ಯುಪಿಎಸ್‌ಸಿ ಬದಲು ಆರ್‌ಎಸ್‌ಎಸ್‌ ಮೂಲಕ ಅಧಿಕಾರಿ ನೇಮಕ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ

KannadaprabhaNewsNetwork |  
Published : Aug 19, 2024, 12:48 AM ISTUpdated : Aug 19, 2024, 04:56 AM IST
ರಾಹುಲ್‌ | Kannada Prabha

ಸಾರಾಂಶ

ಕೇಂದ್ರ ಸರ್ಕಾರವು ನಾಗರಿಕ ಸೇವೆಗಳಿಗೆ ಖಾಸಗಿ ವಲಯದ ವ್ಯಕ್ತಿಗಳನ್ನು ನೇರವಾಗಿ ನೇಮಿಸಿಕೊಳ್ಳುವುದಕ್ಕೆ ಮುಂದಾಗಿರುವುದು ದೇಶ ವಿರೋಧಿ ಹೆಜ್ಜೆಯಾಗಿದೆ.

ನವದೆಹಲಿ: ಕೇಂದ್ರ ಸರ್ಕಾರವು ನಾಗರಿಕ ಸೇವೆಗಳಿಗೆ ಖಾಸಗಿ ವಲಯದ ವ್ಯಕ್ತಿಗಳನ್ನು ನೇರವಾಗಿ ನೇಮಿಸಿಕೊಳ್ಳುವುದಕ್ಕೆ ಮುಂದಾಗಿರುವುದು ದೇಶ ವಿರೋಧಿ ಹೆಜ್ಜೆಯಾಗಿದೆ. ಮೀಸಲಾತಿಗಳನ್ನು ಕಸಿಯಲು ಐಎಎಸ್‌ಗಳ ಖಾಸಗೀಕರಣ ಮೋದಿ ಗ್ಯಾರಂಟಿ. ಯುಪಿಎಸ್‌ಸಿ ಬದಲು ಆರ್‌ಎಸ್‌ಎಸ್‌ ಕಚೇರಿ ಮೂಲಕ ಕೇಂದ್ರ ಸರ್ಕಾರ ಅಧಿಕಾರಿಗಳನ್ನು ನೇಮಿಸಿಕೊಳ್ಳುತ್ತಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮೋದಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ಕೇಂದ್ರ ಸರ್ಕಾರದ ಸಚಿವಾಲಯಗಳ ಜಂಟಿ ಕಾರ್ಯದರ್ಶಿ, ನಿರ್ದೇಶಕರರು ಸೇರಿದಂತೆ 45 ವಿವಿಧ ಹುದ್ದೆಗಳ ನೇಮಕಾತಿಗೆ ಮುಂದಾದ ಬೆನ್ನಲ್ಲೇ ರಾಹುಲ್ ಗಾಂಧಿ ಈ ಆರೋಪ ಮಾಡಿದ್ದಾರೆ.

ಎಕ್ಸ್‌ನಲ್ಲಿ ಈ ಕುರಿತು ಸುದೀರ್ಘವಾಗಿ ಬರೆದುಕೊಂಡಿರುವ ರಾಹುಲ್, ‘ಲ್ಯಾಟರಲ್ ಎಂಟ್ರಿ ಮೂಲಕ ಎಸ್‌ಸಿ, ಎಸ್ಟಿ ಮತ್ತು ಒಬಿಸಿ ನೇಮಕಾತಿಯನ್ನು ಕೇಂದ್ರ ಸರ್ಕಾರ ನೇರವಾಗಿ ಕಸಿಯಲು ಪ್ರಯತ್ನಿಸಿದೆ. ಅವಕಾಶ ವಂಚಿತರನ್ನು ದೇಶದ ಉನ್ನತ ಹುದ್ದೆಗಳಿಂದ ಮತ್ತಷ್ಟು ದೂರ ತಳ್ಳಲಾಗುತ್ತಿದೆ. ಇದು ಯುಪಿಎಸ್ಸಿ ಪರೀಕ್ಷೆಗೆ ತಯಾರಾದ ದೇಶದ ಪ್ರತಿಭಾವಂತ ಯುವಕರ ಹಕ್ಕುಗಳ ಕಳ್ಳತನ ಮತ್ತು ಮೀಸಲಾತಿ ಸೇರಿದಂತೆ ಸಾಮಾಜಿಕ ನ್ಯಾಯಗಳನ್ನು ಕಸಿತಯುವ ಪ್ರಯತ್ನ. ಮೀಸಲಾತಿ ಅಂತ್ಯಗೊಳಿಸಲು ಐಎಎಸ್‌ಗಳ ಖಾಸಗೀಕರಣ ಮೋದಿಯ ಗ್ಯಾರಂಟಿ’ ಎಂದಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ರೇರಾದಿಂದ ಬಿಲ್ಡರ್‌ ಮಾತ್ರ ಲಾಭ ಆಗ್ತಿದೆ : ಸುಪ್ರೀಂ ಕಿಡಿ ಆಕ್ಷೇಪ
ರಾಗಾ ವಿರುದ್ಧ ಸಂಸತ್ತಲ್ಲಿ ಬಿಜೆಪಿಯ ಅನರ್ಹತೆ ಅಸ್ತ್ರ