ಮಣಿಪುರದಲ್ಲಿ ಮತ್ತೆ ಹಿಂಸಾಚಾರ

KannadaprabhaNewsNetwork |  
Published : Jun 09, 2025, 01:26 AM IST
ಮಣಿಪುರ ಹಿಂಸೆ  | Kannada Prabha

ಸಾರಾಂಶ

ಮೈತೇಯಿ ಸಮುದಾಯದ ಆರಂಬಾಯ್‌ ಟೆಂಗೋಲ್‌ ಗುಂಪಿನ ನಾಯಕನನ್ನು ಬಂಧನ ಹಿನ್ನೆಲೆಯಲ್ಲಿ ಮಣಿಪುರದಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ತಮ್ಮ ಸಮುದಾಯದ ಪ್ರಮುಖ ನಾಯಕ ಕಣನ್‌ ಸಿಂಗ್‌ ಬಂಧನ ವಿರೋಧಿಸಿ ಮೈತೀಯ ಸಮುದಾಯದವರು ಹಿಂಸಾಚಾರಕ್ಕಿಳಿದಿದ್ದಾರೆ.

ಮೈತೇಯಿ ನಾಯಕನ ಬಂಧನಕ್ಕೆ ವಿರೋಧ

ಟೈರ್‌ ಸುಟ್ಟು, ಬಸ್‌ಗೆ ಬೆಂಕಿ ಹಚ್ಚಿ ಆಕ್ರೋಶ

ಪೆಟ್ರೋಲ್‌ ಸುರಿದು ಆತ್ಮಹತ್ಯೆಯ ಬೆದರಿಕೆ

5 ಜಿಲ್ಲೆಗಳಲ್ಲಿ ಇಂಟರ್ನೆಟ್‌ ಸೇವೆಗಳು ಬಂದ್‌

==

ಇಂಫಾಲ್‌: ಮೈತೇಯಿ ಸಮುದಾಯದ ಆರಂಬಾಯ್‌ ಟೆಂಗೋಲ್‌ ಗುಂಪಿನ ನಾಯಕನನ್ನು ಬಂಧನ ಹಿನ್ನೆಲೆಯಲ್ಲಿ ಮಣಿಪುರದಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ತಮ್ಮ ಸಮುದಾಯದ ಪ್ರಮುಖ ನಾಯಕ ಕಣನ್‌ ಸಿಂಗ್‌ ಬಂಧನ ವಿರೋಧಿಸಿ ಮೈತೀಯ ಸಮುದಾಯದವರು ಹಿಂಸಾಚಾರಕ್ಕಿಳಿದಿದ್ದಾರೆ.

ಈ ನಡುವೆ, ತಮ್ಮ ನಾಯಕನ ಬಂಧನ ವಿರೋಧಿಸಿ ಕೆಲವರು ಮೈಮೇಲೆ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ್ದು, ತೀವ್ರ ಆತಂಕ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಇಂಫಾಲ್‌ ಕಣಿವೆಯ ಐದು ಜಿಲ್ಲೆಗಳಲ್ಲಿ ಇಂಟರ್ನೆಟ್‌ ಸೇವೆಯನ್ನು ಐದು ದಿನಗಳ ಕಾಲ ಸ್ಥಗಿತಗೊಳಿಸಿ, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ತೀವ್ರಗೊಂಡ ಹಿಂಸಾಚಾರ:

ಫೆಬ್ರವರಿ 2024ರಲ್ಲಿ ಮೊಯಿರಂಗ್‌ಥೆನ್‌ನ ಹೆಚ್ಚುವರಿ ಎಸ್ಪಿ ಅಮಿತ್‌ ಮನೆ ಮೇಲೆ ದಾಳಿ ನಡೆಸಿ ಅಪಹರಣ ನಡೆಸಿದ ಪ್ರಕರಣದಲ್ಲಿ ಮೈತೇಯಿ ಸಮುದಾಯದ ನಾಯಕ ಕಣನ್‌ ಸಿಂಗ್‌ ಮೇಲಿದೆ. ಆ ಸಮಯದಲ್ಲಿ ಕಣನ್‌ ಸಿಂಗ್‌ ಪೊಲೀಸ್‌ ಕಮಾಂಡೋ ವಿಭಾಗದ ಹೆಡ್‌ಕಾನ್ಸ್‌ಟೆಬಲ್‌ ಆಗಿದ್ದರು. ಆ ಬಳಿಕ ಅವರನ್ನು ಕರ್ತವ್ಯ ಲೋಪದ ಆರೋಪದ ಮೇರೆಗೆ ಅಮಾನತು ಮಾಡಲಾಗಿತ್ತು.

ಇದೀಗ ಪ್ರಕರಣದಲ್ಲಿ ಕಣನ್‌ ಸಿಂಗ್ ಬಂಧಿಸುತ್ತಿದ್ದಂತೆ ಪ್ರತಿಭಟನಾಕಾರರು ಮೈತೇಯಿ ನಾಯಕನ ಬಿಡುಗಡೆಗೆ ಆಗ್ರಹಿಸಿ ಬೀದಿಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ಅಲ್ಲಲ್ಲಿ ಟೈರ್‌ಗಳು, ಹಳೆಯ ಟೈರ್‌ಗಳನ್ನು ರಸ್ತೆಗೆ ಅಡ್ಡಲಾಗಿ ಇಟ್ಟು ಬೆಂಕಿ ಹಚ್ಚಿದ್ದಲ್ಲದೆ, ಹಲವೆಡೆ ಭದ್ರತಾಪಡೆಗಳ ಜತೆಗೆ ಸಂಘರ್ಷಕ್ಕೂ ಇಳಿದರು. ಪೂರ್ವ ಇಂಪಾಲ್‌ ಜಿಲ್ಲೆಯ ಖುರೈ ಲ್ಯಾಮ್‌ಲಾಂಗ್‌ ಎಂಬಲ್ಲಿ ಗುಂಪೊಂದು ಬಸ್‌ಗೆ ಬೆಂಕಿ ಹಚ್ಚಿದ್ದಾರೆ. ಈ ವೇಳೆ ರಾಜಭವನಕ್ಕೆ ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರನ್ನು ಟಿಯರ್‌ ಗ್ಯಾಸ್‌, ಶೆಲ್‌ ಸಿಡಿಸಿ ಚದುರಿಸುವ ಪ್ರಯತ್ನ ನಡೆಸಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆ : 8 ತಿಂಗಳಲ್ಲಿ ₹3 ಲಕ್ಷ ಹೆಚ್ಚಳ!
ಮಹಾ ವಿಮಾನ ದುರಂತಕ್ಕೆ ಡಿಸಿಎಂ ಅಜಿತ್‌ ಪವಾರ್‌ ಬಲಿ