ರಾಹುಲ್ ಅಮೇಠಿ ಅಭಿವೃದ್ಧಿಗೆ ಗಮನ ಹರಿಸಲಿಲ್ಲ: ಸ್ಮೃತಿ ಇರಾನಿ

KannadaprabhaNewsNetwork |  
Published : Mar 17, 2024, 01:48 AM ISTUpdated : Mar 17, 2024, 07:57 AM IST
 ಸ್ಮೃತಿ ಇರಾನಿ | Kannada Prabha

ಸಾರಾಂಶ

10 ವರ್ಷದ ಹಿಂದೆ ಕೇಂದ್ರದಲ್ಲಿ ಯುಪಿಎ ಸರ್ಕಾರ ಮತ್ತು ಉತ್ತರ ಪ್ರದೇಶದಲ್ಲಿ ಅವರ ಸಹೋದ್ಯೋಗಿ ಅಖಿಲೇಶ್ ಯಾದವ್ ಸರ್ಕಾರ ಇದ್ದಾಗ ರಾಹುಲ್ ಗಾಂಧಿ ಅಮೇಠಿ ಅಭಿವೃದ್ಧಿಗೆ ಗಮನ ಹರಿಸಲಿಲ್ಲ.

ಅಮೇಠಿ: 10 ವರ್ಷದ ಹಿಂದೆ ಕೇಂದ್ರದಲ್ಲಿ ಯುಪಿಎ ಸರ್ಕಾರ ಮತ್ತು ಉತ್ತರ ಪ್ರದೇಶದಲ್ಲಿ ಅವರ ಸಹೋದ್ಯೋಗಿ ಅಖಿಲೇಶ್ ಯಾದವ್ ಸರ್ಕಾರ ಇದ್ದಾಗ ರಾಹುಲ್ ಗಾಂಧಿ ಅಮೇಠಿ ಅಭಿವೃದ್ಧಿಗೆ ಗಮನ ಹರಿಸಲಿಲ್ಲ. 

50 ವರ್ಷಗಳಲ್ಲಿ ಮಾಡಲಾಗದ ಕೆಲಸಗಳನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಐದು ವರ್ಷದಲ್ಲಿ ಮಾಡಲಾಗಿದೆ. ಕಾಂಗ್ರೆಸ್‌ಗೆ ಇಲ್ಲಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಧೈರ್ಯವಿಲ್ಲ. 

ಅಮೇಠಿ ಕ್ಷೇತ್ರವು ಇಂದು ಅಭಿವೃದ್ಧಿ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿದೆ. ಚುನಾವಣೆಯಲ್ಲಿ ಸೋತ ನಂತರ ಕೊರೋನಾ ಸಮಯದಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ ಎಲ್ಲಿಯೂ ಕಾಣಿಸಿಕೊಂಡಿಲ್ಲ. 

ಅವರು ಅಮೇಠಿಯನ್ನು ಅನಾಥ ಮಾಡಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಅಖಿಲೇಶ್ ಯಾದವ್‌ ಕೂಡ ಕಾಣಿಸಲಿಲ್ಲ, ಅಮೇಠಿಯಲ್ಲಿ ತಮ್ಮೊಂದಿಗೆ ಯಾರೂ ಇಲ್ಲ ಎಂಬುದು ಜನರಿಗೆ ಅರಿವಾಗಿದೆ ಎಂದು ಅಮೇಠಿ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ತಿಳಿಸಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಬೆಂಗಳೂರಿನದ್ದು ಸೇರಿ 16 ಉಪಗ್ರಹಗಳು ಆಗಸದಲ್ಲೇ ಕಾಣೆ
ಅಣ್ಣಾಮಲೈ ರಸಮಲೈ ಎಂದು ರಾಜ್‌ ಠಾಕ್ರೆ ಕೀಳುಭಾಷೆ ಟೀಕೆ