ನವದೆಹಲಿ: ಲಾಲು ಯಾದವ್ ರೈಲ್ವೆ ಸಚಿವರಾಗಿದ್ದಾಗ ರೈಲ್ವೆ ನೇಮಕಾತಿಯಲ್ಲಿ ಭೂಮಿ ರೂಪದಲ್ಲಿ ಲಂಚ ಪಡೆದುಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ಡಿದೇವಿ ಹಾಗೂ ಅವರ ಪುತ್ರಿ ಮಿಸಾ ಭಾರತಿ ಅವರಿಗೆ ದೆಹಲಿಯ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ರಾಬ್ಡಿದೇವಿ, ಮಿಸಾ ಭಾರತಿ ಮತ್ತು ಹೇಮಾ ಯಾದವ್ಗೆ ಸಮನ್ಸ್ ನೀಡಲಾಗಿದ್ದು, ಈ ಮೂವರನ್ನು ವಿಚಾರಣೆ ನಡೆಸಲು ಸಾಕಷ್ಟು ಕಾರಣಗಳಿವೆ ಎಂದು ಕೋರ್ಟ್ ಹೇಳಿದೆ.
ಅಲ್ಲದೇ ಈ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಉದ್ಯಮಿ ಅಮಿತ್ ಕತ್ಯಾಲ್ರನ್ನು ಹಾಜರು ಪಡಿಸುವಂತೆ ತಿಳಿಸಿದೆ.