ಮಹಾ ಮಳೆಗೆ 7 ಸಾವು: ಮುಂಬೈ ತತ್ತರ

Published : Aug 19, 2025, 05:48 AM IST
mumbai rain

ಸಾರಾಂಶ

ಮಹಾರಾಷ್ಟ್ರದ ರಾಜಧಾನಿ ಮುಂಬೈ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸೋಮವಾರ ಭಾರೀ ಮಳೆ ಸುರಿದಿದ್ದು ಸಾಮಾನ್ಯ ಜನಜೀವನದಲ್ಲಿ ಭಾರೀ ವ್ಯತ್ಯಯವಾಗಿದೆ.

 ಮುಂಬೈ: ಮಹಾರಾಷ್ಟ್ರದ ರಾಜಧಾನಿ ಮುಂಬೈ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸೋಮವಾರ ಭಾರೀ ಮಳೆ ಸುರಿದಿದ್ದು ಸಾಮಾನ್ಯ ಜನಜೀವನದಲ್ಲಿ ಭಾರೀ ವ್ಯತ್ಯಯವಾಗಿದೆ. ಮಳೆ ಸಂಬಂಧಿ ಅನಾಹುತಗಳಿಗೆ ಒಂದೇ ದಿನ ರಾಜ್ಯದಲ್ಲಿ 7 ಜನರು ಸಾವನ್ನಪ್ಪಿದ್ದಾರೆ.ಭಾರಿ ಮಳೆಯಿಂದಾಗಿ ನಾಂದೇಡ್‌ನಲ್ಲಿ ಐವರು ನಾಪತ್ತೆಯಾಗಿದ್ದಾರೆ. ಗ್ರಾಮದ 200 ಜನರು ನಡುಗಡ್ಡೆಯಲ್ಲಿ ಸಿಲುಕಿದ್ದು ಅವರ ರಕ್ಷಣೆಗೆ ಸೇನೆಯನ್ನು ನಿಯೋಜಿಸಲಾಗಿದೆ.

ಇನ್ನು ಮುಂಬೈನಲ್ಲಿ ಮಳೆಯ ಅವಾಂತರ ಹೆಚ್ಚಿದ್ದು, ಉಪನಗರ ರೈಲು ಸೇವೆ, ವಿಮಾನ ಸೇವೆಗಳು ವ್ಯತ್ಯಯವಾಗಿವೆ. ಮುಂಬೈನಲ್ಲಿ 8 ತಾಸಿನಲ್ಲಿ 17.7 ಸೆಂ.ಮೀ ಮಳೆಯಾಗಿದೆ. ವರ್ಷಧಾರೆಗೆ ಮುಂಬೈನ ಬಹುತೇಕ ರಸ್ತೆಗಳು ಜಲಾವೃತಗೊಂಡಿದ್ದವು. ಮಳೆ ಪರಿಣಾಮ ಮುಂಬೈ ಪಾಲಿಕೆಯು ಮಧ್ಯಾಹ್ನ 12 ಗಂಟೆ ಬಳಿಕ ಆರಂಭವಾಗುವ ಎಲ್ಲಾ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಿತು.

ಮಕ್ಕಳ ರಕ್ಷಣೆ:ಮಳೆಯಿಂದಾಗಿ ಮುಂಬೈನ ಮಾತುಂಗಾದಲ್ಲಿನ ಡಾನ್‌ ಬಾಸ್ಕೋ ಶಾಲೆಯ ಬಸ್ಸು ಕೆಟ್ಟುನಿಂತಿತ್ತು. ಈ ವೇಳೆ ಪೊಲೀಸರು ಆಗಮಿಸಿ ಮಕ್ಕಳನ್ನು ರಕ್ಷಿಸಿದ್ದಾರೆ.

ಆಲಮಟ್ಟಿ ನೀರು ಬಿಡಲು ಕರ್ನಾಟಕಕ್ಕೆ ಒತ್ತಾಯ: ಸಿಎಂ

ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಆಲಮಟ್ಟಿ ಅಣೆಕಟ್ಟಿನಲ್ಲಿ ನೀರು ಹೆಚ್ಚಳವಾಗುತ್ತಿರುವುದರಿಂದ ಡ್ಯಾಂನಿಂದ ನೀರು ಬಿಡುವಂತೆ ಕರ್ನಾಟಕದ ಜತೆಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಹೇಳಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಪೌರತ್ವಕ್ಕೂ ಮುನ್ನ ಮತಪಟ್ಟೀಲಿ ಹೆಸರು : ಸೋನಿಯಾಗೆ ನೋಟಿಸ್‌
ವಂದೇ ಮಾತರಂ ಚರ್ಚೆ ವೇಳೆ ಶಾ ವರ್ಸಸ್‌ ಖರ್ಗೆ