ರಾಜನಾಥ್‌ ಸಿಂಗ್‌ ಹೇಳಿಕೆ ಪ್ರಚೋದನಾಕಾರಿ: ಪಾಕ್‌

KannadaprabhaNewsNetwork |  
Published : Apr 07, 2024, 01:46 AM ISTUpdated : Apr 07, 2024, 05:30 AM IST
ರಾಜನಾಥಸಿಂಗ್‌ | Kannada Prabha

ಸಾರಾಂಶ

ಭಾರತದಲ್ಲಿ ದುಷ್ಕೃತ್ಯ ಎಸಗುವ ಉಗ್ರರು ಪಾಕಿಸ್ತಾನದೊಳಗೆ ನುಗ್ಗಿದರೂ, ಆ ದೇಶದೊಳಗೆ ನುಗ್ಗಿ ಹೊಡಿತೀವೆ ಎಂಬ ಭಾರತದ ರಕ್ಷಣಾ ಸಚಿವ ರಾಜ್‌ನಾಥ್‌ ಸಿಂಗ್‌ ಹೇಳಿಕೆ ಪ್ರಚೋದನಾಕಾರಿಯಾಗಿದೆ ಮತ್ತು ಶಾಂತಿ ಕದಡುವಂತಿದೆ ಎಂದು ಪಾಕಿಸ್ತಾನ ಪ್ರತಿಕ್ರಿಯೆ ನೀಡಿದೆ.

ನವದೆಹಲಿ: ಭಾರತದಲ್ಲಿ ದುಷ್ಕೃತ್ಯ ಎಸಗುವ ಉಗ್ರರು ಪಾಕಿಸ್ತಾನದೊಳಗೆ ನುಗ್ಗಿದರೂ, ಆ ದೇಶದೊಳಗೆ ನುಗ್ಗಿ ಹೊಡಿತೀವೆ ಎಂಬ ಭಾರತದ ರಕ್ಷಣಾ ಸಚಿವ ರಾಜ್‌ನಾಥ್‌ ಸಿಂಗ್‌ ಹೇಳಿಕೆ ಪ್ರಚೋದನಾಕಾರಿಯಾಗಿದೆ ಮತ್ತು ಶಾಂತಿ ಕದಡುವಂತಿದೆ ಎಂದು ಪಾಕಿಸ್ತಾನ ಪ್ರತಿಕ್ರಿಯೆ ನೀಡಿದೆ.

ಸಿಂಗ್‌ ಹೇಳಿಕೆ ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನದ ವಿದೇಶಾಂಗ ಇಲಾಖೆ, ‘ಭಾರತ ಸರ್ಕಾರ, ಪಾಕಿಸ್ತಾನದೊಳಗಿನ ನಾಗರಿಕರನ್ನು ‘ಉಗ್ರರು’ಎಂದು ಕರೆದು ಅವರನ್ನು ಹತ್ಯೆ ಮಾಡುವುದಾಗಿ ಹೇಳಿರುವುದು ಸ್ಪಷ್ಟವಾಗಿ ತಿಳಿಯುತ್ತದೆ. ಅಂತಾರಾಷ್ಟ್ರೀಯ ಸಮಯದಾಯವು ಭಾರತದ ಈ ಹೀನ ಹಾಗೂ ದುಷ್ಕೃತ್ಯವನ್ನು ತಡೆಯಬೇಕು’ ಎಂದು ಕಿಡಿಕಾರಿದೆ.

ಪಾಕಿಸ್ತಾನದಲ್ಲಿ ಅನಾಮಧೇಯ ವ್ಯಕ್ತಿಗಳಿಂದ ಹತರಾದ 20ಕ್ಕೂ ಹೆಚ್ಚು ಉಗ್ರರ ಸಾವಿಗೆ ಭಾರತ ಕಾರಣ ಎಂದು ಬ್ರಿಟನ್‌ನ ಗಾರ್ಡಿಯನ್‌ ಪತ್ರಿಕೆ ವರದಿಗೆ ಪ್ರತಿಕ್ರಿಯಿಸಿದ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಭಾರತಕ್ಕೆ ತೊಂದರೆ ಕೊಡುವವರು ಪಾಕಿಸ್ತಾನಕ್ಕೆ ತೆರಳಿದರೂ, ಅಲ್ಲೇ ಹೊಗಿ ಕೊಲ್ಲುತ್ತೇವೆ’ ಎಂದಿದ್ದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಕಚ್ಚಾ ತೈಲ ಹೊತ್ತ ಮತ್ತೊಂದು ಹಡಗು ಭಾರತಕ್ಕೆ
ಬಂಗಾಳಕ್ಕೆ ದೀದಿ, ತಮಿಳ್ನಾಡಿಗೆ ಅಣ್ಣಾ, ಅಸ್ಸಾಂಗೆ ಮಾಮಾ, ಕೇರಳಕ್ಕೆ ದಾದಾ!