ಜನರು ತಮ್ಮ ಸಮಸ್ಯೆ ಬಗ್ಗೆ ಕೇಳಬಯಸುವ ಯಾವುದೇ ವಿಷಯಗಳ ಬಗ್ಗೆಯೂ ಪ್ರಧಾನಿ ನರೇಂದ್ರ ಮೋದಿ ತಮ್ಮ ಮನ್ ಕೀ ಬಾತ್ನಲ್ಲಿ ಜನರ ಸಮಸ್ಯೆಗಳ ಬಗ್ಗೆ ಯಾವುದೇ ಪ್ರಸ್ತಾಪ ಮಾಡಿಲ್ಲ ಎಂದು ಕಾಂಗ್ರೆಸ್ ಕಿಡಿಕಾರಿದೆ.
ನವದೆಹಲಿ: ಜನರು ತಮ್ಮ ಸಮಸ್ಯೆ ಬಗ್ಗೆ ಕೇಳಬಯಸುವ ಯಾವುದೇ ವಿಷಯಗಳ ಬಗ್ಗೆಯೂ ಪ್ರಧಾನಿ ನರೇಂದ್ರ ಮೋದಿ ತಮ್ಮ ಮನ್ ಕೀ ಬಾತ್ನಲ್ಲಿ ಜನರ ಸಮಸ್ಯೆಗಳ ಬಗ್ಗೆ ಯಾವುದೇ ಪ್ರಸ್ತಾಪ ಮಾಡಿಲ್ಲ ಎಂದು ಕಾಂಗ್ರೆಸ್ ಕಿಡಿಕಾರಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ವಕ್ತಾರ ಪವನ್ ಖೇರಾ, ‘ಇದು ಮೋದಿ ಅವರ ಮೂರನೇ ಅವಧಿ. ಆದರೆ ಪೂರ್ಣ ಸ್ವಂತ ಬಲದಿಂದ ಅಲ್ಲ. ಹೀಗಾಗಿ ಈ ಬಾರಿಯಾದರೂ ಅವರು ಸ್ವಲ್ಪ ಸಂವೇದನಾಶೀಲರಾಗಿ ಇರುತ್ತಾರೆ ಎಂದು ಅಂದುಕೊಂಡಿದ್ದೆವು. ಆದರೆ ಪ್ರಧಾನಿ ಮೋದಿ ಇತ್ತೀಚಿನ ನೀಟ್ ಪ್ರವೇಶ ಪರೀಕ್ಷೆ ಅಕ್ರಮ, ರೈಲ್ವೆ ಅಪಘಾತ, ಮೂಲಸೌಕರ್ಯ ಕುಸಿತ (ಸೇತುವೆ, ಮೇಲ್ಛಾವಣಿ ಕುಸಿತ)ದ ಬಗ್ಗೆ ಪ್ರಸ್ತಾಪಿಸಿಲ್ಲ.’ ಎಂದು ಟೀಕಿಸಿದರು.
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.