ಕೇರಳದಲ್ಲೂ ಕಾಂಗ್ರೆಸ್‌ನಿಂದಪಂಚಗ್ಯಾರಂಟಿ ಸ್ಕೀಂ ಭರವಸೆ

KannadaprabhaNewsNetwork |  
Published : Mar 08, 2026, 01:45 AM IST
ಕಾಂಗ್ರೆಸ್‌  | Kannada Prabha

ಸಾರಾಂಶ

ರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಪಂಚ ಗ್ಯಾರಂಟಿ ಘೋಷಿಸಿ ಅಧಿಕಾರಕ್ಕೆ ಬರುವಲ್ಲಿ ಯಶಸ್ವಿಯಾಗಿದ್ದ ಕಾಂಗ್ರೆಸ್‌, ಇದೀಗ ನೆರೆಯ ಕೇರಳದಲ್ಲೂ ಅದೇ ದಾಳ ಪ್ರಯೋಗಿಸಿದೆ.

ಫ್ರೀ ಬಸ್‌ ಪ್ರಯಾಣ, ₹3000 ಪಿಂಚಣಿ ಸೇರಿ 5 ಭರವಸೆ--1. ಕರ್ನಾಟಕದ ಶಕ್ತಿ ಯೋಜನೆ ರೀತಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ2. ಕಾಲೇಜು ವಿದ್ಯಾರ್ಥಿನಿಯರಿಗೆ ಮಾಸಿಕ 1 ಸಾವಿರ ರು. ಹಣ ವರ್ಗಾವಣೆ3. ವೃದ್ಧರು, ಅಂಗವಿಕಲರು, ವಿಧವೆಯರಿಗೆ ಮಾಸಿಕ 3000 ರು. ಪಿಂಚಣಿ4. ಅರ್ಹ ಕುಟುಂಬಗಳಿಗೆ 25 ಲಕ್ಷ ರು. ತನಕ ಆರೋಗ್ಯ ವಿಮೆ ಸೌಲಭ್ಯ5. ಸಣ್ಣ ಉದ್ದಿಮೆದಾರರಿಗೆ 5 ಲಕ್ಷ ರು. ತನಕ ಬಡ್ಡಿ ರಹಿತ ಸಾಲ ಸೌಕರ್ಯ

ತಿರುವನಂತಪುರಂ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಪಂಚ ಗ್ಯಾರಂಟಿ ಘೋಷಿಸಿ ಅಧಿಕಾರಕ್ಕೆ ಬರುವಲ್ಲಿ ಯಶಸ್ವಿಯಾಗಿದ್ದ ಕಾಂಗ್ರೆಸ್‌, ಇದೀಗ ನೆರೆಯ ಕೇರಳದಲ್ಲೂ ಅದೇ ದಾಳ ಪ್ರಯೋಗಿಸಿದೆ. ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಮಹಿಳೆಯರು, ವಿದ್ಯಾರ್ಥಿನಿಯರು, ವೃದ್ಧರು, ಉದ್ಯಮಿಗಳನ್ನು ಗುರಿಯಾಗಿಸಿದ 5 ಯೋಜನೆಗಳನ್ನು ಜಾರಿಗೆ ತರುವುದಾಗಿ ಪಕ್ಷ ಘೋಷಿಸಿದೆ.

ಕೇರಳದಲ್ಲಿ ಯುಡಿಎಫ್‌ ಮೈತ್ರಿ ಕೂಟದ ಭಾಗವಾಗಿರುವ ಕಾಂಗ್ರೆಸ್‌ ಈ ಘೋಷಣೆ ಮಾಡಿದೆ. ಶನಿವಾರ ಇಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಪಕ್ಷದ ಹಿರಿಯ ನಾಯಕ ರಾಹುಲ್‌ ಗಾಂಧಿ ಪಂಚ ಗ್ಯಾರಂಟಿಗಳನ್ನು ಪ್ರಕಟಿಸಿದರು.

ಏನೇನು ಗ್ಯಾರಂಟಿ?:

ಕರ್ನಾಟಕದ ಶಕ್ತಿ ಯೋಜನೆಯಂತೆ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ, ಕಾಲೇಜು ವಿದ್ಯಾರ್ಥಿನಿಯರಿಗೆ ಮಾಸಿಕ 1 ಸಾವಿರ ರು., ವೃದ್ಧರು, ಅಂಗವಿಕಲರು, ವಿಧವೆಯರು ಸೇರಿದ ವಿವಿಧ ವರ್ಗದವರಿಗೆ ಕಲ್ಯಾಣ ಪಿಂಚಣಿ ಯೋಜನೆ ಮೊತ್ತ 1600 ರು.ನಿಂದ 3 ಸಾವಿರ ರು.ಗೆ ಏರಿಕೆ, ಮಾಜಿ ಸಿಎಂ ಊಮ್ಮನ್ ಚಾಂಡಿ ಹೆಸರಿನಲ್ಲಿ ಅರ್ಹ ಕುಟುಂಬಕ್ಕೆ 25 ಲಕ್ಷ ರು.ತನಕ ಆರೋಗ್ಯ ವಿಮೆ, ಸಣ್ಣ ಉದ್ದಿಮೆದಾರರಿಗೆ 5 ಲಕ್ಷ ರು. ತನಕ ಬಡ್ಡಿ ರಹಿತ ಸಾಲ ನೀಡುವುದಾಗಿ ಕಾಂಗ್ರೆಸ್‌ ಭರವಸೆ ನೀಡಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ನುಡಿದಂತೆ ನಡೆದಿದ್ದಕ್ಕೆಭಾರತಕ್ಕೆ ತೈಲ ಖರೀದಿಅನುಮತಿ: ಅಮೆರಿಕ
9 ದಾಳಿಯಲ್ಲಿ ಬಚಾವ್ ಆಗಿದ್ದ ಖಮೇನಿ ಆಪ್ತ ಖಾನಿ ಇಸ್ರೇಲ್‌ ಗೂಢಚರ?