ಪಾಕ್‌ ವಿರುದ್ಧ ರಾಜತಾಂತ್ರಿಕ ಸಮರ ಶುರು

KannadaprabhaNewsNetwork |  
Published : May 22, 2025, 01:23 AM ISTUpdated : May 22, 2025, 10:43 AM IST
ಮೋದಿ | Kannada Prabha

ಸಾರಾಂಶ

ಆಪರೇಷನ್ ಸಿಂದೂರ ಕಾರ್ಯಾಚರಣೆ ಬಳಿಕ ಇದೀಗ, ಅಂತಾರಾಷ್ಟ್ರೀಯ ಸಮುದಾಯದ ಮುಂದೆ ಉಗ್ರಪೋಷಕ ಪಾಕಿಸ್ತಾನದ ನಿಜಬಣ್ಣ ಬಯಲು ಮಾಡುವ ರಾಜತಾಂತ್ರಿಕ ದಾಳಿಗೆ ಭಾರತ ಇದೀಗ ಅಧಿಕೃತ ಚಾಲನೆ ನೀಡಿದೆ.

ನವದೆಹಲಿ: ಆಪರೇಷನ್ ಸಿಂದೂರ ಕಾರ್ಯಾಚರಣೆ ಬಳಿಕ ಇದೀಗ, ಅಂತಾರಾಷ್ಟ್ರೀಯ ಸಮುದಾಯದ ಮುಂದೆ ಉಗ್ರಪೋಷಕ ಪಾಕಿಸ್ತಾನದ ನಿಜಬಣ್ಣ ಬಯಲು ಮಾಡುವ ರಾಜತಾಂತ್ರಿಕ ದಾಳಿಗೆ ಭಾರತ ಇದೀಗ ಅಧಿಕೃತ ಚಾಲನೆ ನೀಡಿದೆ. 

ವಿಶ್ವಮಟ್ಟದಲ್ಲಿ ಪಾಕಿಸ್ತಾನದ ವಿರುದ್ಧ ಅಭಿಪ್ರಾಯ ರೂಪಿಸುವ ಪ್ರಯತ್ನದ ಭಾಗವಾಗಿ ಕೇಂದ್ರ ಸರ್ಕಾರ ರಚಿಸಿರುವ ಸರ್ವಪಕ್ಷಗಳ ಸಂಸದರ ಏಳು ನಿಯೋಗಗಳ ಪೈಕಿ 2 ತಂಡಗಳು ಪ್ರವಾಸ ಆರಂಭಿಸಿವೆ.

ಜೆಡಿಯು ಮುಖಂಡ ಸಂಜಯ್‌ ಕುಮಾರ್ ಝಾ ನೇತೃತ್ವದ ಮೊದಲ ತಂಡ ಬುಧವಾರ ಜಪಾನ್‌ಗೆ ತೆರಳಿದೆ. ಜಪಾನ್‌ ಭೇಟಿ ಬಳಿಕ ಈ ನಿಯೋಗವು ಮೇ 24ರಂದು ದಕ್ಷಿಣ ಕೊರಿಯಾ, ಮೇ 27 ಸಿಂಗಾಪುರ, ಮೇ 28 ಇಂಡೋನೇಷ್ಯಾ, ಮೇ 31ರಂದು ಮಲೇಷ್ಯಾಗೆ ತೆರಳಲಿದೆ.

ಈ ರೀತಿ 2ನೇ ತಂಡ ಶಿವಸೇನೆ ಸಂಸದ ಶ್ರೀಕಾಂತ್‌ ಶಿಂದೆ ನೇತೃತ್ವದ ಇನ್ನೊಂದು ನಿಯೋಗವು ಸಂಜೆ ವೇಳೆಗೆ ಯುಎಇಗೆ ಪ್ರಯಾಣ ಆರಂಭಿಸಲಿದೆ. ಆ ಬಳಿಕ ಲೈಬೀರಿಯಾ, ಕಾಂಗೋ ಮತ್ತು ಸಿಯಾರಾ ಲಿಯೋನ್‌ಗೂ ಈ ತಂಡ ಭೇಟಿ ನೀಡಲಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಸಿದ್ದು ಆಪ್ತ 20 ಶಾಸಕರಿಗೆಜಾರಕಿಹೊಳಿ ಔತಣಕೂಟ : ಬೆಳಗಾವೀಲೂ ಗರಿಗೆದರಿದ ಬಣ ರಾಜಕೀಯ
ದಿಲ್ಲಿಯಲ್ಲಿ ಜ.1ರಿಂದ ಕೇಂದ್ರದ ಭಾರತ್‌ ಟ್ಯಾಕ್ಸಿ ಸಂಚಾರ