ಹರಿದ್ವಾರಕ್ಕೆ ಹಿಂದೂಯೇತರರ ಪ್ರವೇಶ ನಿಷೇಧಕ್ಕೆ ಚಿಂತನೆ

Published : Jan 05, 2026, 05:38 AM IST
  haridwar

ಸಾರಾಂಶ

ಉತ್ತರಾಖಂಡ ಸರ್ಕಾರವು ನಗರದ ಪಾವಿತ್ರ್ಯವನ್ನು ಕಾಪಾಡುವ ಉದ್ದೇಶದಿಂದ ಹರಿದ್ವಾರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಿಂದೂಯೇತರರ ಪ್ರವೇಶವನ್ನು ನಿರ್ಬಂಧಿಸುವ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದಾರೆ.

ಹರಿದ್ವಾರ: ಉತ್ತರಾಖಂಡ ಸರ್ಕಾರವು ನಗರದ ಪಾವಿತ್ರ್ಯವನ್ನು ಕಾಪಾಡುವ ಉದ್ದೇಶದಿಂದ ಹರಿದ್ವಾರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಿಂದೂಯೇತರರ ಪ್ರವೇಶವನ್ನು ನಿರ್ಬಂಧಿಸುವ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದಾರೆ.

105 ಗಂಗಾ ಘಾಟ್‌ಗಳಿಗೂ ಈ ನಿರ್ಬಂಧ

ಪ್ರಸ್ತುತ ಹರಿದ್ವಾರ ಮುನ್ಸಿಪಲ್ ಕಾರ್ಪೊರೇಷನ್‌ನ ನಿಯಮಗಳ ಪ್ರಕಾರ, ಹರ್ ಕಿ ಪೌರಿ ಸೇರಿದಂತೆ ಕೆಲವು ಗಂಗಾ ಘಾಟ್‌ಗಳಲ್ಲಿ ಹಿಂದೂಯೇತರರ ಪ್ರವೇಶ ನಿರ್ಬಂಧಿಸಲಾಗಿದೆ. ಹೊಸ ಪ್ರಸ್ತಾವದ ಪ್ರಕಾರ, ಹರಿದ್ವಾರದಿಂದ ಹೃಷಿಕೇಶದವರೆಗಿನ ಎಲ್ಲ 105 ಗಂಗಾ ಘಾಟ್‌ಗಳಿಗೂ ಈ ನಿರ್ಬಂಧ ವಿಸ್ತರಿಸಲಾಗುತ್ತದೆ.

ವಾರ್ಷಿಕ ಸುಮಾರು 4 ಕೋಟಿ ಯಾತ್ರಿಗಳು

 ಹರಿದ್ವಾರಕ್ಕೆ ವಾರ್ಷಿಕ ಸುಮಾರು 4 ಕೋಟಿ ಯಾತ್ರಿಗಳು ಬರುತ್ತಾರೆ. ಇದು ಸ್ಥಳೀಯ ಆರ್ಥಿಕತೆಗೆ ದೊಡ್ಡ ಉತ್ತೇಜನ ನೀಡುತ್ತದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಗಂಗಾ ಘಾಟ್‌ಗಳಲ್ಲಿ ಹಿಂದೂಯೇತರ ಪ್ರವಾಸಿಗರ ಉಪಸ್ಥಿತಿ ಕೆಲವು ವಿವಾದಗಳಿಗೆ ಕಾರಣವಾಗಿದೆ. ಹೀಗಾಗಿ ಸರ್ಕಾರ ನಿರ್ಬಂಧ ವಿಸ್ತರಣೆಗೆ ಮುಂದಾಗಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

2028ರವರೆಗೂ ಸಿದ್ದುವೇ ಸಿಎಂ: ಬೆಂಬಲಿಗರ ಬ್ಯಾಟಿಂಗ್‌
‘ಬನ್ನಿ, ನನ್ನನ್ನೂ ಬಂಧಿಸಿ’: ಮಡುರೋ ರೀತಿ ಟ್ರಂಪ್‌ಗೆ ಕೊಲಂಬಿಯಾ ಅಧ್ಯಕ್ಷ ಸವಾಲ್‌