ಫ್ರೀ ಬಸ್ ಪ್ರಯಾಣ, ₹3000 ಪಿಂಚಣಿ ಸೇರಿ 5 ಭರವಸೆ--1. ಕರ್ನಾಟಕದ ಶಕ್ತಿ ಯೋಜನೆ ರೀತಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ2. ಕಾಲೇಜು ವಿದ್ಯಾರ್ಥಿನಿಯರಿಗೆ ಮಾಸಿಕ 1 ಸಾವಿರ ರು. ಹಣ ವರ್ಗಾವಣೆ3. ವೃದ್ಧರು, ಅಂಗವಿಕಲರು, ವಿಧವೆಯರಿಗೆ ಮಾಸಿಕ 3000 ರು. ಪಿಂಚಣಿ4. ಅರ್ಹ ಕುಟುಂಬಗಳಿಗೆ 25 ಲಕ್ಷ ರು. ತನಕ ಆರೋಗ್ಯ ವಿಮೆ ಸೌಲಭ್ಯ5. ಸಣ್ಣ ಉದ್ದಿಮೆದಾರರಿಗೆ 5 ಲಕ್ಷ ರು. ತನಕ ಬಡ್ಡಿ ರಹಿತ ಸಾಲ ಸೌಕರ್ಯ
ಕೇರಳದಲ್ಲಿ ಯುಡಿಎಫ್ ಮೈತ್ರಿ ಕೂಟದ ಭಾಗವಾಗಿರುವ ಕಾಂಗ್ರೆಸ್ ಈ ಘೋಷಣೆ ಮಾಡಿದೆ. ಶನಿವಾರ ಇಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಪಕ್ಷದ ಹಿರಿಯ ನಾಯಕ ರಾಹುಲ್ ಗಾಂಧಿ ಪಂಚ ಗ್ಯಾರಂಟಿಗಳನ್ನು ಪ್ರಕಟಿಸಿದರು.
ಏನೇನು ಗ್ಯಾರಂಟಿ?:ಕರ್ನಾಟಕದ ಶಕ್ತಿ ಯೋಜನೆಯಂತೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಕಾಲೇಜು ವಿದ್ಯಾರ್ಥಿನಿಯರಿಗೆ ಮಾಸಿಕ 1 ಸಾವಿರ ರು., ವೃದ್ಧರು, ಅಂಗವಿಕಲರು, ವಿಧವೆಯರು ಸೇರಿದ ವಿವಿಧ ವರ್ಗದವರಿಗೆ ಕಲ್ಯಾಣ ಪಿಂಚಣಿ ಯೋಜನೆ ಮೊತ್ತ 1600 ರು.ನಿಂದ 3 ಸಾವಿರ ರು.ಗೆ ಏರಿಕೆ, ಮಾಜಿ ಸಿಎಂ ಊಮ್ಮನ್ ಚಾಂಡಿ ಹೆಸರಿನಲ್ಲಿ ಅರ್ಹ ಕುಟುಂಬಕ್ಕೆ 25 ಲಕ್ಷ ರು.ತನಕ ಆರೋಗ್ಯ ವಿಮೆ, ಸಣ್ಣ ಉದ್ದಿಮೆದಾರರಿಗೆ 5 ಲಕ್ಷ ರು. ತನಕ ಬಡ್ಡಿ ರಹಿತ ಸಾಲ ನೀಡುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ.