ಕೇರಳದಲ್ಲೂ ಕಾಂಗ್ರೆಸ್‌ನಿಂದ ಪಂಚ ಗ್ಯಾರಂಟಿ ಸ್ಕೀಂ ಭರವಸೆ

KannadaprabhaNewsNetwork |  
Published : Mar 08, 2026, 01:45 AM ISTUpdated : Mar 08, 2026, 05:38 AM IST
Congress

ಸಾರಾಂಶ

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಪಂಚ ಗ್ಯಾರಂಟಿ ಘೋಷಿಸಿ ಅಧಿಕಾರಕ್ಕೆ ಬರುವಲ್ಲಿ ಯಶಸ್ವಿಯಾಗಿದ್ದ ಕಾಂಗ್ರೆಸ್‌, ಇದೀಗ ನೆರೆಯ ಕೇರಳದಲ್ಲೂ ಅದೇ ದಾಳ ಪ್ರಯೋಗಿಸಿದೆ. ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಮಹಿಳೆಯರು, ವಿದ್ಯಾರ್ಥಿನಿಯರು, ವೃದ್ಧರು, ಉದ್ಯಮಿಗಳನ್ನು ಗುರಿಯಾಗಿಸಿದ 5 ಯೋಜನೆ

 ತಿರುವನಂತಪುರಂ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಪಂಚ ಗ್ಯಾರಂಟಿ ಘೋಷಿಸಿ ಅಧಿಕಾರಕ್ಕೆ ಬರುವಲ್ಲಿ ಯಶಸ್ವಿಯಾಗಿದ್ದ ಕಾಂಗ್ರೆಸ್‌, ಇದೀಗ ನೆರೆಯ ಕೇರಳದಲ್ಲೂ ಅದೇ ದಾಳ ಪ್ರಯೋಗಿಸಿದೆ. ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಮಹಿಳೆಯರು, ವಿದ್ಯಾರ್ಥಿನಿಯರು, ವೃದ್ಧರು, ಉದ್ಯಮಿಗಳನ್ನು ಗುರಿಯಾಗಿಸಿದ 5 ಯೋಜನೆಗಳನ್ನು ಜಾರಿಗೆ ತರುವುದಾಗಿ ಪಕ್ಷ ಘೋಷಿಸಿದೆ.

ಯುಡಿಎಫ್‌ ಮೈತ್ರಿ ಕೂಟದ ಭಾಗವಾಗಿರುವ ಕಾಂಗ್ರೆಸ್‌

ಕೇರಳದಲ್ಲಿ ಯುಡಿಎಫ್‌ ಮೈತ್ರಿ ಕೂಟದ ಭಾಗವಾಗಿರುವ ಕಾಂಗ್ರೆಸ್‌ ಈ ಘೋಷಣೆ ಮಾಡಿದೆ. ಶನಿವಾರ ಇಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಪಕ್ಷದ ಹಿರಿಯ ನಾಯಕ ರಾಹುಲ್‌ ಗಾಂಧಿ ಪಂಚ ಗ್ಯಾರಂಟಿಗಳನ್ನು ಪ್ರಕಟಿಸಿದರು.

ಏನೇನು ಗ್ಯಾರಂಟಿ?:

ಕರ್ನಾಟಕದ ಶಕ್ತಿ ಯೋಜನೆಯಂತೆ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ, ಕಾಲೇಜು ವಿದ್ಯಾರ್ಥಿನಿಯರಿಗೆ ಮಾಸಿಕ 1 ಸಾವಿರ ರು., ವೃದ್ಧರು, ಅಂಗವಿಕಲರು, ವಿಧವೆಯರು ಸೇರಿದ ವಿವಿಧ ವರ್ಗದವರಿಗೆ ಕಲ್ಯಾಣ ಪಿಂಚಣಿ ಯೋಜನೆ ಮೊತ್ತ 1600 ರು.ನಿಂದ 3 ಸಾವಿರ ರು.ಗೆ ಏರಿಕೆ, ಮಾಜಿ ಸಿಎಂ ಊಮ್ಮನ್ ಚಾಂಡಿ ಹೆಸರಿನಲ್ಲಿ ಅರ್ಹ ಕುಟುಂಬಕ್ಕೆ 25 ಲಕ್ಷ ರು.ತನಕ ಆರೋಗ್ಯ ವಿಮೆ, ಸಣ್ಣ ಉದ್ದಿಮೆದಾರರಿಗೆ 5 ಲಕ್ಷ ರು. ತನಕ ಬಡ್ಡಿ ರಹಿತ ಸಾಲ ನೀಡುವುದಾಗಿ ಕಾಂಗ್ರೆಸ್‌ ಭರವಸೆ ನೀಡಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

2028ರಿಂದ ವೆಹಿಕಲ್‌ ಟು ವೆಹಿಕಲ್‌ ಸಂವಹನ ವ್ಯವಸ್ಥೆ ಕಡ್ಡಾಯ ಜಾರಿ
2,000 ರು,ಗಿಂತ ಮೇಲ್ಪಟ್ಟ ಯುಪಿಐ ಪಾವತಿಗಳ ಮೇಲೆ ಶುಲ್ಕ ಸಂಭವ