ನವದೆಹಲಿ: ಕೇಂದ್ರ ಸರ್ಕಾರವು ನಾಗರಿಕ ಸೇವೆಗಳಿಗೆ ಖಾಸಗಿ ವಲಯದ ವ್ಯಕ್ತಿಗಳನ್ನು ನೇರವಾಗಿ ನೇಮಿಸಿಕೊಳ್ಳುವುದಕ್ಕೆ ಮುಂದಾಗಿರುವುದು ದೇಶ ವಿರೋಧಿ ಹೆಜ್ಜೆಯಾಗಿದೆ. ಮೀಸಲಾತಿಗಳನ್ನು ಕಸಿಯಲು ಐಎಎಸ್ಗಳ ಖಾಸಗೀಕರಣ ಮೋದಿ ಗ್ಯಾರಂಟಿ. ಯುಪಿಎಸ್ಸಿ ಬದಲು ಆರ್ಎಸ್ಎಸ್ ಕಚೇರಿ ಮೂಲಕ ಕೇಂದ್ರ ಸರ್ಕಾರ ಅಧಿಕಾರಿಗಳನ್ನು ನೇಮಿಸಿಕೊಳ್ಳುತ್ತಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮೋದಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.
ಎಕ್ಸ್ನಲ್ಲಿ ಈ ಕುರಿತು ಸುದೀರ್ಘವಾಗಿ ಬರೆದುಕೊಂಡಿರುವ ರಾಹುಲ್, ‘ಲ್ಯಾಟರಲ್ ಎಂಟ್ರಿ ಮೂಲಕ ಎಸ್ಸಿ, ಎಸ್ಟಿ ಮತ್ತು ಒಬಿಸಿ ನೇಮಕಾತಿಯನ್ನು ಕೇಂದ್ರ ಸರ್ಕಾರ ನೇರವಾಗಿ ಕಸಿಯಲು ಪ್ರಯತ್ನಿಸಿದೆ. ಅವಕಾಶ ವಂಚಿತರನ್ನು ದೇಶದ ಉನ್ನತ ಹುದ್ದೆಗಳಿಂದ ಮತ್ತಷ್ಟು ದೂರ ತಳ್ಳಲಾಗುತ್ತಿದೆ. ಇದು ಯುಪಿಎಸ್ಸಿ ಪರೀಕ್ಷೆಗೆ ತಯಾರಾದ ದೇಶದ ಪ್ರತಿಭಾವಂತ ಯುವಕರ ಹಕ್ಕುಗಳ ಕಳ್ಳತನ ಮತ್ತು ಮೀಸಲಾತಿ ಸೇರಿದಂತೆ ಸಾಮಾಜಿಕ ನ್ಯಾಯಗಳನ್ನು ಕಸಿತಯುವ ಪ್ರಯತ್ನ. ಮೀಸಲಾತಿ ಅಂತ್ಯಗೊಳಿಸಲು ಐಎಎಸ್ಗಳ ಖಾಸಗೀಕರಣ ಮೋದಿಯ ಗ್ಯಾರಂಟಿ’ ಎಂದಿದ್ದಾರೆ.