ಬಿಸಿಲು: ವೇದಿಕೆಯಲ್ಲೇ ತಲೆ ಮೇಲೆ ನೀರು ಸುರಿದುಕೊಂಡ ರಾಹುಲ್!

KannadaprabhaNewsNetwork |  
Published : May 29, 2024, 12:53 AM IST
ರಾಹುಲ್‌ | Kannada Prabha

ಸಾರಾಂಶ

ದೇಶದಲ್ಲಿ ಲೋಕಸಭಾ ಚುನಾವಣೆ ಕಾವೇರಿರುವ ಹೊತ್ತಲ್ಲಿಯೇ ಬಿಸಿಲಿನ ತಾಪಮಾನ ಕೂಡ ಹೆಚ್ಚಾಗುತ್ತಲೇ ಇದೆ.

ರುದ್ರಪುರ: ದೇಶದಲ್ಲಿ ಲೋಕಸಭಾ ಚುನಾವಣೆ ಕಾವೇರಿರುವ ಹೊತ್ತಲ್ಲಿಯೇ ಬಿಸಿಲಿನ ತಾಪಮಾನ ಕೂಡ ಹೆಚ್ಚಾಗುತ್ತಲೇ ಇದೆ. ಇದಕ್ಕೆ ಉದಾಹರಣೆ ಎಂಬಂತೆ ಉತ್ತರ ಪ್ರದೇಶದ ರುದ್ರಪುರದಲ್ಲಿ ಚುನಾವಣಾ ಪ್ರಚಾರ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಸಿಲಿನ ಝಳ ತಡೆಯಲಾಗದೇ ಸಾವರ್ಜನಿಕರ ಮುಂದೆಯೇ ತಲೆಯ ಮೇಲೆ ನೀರು ಸುರಿದುಕೊಂಡಿರುವ ಘಟನೆ ನಡೆದಿದೆ. ವೇದಿಕೆ ಮುಂಭಾಗದಲ್ಲಿ ನಿಂತು ಮಾತನಾಡುತ್ತಿದ್ದ ರಾಹುಲ್‌ ಗಾಂಧಿ, ಬಾಟಲಿಯಿಂದ ನೀರು ಕುಡಿದಿದ್ದಾರೆ. ತಾಪಮಾನದಿಂದ ಕೊಂಚ ಸುಧಾರಿಸಿಕೊಳ್ಳಲು ಪ್ರಯತ್ನಿಸಿದರು. ಆ ಬಳಿಕ ‘ಗರ್ಮಿ ಹೈ ಕಾಫಿ’( ಸಾಕಷ್ಟು ಬಿಸಿಯಾಗಿದೆ) ಎನ್ನುತ್ತಲೇ ಅದೇ ಬಾಟಲಿ ನೀರನ್ನು ತಲೆಮೇಲೆ ಸುರಿದುಕೊಂಡಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಲಿವ್‌-ಇನ್‌ ಗೆಳತಿ ಗುಪ್ತಾಂಗಕ್ಕೆ ಸ್ಯಾನಿಟೈಸರ್‌ ಸುರಿದು ಬೆಂಕಿ
ಸಂಸದೆಯರ ಮುಂದೆಬಿಟ್ಟು ಪ್ರಧಾನಿ ಆಗಬೇಕೆ ? : ಮೋದಿ