ಏ.6ರಂದು ರಾಮನವಮಿ ಸಂದರ್ಭದಲ್ಲಿ ಪಾಂಬನ್‌ ಸೇತುವೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

KannadaprabhaNewsNetwork |  
Published : Mar 27, 2025, 01:07 AM ISTUpdated : Mar 27, 2025, 04:42 AM IST
ಪಂಬನ್ ಸೇತುವೆ  | Kannada Prabha

ಸಾರಾಂಶ

ಏ.6ರಂದು ರಾಮನವಮಿ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಿಂದೂಗಳ ಪವಿತ್ರ ಕ್ಷೇತ್ರ ರಾಮೇಶ್ವರಂ ಅನ್ನು ಸಂಪರ್ಕಿಸುವ ನೂತನ ಪಾಂಬನ್‌ ರೈಲ್ವೆ ಸೇತುವೆಯನ್ನು ಉದ್ಘಾಟಿಸಲಿದ್ದಾರೆ.

ರಾಮೇಶ್ವರಂ: ಏ.6ರಂದು ರಾಮನವಮಿ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಿಂದೂಗಳ ಪವಿತ್ರ ಕ್ಷೇತ್ರ ರಾಮೇಶ್ವರಂ ಅನ್ನು ಸಂಪರ್ಕಿಸುವ ನೂತನ ಪಾಂಬನ್‌ ರೈಲ್ವೆ ಸೇತುವೆಯನ್ನು ಉದ್ಘಾಟಿಸಲಿದ್ದಾರೆ.

ಈ ಹಿಂದೆ 1914ರಲ್ಲಿ ನಿರ್ಮಿತ ರೈಲ್ವೆ ಸೇತುವೆಯ ಮೂಲಕ ರಾಮೇಶ್ವರಂಗೆ ರೈಲು ಸಂಪರ್ಕ ಕಲ್ಪಿಸಲಾಗಿತ್ತು. ಆದರೆ ಆ ಸೇತುವೆ ಶಿಥಿಲಗೊಂಡ ಕಾರಣ 2022ರಲ್ಲಿ ರೈಲು ಸಂಪರ್ಕ ಕಡಿತಗೊಳಿಸಲಾಗಿತ್ತು. ಅದರ ಸಮೀಪದಲ್ಲೇ ಹೊಸ ಸೇತುವೆ ನಿರ್ಮಾಣ ಕಾರ್ಯ ನಡೆದು ಇದೀಗ ಪೂರ್ಣಗೊಂಡಿದೆ.

ಈಗಾಗಲೇ ಈ 2 ಕಿ.ಮೀ. ಉದ್ದದ ಸೇತುವೆಯಲ್ಲಿ ರೈಲುಗಳ ಪ್ರಾಯೋಗಿಕ ಸಂಚಾರ ಆರಂಭವಾಗಿದೆ. ಅಂದು ರೈಲು ಸಂಚಾರಕ್ಕೂ ಮೋದಿ ಅವರು ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.

ಸೇತವೆ ವೈಶಿಷ್ಟ್ಯ:

ಇದು ಭಾರತದ ಮೊದಲ ವರ್ಟಿಕಲ್‌ ರೈಲ್ವೆ ಬ್ರಿಡ್ಜ್‌ ಆಗಲಿದೆ. ಸಮುದ್ರಮಾರ್ಗದಲ್ಲಿ ಹಡಗುಗಳ ಸಂಚಾರ ವೇಳೆ ಸೇತುವೆಯು ಮೇಲಕ್ಕೆತ್ತಲ್ಪಟ್ಟು, ಬಳಿಕ ಅದು ಸ್ವಸ್ಥಾನಕ್ಕೆ ಮರಳಿ ರೈಲು ಸಂಚಾರಕ್ಕೆ ಅನುವು ಮಾಡಿಕೊಡುವ ವ್ಯವಸ್ಥೆ ಇದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಬಂಗಾಳಕೊಲ್ಲೀಲಿ ವಾಯುಭಾರ ಕುಸಿತ : ಭಾರೀ ಮಳೆ ಎಚ್ಚರಿಕೆ
ಜಿ ರಾಮ್‌ ಜಿ ವಿರುದ್ಧ ಕೈ ಹೋರಾಟ ಶುರು