ವಿಶ್ವಕ್ಕೆ ಭಾರತ ಭರವಸೆಯ ಆಶಾಕಿರಣ: ನರೇಂದ್ರ ಮೋದಿ

KannadaprabhaNewsNetwork |  
Published : Jan 11, 2024, 01:30 AM ISTUpdated : Jan 11, 2024, 10:47 AM IST
ಪ್ರಧಾನಿ ಮೋದಿ | Kannada Prabha

ಸಾರಾಂಶ

ವಿಶ್ವಕ್ಕೆ ಭಾರತ ವಿಶ್ವಾಸಾರ್ಹ ಸ್ನೇಹಿತನಾಗಿದ್ದು, ಭಾರತ 3ನೇ ದೊಡ್ಡ ಆರ್ಥಿಕತೆಯಾಗಲಿದೆ ಎಂದು ವಿಶ್ವದ ಏಜೆನ್ಸಿಗಳು ಗ್ಯಾರಂಟಿ ಕೊಟ್ಟಿವೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ನವದೆಹಲಿ: ಜಗತ್ತಿನ ಅನೇಕ ಅನೇಕ ಅನಿಶ್ಚಿತ ಸಮಸ್ಯೆಗಳ ನಡುವೆ ಭಾರತವು ಜಾಗತಿಕವಾಗಿ ಹೊಸ ಭರವಸೆಯ ಆಶಾಕಿರಣವಾಗಿ ಮತ್ತು ವಿಶ್ವಮಿತ್ರನಾಗಿ ಹೊರಹೊಮ್ಮಿದೆ. ಅಲ್ಲದೇ ಜಗತ್ತು ಭಾರತವನ್ನು ತನ್ನ ವಿಶ್ವಾಸಾರ್ಹ ಸ್ನೇಹಿತ ಮತ್ತು ಅಭಿವೃದ್ಧಿಯ ಎಂಜಿನ್‌ ಆಗಿ ನೋಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬುಧವಾರ ವೈಬ್ರಂಟ್ ಗುಜರಾತ್ ಗ್ಲೋಬಲ್ ಶೃಂಗಸಭೆಯ 10 ನೇ ಆವೃತ್ತಿಯನ್ನು ಉದ್ಘಾಟಿಸಿ ಮಾತನಾಡಿದ ಮೋದಿ, ‘ವೇಗವಾಗಿ ಬದಲಾಗುತ್ತಿರುವ ಜಗತ್ತಿನಲ್ಲಿ ಭಾರತವು ವಿಶ್ವಮಿತ್ರನಾಗಿ ಮುನ್ನಡೆಯುತ್ತಿದೆ. 

ನಾವು ಗುರಿಗಳನ್ನು ನಿರ್ಧರಿಸಬಹುದು ಮತ್ತು ಅವುಗಳನ್ನು ಸಾಧಿಸಬಹುದು ಎಂಬ ಭರವಸೆಯನ್ನು ಭಾರತ ಜಗತ್ತಿಗೆ ತೋರಿಸಿಕೊಟ್ಟಿದೆ. ವಿಶ್ವ ಕಲ್ಯಾಣಕ್ಕಾಗಿ ಭಾರತದ ಬದ್ಧತೆ, ಅದರ ಸಮರ್ಪಣೆ, ಪ್ರಯತ್ನಗಳು ಮತ್ತು ಕಠಿಣ ಪರಿಶ್ರಮವು ಪ್ರಪಂಚವನ್ನು ಹೆಚ್ಚು ಸುರಕ್ಷಿತ ಮತ್ತು ಸಮೃದ್ಧವಾಗಿಸಿದೆ’ ಎಂದಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಬಂಗಾಳದಲ್ಲಿ ಶೀಘ್ರ ಜಂಗಲ್‌ ರಾಜ್ಯ ಅಂತ್ಯ : ಮೋದಿ ಪಣ
ಈಗ ತೆಲಂಗಾಣದಲ್ಲೂ ದ್ವೇಷ ಭಾಷಣ ನಿಷೇಧ ಕಾಯ್ದೆ: ರೆಡ್ಡಿ