ದೆಹಲಿಯಲ್ಲಿ ಮೇಸ್ತ್ರಿ ಕೆಲಸ ಮಾಡಿದ ರಾಹುಲ್‌ ಗಾಂಧಿ

KannadaprabhaNewsNetwork |  
Published : Jul 05, 2024, 12:49 AM ISTUpdated : Jul 05, 2024, 07:16 AM IST
ರಾಹುಲ್‌ ಗಾಂಧಿ | Kannada Prabha

ಸಾರಾಂಶ

ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ಗುರುವಾರ ಇಲ್ಲಿಯ ಗುರು ತೇಜ್ ಬಹದ್ದೂರ್ ನಗರದಲ್ಲಿ ಕಟ್ಟಡ ಕಾರ್ಮಿಕರನ್ನು ಭೇಟಿ ಮಾಡಿ ಅವರ ಸಮಸ್ಯೆ ಆಲಿಸಿದರು.

ನವದೆಹಲಿ: ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ಗುರುವಾರ ಇಲ್ಲಿಯ ಗುರು ತೇಜ್ ಬಹದ್ದೂರ್ ನಗರದಲ್ಲಿ ಕಟ್ಟಡ ಕಾರ್ಮಿಕರನ್ನು ಭೇಟಿ ಮಾಡಿ ಅವರ ಸಮಸ್ಯೆ ಆಲಿಸಿದರು. ನಂತರ ಕೆಲ ಕಾಲ ಅವರೊಂದಿಗೆ ಕಟ್ಟಡ ನಿರ್ಮಾಣ ಕೆಲಸದಲ್ಲಿ ಭಾಗಿಯಾದರು.

ಈ ಬಗ್ಗೆ ತಮ್ಮ ವಾಟ್ಸಾಪ್ ಚಾನೆಲ್‌ನಲ್ಲಿ ಚಿತ್ರ ಹಂಚಿಕೊಂಡ ರಾಹುಲ್‌ ಗಾಂಧಿ, ‘ಇಂದು ಭಾರತದಲ್ಲಿ ದೈಹಿಕ ಶ್ರಮವನ್ನು ಮಾಡುವ ಕಾರ್ಮಿಕರಿಗೆ ಗೌರವವಿಲ್ಲ, ಆದ್ದರಿಂದ ದೈಹಿಕವಾಗಿ ದುಡಿಮೆಯಲ್ಲಿ ತೊಡಗಿರುವ ಕಾರ್ಮಿಕರಿಗೆ ಸಂಪೂರ್ಣ ಹಕ್ಕುಗಳನ್ನು ಒದಗಿಸುವ ಮೂಲಕ ಗೌರವಿಸುವುದು ತಮ್ಮ ಜೀವನದ ಧ್ಯೇಯ ಎಂದು ತಿಳಿಸಿದ್ದಾರೆ.

ಚುನಾವಣೆ ಸಂದರ್ಭದಲ್ಲೂ ಇದೇ ರೀತಿಯಲ್ಲಿ ಕೆಲವು ಶ್ರಮಿಕರನ್ನು ಭೇಟಿ ಮಾಡಿದ್ದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಸಿದ್ದು ಆಪ್ತ 20 ಶಾಸಕರಿಗೆಜಾರಕಿಹೊಳಿ ಔತಣಕೂಟ : ಬೆಳಗಾವೀಲೂ ಗರಿಗೆದರಿದ ಬಣ ರಾಜಕೀಯ
ದಿಲ್ಲಿಯಲ್ಲಿ ಜ.1ರಿಂದ ಕೇಂದ್ರದ ಭಾರತ್‌ ಟ್ಯಾಕ್ಸಿ ಸಂಚಾರ