- ಮಿಲಿಟರಿ ಮಾತುಕತೆಯಿಂದಲೇ ಯುದ್ಧ ನಿಂತಿದ್ದು: ದಾರ್
ಸಂದರ್ಶನದಲ್ಲಿ ಈ ಬಗ್ಗೆ ಸ್ಪಷ್ಟಪಡಿಸಿರುವ ದಾರ್, ‘ನಮಗೆ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆ ಬಗ್ಗೆ ಅಭ್ಯಂತರವಿರಲಿಲ್ಲ. ಆದರೆ ಇದು ದ್ವಿಪಕ್ಷೀಯ ವಿಷಯ ಎಂದು ಭಾರತ ಸ್ಪಷ್ಟವಾಗಿ ಹೇಳಿತ್ತು. ಜು.25ರಂದು ವಾಷಿಂಗ್ಟನ್ನಲ್ಲಿ ಅಮೆರಿಕದ ವಿದೇಶಾಂಗ ಸಚಿವ ಮಾರ್ಕೊ ರುಬಿಯೊ ಅವರನ್ನು ಭೇಟಿಯಾದಾಗ ಈ ವಿಚಾರದ ಬಗ್ಗೆ ಕೇಳಿದ್ದೆವು. ಆಗ ಅವರು ಭಾರತ ಇದು ದ್ವಿಪಕ್ಷೀಯ ವಿಷಯ ಎಂದು ಹೇಳುತ್ತದೆ. ಮಧ್ಯಸ್ಥಿಕೆಗೆ ಒಪ್ಪಿರಲಿಲ್ಲ ಎಂದು ಹೇಳಿದ್ದರು’ ಎಂದು ನುಡಿದ್ದಾರೆ.
ಅಲ್ಲದೇ ಯುದ್ಧ ನಿಲ್ಲಿಸಿದ್ದು ನಾನೇ ಎನ್ನುವ ಟ್ರಂಪ್ ಹೇಳಿಕೆ ಟೀಕಿಸಿರುವ ದಾರ್, ‘ಎರಡೂ ದೇಶಗಳ ಮಿಲಿಟರಿ ನಡುವಿನ ಮಾತುಕತೆಯ ಬಳಿಕ ಕದನ ವಿರಾಮಕ್ಕೆ ಬರಲಾಯಿತು’ ಎಂದು ಸ್ಪಷ್ಟಪಡಿಸಿದ್ದಾರೆ.