ಕಾಶ್ಮೀರಕ್ಕೆ ಭೇಟಿ : ಭದ್ರತೆ ಪರಿಶೀಲಿಸಿದ ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ

KannadaprabhaNewsNetwork |  
Published : Apr 25, 2025, 11:49 PM ISTUpdated : Apr 26, 2025, 04:57 AM IST
ಉಪೇಂದ್ರ  | Kannada Prabha

ಸಾರಾಂಶ

ಪಹಲ್ಗಾಂ ಭಯೋತ್ಪಾದಕ ದಾಳಿ ಬೆನ್ನಲ್ಲೇ, ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ ಅವರು ಶುಕ್ರವಾರ ಕಾಶ್ಮೀರಕ್ಕೆ ಭೇಟಿ ಭದ್ರತೆ ಪರಿಶೀಲನಾ ಸಭೆ ನಡೆಸಿದ್ದಾರೆ.

ಶ್ರೀನಗರ: ಪಹಲ್ಗಾಂ ಭಯೋತ್ಪಾದಕ ದಾಳಿ ಬೆನ್ನಲ್ಲೇ, ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ ಅವರು ಶುಕ್ರವಾರ ಕಾಶ್ಮೀರಕ್ಕೆ ಭೇಟಿ ಭದ್ರತೆ ಪರಿಶೀಲನಾ ಸಭೆ ನಡೆಸಿದ್ದಾರೆ.

ಈ ವೇಳೆ ಮಾತನಾಡಿದ ಜಮ್ಮು ಕಾಶ್ಮೀರ ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ, ‘ಪಹಲ್ಗಾಂ ದಾಳಿ ಹಿಂದಿರುವ ಪ್ರತಿಯೊಬ್ಬ ಉಗ್ರನನ್ನು ಬೇಟೆಯಾಡಿ, ಆ ಹೇಯ ಕೃತ್ಯಕ್ಕೆ ಭಾರೀ ಬೆಲೆ ತೆರುವಂತೆ ಮಾಡಬೇಕು. ಅಂತೆಯೇ, ಉಗ್ರರು ನಿರ್ಮಿಸಿಕೊಂಡಿರುವ ಮೂಲಸೌಕರ್ಯಗಳನ್ನು ಹೊಸಕಿಹಾಕಬೇಕು’ ಎಂದು ಅಬ್ಬರಿಸಿದ್ದಾರೆ.

‘ಭಾರತೀಯ ಸೇನೆ, ಪೊಲೀಸರು ಮತ್ತು ಸಿಎಪಿಎಫ್‌(ಕೇಂದ್ರ ಸಶಸ್ತ್ರ ಪೊಲೀಸ್ ಪಡೆ) ಸಿಬ್ಬಂದಿಯ ಧೈರ್ಯದ ಮೇಲೆ ಜನರಿಗೆ ಪೂರ್ಣ ವಿಶ್ವಾಸವಿದೆ. ಎಲ್ಲಾ ಪಡೆಗಳು ಒಟ್ಟಾಗಿ ದಾಳಿಕೊರರು ಮತ್ತು ಸಂಚುಕೋರರನ್ನು ಗುರುತಿಸಿ ಹೊಡೆದುಹಾಕಬೇಕು’ ಎಂದು ಸೇನೆಯ ಉನ್ನತ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಮೋದಿ ಜತೆ ಪ್ರಿಯಾಂಕಾ ಗಾಂಧಿ ಆತ್ಮೀಯ ಮಾತು!
ಬಾಂಗ್ಲಾ ಹಿಂದು ಯುವಕನ ನರಮೇಧ - ಬಡಿದು ಕೊಂದು, ಮರಕ್ಕೆ ಕಟ್ಟಿ ಸುಟ್ಟು ಅಟ್ಟಹಾಸ