ಪಾಕ್‌ ಸೇನಾ ಮುಖ್ಯಸ್ಥ ಕಾಣೆ! ಬಂಕರ್‌ನಲ್ಲಿ ಅಡಗಿರುವ ವದಂತಿ

KannadaprabhaNewsNetwork |  
Published : Apr 28, 2025, 12:50 AM ISTUpdated : Apr 28, 2025, 07:45 AM IST
ಅಸೀಂ ಮುನೀರ್‌ | Kannada Prabha

ಸಾರಾಂಶ

 ಪಾಕ್‌ನ ಸೇನಾ ಮುಖ್ಯಸ್ಥ ಅಸೀಂ ಮುನೀರ್‌ ಇದ್ದಕ್ಕಿದ್ದಂತೆ ಕಾಣೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

ಇಸ್ಲಾಮಾಬಾದ್‌: ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಭೀಕರ ಉಗ್ರದಾಳಿಯ ಹಿಂದೆ ಪಾಕಿಸ್ತಾನ ಪ್ರಾಯೋಜಿತ ಉಗ್ರರ ಕೈವಾಡವಿರುವುದು ಖಚಿತವಾಗುವಂತಹ ಬೆಳವಣಿಗೆಗಳ ನಡುವೆಯೇ, ಪಾಕ್‌ನ ಸೇನಾ ಮುಖ್ಯಸ್ಥ ಅಸೀಂ ಮುನೀರ್‌ ಇದ್ದಕ್ಕಿದ್ದಂತೆ ಕಾಣೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

ಒಂದು ಕಡೆ ಪಹಲ್ಗಾಂ ದಾಳಿ ಬಳಿಕ ಭಾರತ ಪಾಕಿಸ್ತಾನದ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಆರಂಭಿಸಿದ್ದರೆ, ಅತ್ತ ಪಾಕಿಸ್ತಾನದಲ್ಲೇ ಮುನೀರ್‌ ವಿರುದ್ಧ ಅಲ್ಲಿನ ಜನ ತಿರುಗಿಬಿದ್ದಿದ್ದಾರೆ ಹಾಗೂ ಅವರ ರಾಜೀನಾಮೆಗೂ ಆಗ್ರಹಿಸುತ್ತಿದ್ದಾರೆ. ಏತನ್ಮಧ್ಯೆ ಅವರು ನಾಪತ್ತೆಯಾಗಿದ್ದು, ರಾವಲ್ಪಿಂಡಿಯ ಬಂಕರ್‌ನಲ್ಲಿ ಅಡಗಿ ಕುಳಿತಿರುವ ಸಾಧ್ಯತೆಯಿದೆ ಎನ್ನಲಾಗಿದೆ. ಮತ್ತೊಂದೆಡೆ ಅವರ ಪರಿವಾರ ದೇಶ ತೊರೆದಿದೆ ಎಂದೂ ಹೇಳಲಾಗುತ್ತಿದೆ.

ಇತ್ತೀಚೆಗಷ್ಟೇ, ‘ಕಾಶ್ಮೀರ ನಮ್ಮ ಕಂಠನಾಳವಿದ್ದಂತೆ. ಅದನ್ನು ನಾವು ಎಂದೂ ಮರೆಯುವುದಿಲ್ಲ. ನಾವು ಹಿಂದೂಗಳಿಗಿಂತ ಎಲ್ಲಾ ವಿಧದಲ್ಲೂ ಭಿನ್ನರು. ಆದ್ದರಿಂದಲೇ ದೇಶ ವಿಭಜನೆಯಾಗಿದ್ದು’ ಎಂದು ಮುನೀರ್‌ ಹೇಳಿದ್ದರು. ಅವರ ಈ ಭಾಷಣವೇ ಉಗ್ರರಿಗೆ ಹಿಂದೂಗಳನ್ನು ಗುರಿಯಾಗಿಸಿ ದಾಳಿ ಮಾಡಲು ಪ್ರಚೋದನೆ ನೀಡಿತ್ತು ಎಂಬ ವಿಶ್ಲೇಷಣೆಗಳೂ ಇವೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಸಿದ್ದು ಆಪ್ತ 20 ಶಾಸಕರಿಗೆಜಾರಕಿಹೊಳಿ ಔತಣಕೂಟ : ಬೆಳಗಾವೀಲೂ ಗರಿಗೆದರಿದ ಬಣ ರಾಜಕೀಯ
ದಿಲ್ಲಿಯಲ್ಲಿ ಜ.1ರಿಂದ ಕೇಂದ್ರದ ಭಾರತ್‌ ಟ್ಯಾಕ್ಸಿ ಸಂಚಾರ