ್ಲಿ ನೋಟಿಸ್‌ ನೀಡಲಾಗಿದೆ.

ಶುಕ್ರವಾರವೇ ಕೇಜ್ರಿವಾಲ್‌ಗೆ ಪೊಲೀಸರು ನೋಟಿಸ್‌ ನೀಡಿದ್ದಾರೆ ಎನ್ನಲಾಗಿತ್ತಾದರೂ, ಅವರು ನೋಟಿಸ್‌ ನೀಡದೇ ಹಿಂದಿರುಗಿದ್ದರು ಎಂಬುದು ಶನಿವಾರ ತಿಳಿದು ಬಂದಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಅಧಿಕಾರಕ್ಕಾಗಿ ಅಪವಿತ್ರ ರಾಜಕೀಯ ಮೈತ್ರಿ - ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ವೈರಿಗಳ ಮಿಲನ
ಭಾನುವಾರವೇ ಕೇಂದ್ರ ಬಜೆಟ್‌ ಮಂಡನೆ ನಿಗದಿ