ಇದು ಅಸುರಿ ಶಕ್ತಿ - ದೈವಿಕ ಶಕ್ತಿ ನಡುವಿನ ಯುದ್ಧ: ಕಾಂಗ್ರೆಸ್‌

KannadaprabhaNewsNetwork |  
Published : Mar 19, 2024, 12:48 AM ISTUpdated : Mar 19, 2024, 08:12 AM IST
Pawan Khera

ಸಾರಾಂಶ

ಯಾವ ಶಕ್ತಿ ದೇಶ ಆಳಲಿದೆ ಎಂದು ಜನ ನಿರ್ಧರಿಸ್ತಾರೆ ಎನ್ನುವ ಮೂಲಕ ಪ್ರಧಾನಿ ಮೋದಿ ರಾಹುಲ್‌ ಗಾಂಧಿ ಅವರ ಅಸುರಿ ಶಕ್ತಿ ಹೇಳಿಕೆಗೆ ಟಾಂಗ್‌ ನೀಡಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯನ್ನು ಟೀಕಿಸುವ ಭರದಲ್ಲಿ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ, ‘ನಮ್ಮ ಹೋರಾಟ ಶಕ್ತಿಯ (ಸರ್ಕಾರದ ಬಲಪ್ರಯೋಗ) ವಿರುದ್ಧ’ ಎಂದು ನೀಡಿದ ಹೇಳಿಕೆ ಬಿಜೆಪಿ-ಕಾಂಗ್ರೆಸ್‌ ನಡುವೆ ಘೋರ ವಾಕ್ಸಮರಕ್ಕೆ ನಾಂದಿ ಹಾಡಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ‘ಇದು ಶಕ್ತಿಯ ಸಂಹಾರಕರು ಹಾಗೂ ಶಕ್ತಿಯ ಆರಾಧಕರ ನಡುವಿನ ಯುದ್ಧವಾಗಲಿದೆ’ ಎಂದಿದ್ದಾರೆ. 

ಇದಕ್ಕೆ ಕಾಂಗ್ರೆಸ್‌ ವಕ್ತಾರ ಪವನ್‌ ಖೇರಾ ತಿರುಗೇಟು ನೀಡಿ, ‘ಈ ದೇಶವನ್ನು ಅಸುರೀ ಶಕ್ತಿ ಆಳಲಿದೆಯೋ ಅಥವಾ ದೈವೀ ಶಕ್ತಿ ಆಳಲಿದೆಯೋ ಎಂಬುದನ್ನು ಜನರು ಚುನಾವಣೆಯಲ್ಲಿ ನಿರ್ಧರಿಸಲಿದ್ದಾರೆ’ ಎಂದಿದ್ದಾರೆ.

ರಾಹುಲ್‌ ಗಾಂಧಿ ಪ್ರತಿಕ್ರಿಯಿಸಿ, ‘ನಾನು ಹೇಳಿದ ಶಕ್ತಿ ಎಂಬ ಪದದ ಅರ್ಥ ಹಿಂದೂ ದೇವರಿಗೆ ಸಂಬಂಧಿಸಿದ್ದಲ್ಲ. ಆದರೆ ಅಧರ್ಮ, ಭ್ರಷ್ಟಾಚಾರ, ಅಸತ್ಯದ ಶಕ್ತಿಯ ವಿರುದ್ಧ. ಮೋದಿ ಹಾಗೂ ಬಿಜೆಪಿಗರು ಪದೇ ಪದೇ ಹೇಳಿಕೆ ತಿರುಚುವ ಚಾಳಿ ಹೊಂದಿದ್ದಾರೆ. 

ಕೇಂದ್ರ ಸರ್ಕಾರವು ಸಾಂವಿಧಾನಿಕ ಸಂಸ್ಥೆಗಳ ಮೇಲೆ ಮಾಡುತ್ತಿರುವ ಬಲಪ್ರಯೋಗ ಹಾಗೂ ಭ್ರಷ್ಟಾಚಾರದ ಬಗ್ಗೆ ಮಾತಾಡಿದ್ದೇನೆ’ ಎಂದು ಸ್ಪಷ್ಟಪಡಿಸಿದ್ದಾರೆ.

ಇದೇ ವೇಳೆ, ‘ಬಿಜೆಪಿ ನಾಯಕ ಹಾಗೂ ಕುಸ್ತಿ ಸಂಘದ ಅಧ್ಯಕ್ಷ ಬೃಜ್‌ ಭೂಷಣ್‌ ಸಿಂಗ್‌ ಮೇಲೆ ಮಹಿಳಾ ಕುಸ್ತಿ ಪಟುಗಳು ಅತ್ಯಾಚಾರ ಆರೋಪ ಮಾಡಿದರು. ಆಗ ಮೋದಿ ಅವರ ‘ಶಕ್ತಿ’ ಆರಾಧನೆ ಎಲ್ಲಿ ಹೋಗಿತ್ತು?’ ಎಂದು ಪವನ್‌ ಖೇರಾ ಪ್ರಶ್ನಿಸಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಎತ್ತ ಸಾಗುತ್ತಿದೆ ರಾಷ್ಟ್ರದ ವಿಪಕ್ಷಗಳ ಮನೋಸ್ಥಿತಿ..?
ಅಂತರ್ಜಾತಿ ಮದ್ವೆ, ಮತಾಂತರ ಆದ್ರೂ ಜಾತಿ ಬದಲಿಲ್ಲ: ಹೈಕೋರ್ಟ್‌