ನ್ಯಾ.ವರಾಳೆ ಸುಪ್ರೀಂಗೆ ನೇಮಕ: ಇಂದು ಪ್ರಮಾಣ ವಚನ ಸ್ವೀಕಾರ

KannadaprabhaNewsNetwork |  
Published : Jan 25, 2024, 02:00 AM IST
ಸುಪ್ರೀಂ ಕೋರ್ಟ್‌ | Kannada Prabha

ಸಾರಾಂಶ

ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯಾಗಿ ಪ್ರಸನ್ನ ಬಿ ವರಾಳೆ ಅವರು ಗುರುವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರು ಪ್ರಸ್ತುತ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯ ನಿರ್ವಹಿಸಿದ್ದರು.

ನವದೆಹಲಿ: ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಧೀಶರಾಗಿದ್ದ ನ್ಯಾ.ಪ್ರಸನ್ನ ವರಾಳೆ ಅವರನ್ನು ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾಗಿ ಕೇಂದ್ರ ಸರ್ಕಾರ ಬುಧವಾರ ನೇಮಕ ಮಾಡಿದೆ.

ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ನ್ಯಾ. ವರಾಳೆ ಅವರ ಪದೋನ್ನತಿಗೆ ಇತ್ತೀಚೆಗಷ್ಟೇ ಕೊಲಿಜಿಯಂ ಶಿಫಾರಸು ಮಾಡಿತ್ತು.

ಅದನ್ನು ಅನುಮೋದಿಸಿರುವ ಕೇಂದ್ರ ಸರ್ಕಾರ ವರಾಳೆ ಅವರನ್ನು ನೇಮಕ ಮಾಡಿ ಬುಧವಾರ ಅಧಿಸೂಚನೆ ಹೊರಡಿಸಿದೆ.

ಇದರೊಂದಿಗೆ ಸುಪ್ರೀಂಕೋಟ್‌ರ್ಗೆ ಮಂಜೂರಾಗಿರುವ ಎಲ್ಲಾ 34 ಹುದ್ದೆಗಳು ಭರ್ತಿ ಆದಂತೆ ಆಗಿದೆ.

ನ್ಯಾ. ಎಸ್‌.ಕೆ.ಕೌಲ್‌ ಅವರು ಕಳೆದ ತಿಂಗಳು ನಿವೃತ್ತಿಯಾದ ಸ್ಥಳಕ್ಕೆ ವರಾಳೆ ಅವರನ್ನು ನೇಮಿಸಲಾಗಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಶಬರಿಮಲೆ ಚಿನ್ನಕನ್ನ: ಕಾಂತಾರ ನಟಗೆ ಇ.ಡಿ. ಸಮನ್ಸ್‌
ಐಎಎಸ್‌, ಐಎಫ್ಎಸ್‌ಗಳಿಗೆ ಯುಪಿಎಸ್ಸಿ 2ನೇ ಚಾನ್ಸ್‌ ಇಲ್ಲ- ಯುಪಿಎಸ್ಸಿ ನಿಯಮ ಬದಲು