ಕೇಂದ್ರದ ಮಾಜಿ ಸಚಿವರು, ಉದ್ಯಮಿ ರಾಜೀವ್‌ ಚಂದ್ರಶೇಖರ್‌ಗೆ ಕೇರಳ ಬಿಜೆಪಿಯ ಸಾರಥ್ಯ

KannadaprabhaNewsNetwork |  
Published : Mar 25, 2025, 12:45 AM ISTUpdated : Mar 25, 2025, 04:33 AM IST
ನಡ್ಡಾ | Kannada Prabha

ಸಾರಾಂಶ

  ಕೇರಳ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಕೇಂದ್ರದ ಮಾಜಿ ಸಚಿವ, ಉದ್ಯಮಿ ರಾಜೀವ್‌ ಚಂದ್ರಶೇಖರ್‌ ಆಯ್ಕೆಯಾಗಿದ್ದು, ಸೋಮವಾರ ಅಧಿಕಾರ ಸ್ವೀಕರಿಸಿದರು. 

ತಿರುವನಂತಪುರಂ: ಕೇರಳ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಕೇಂದ್ರದ ಮಾಜಿ ಸಚಿವ, ಉದ್ಯಮಿ ರಾಜೀವ್‌ ಚಂದ್ರಶೇಖರ್‌ ಆಯ್ಕೆಯಾಗಿದ್ದು, ಸೋಮವಾರ ಅಧಿಕಾರ ಸ್ವೀಕರಿಸಿದರು.ಅದಕ್ಕೂ ಮೊದಲು ತಿರುವನಂತಪುರಂನಲ್ಲಿ ನಡೆದ ಬಿಜೆಪಿ ರಾಜ್ಯ ಸಮಿತಿ ಸಭೆಯಲ್ಲಿ ಪಕ್ಷದ ಕೇಂದ್ರದ ವೀಕ್ಷಕ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಈ ಘೋಷಣೆ ಮಾಡಿದರು.

ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ರಾಜೀವ್‌ ಚಂದ್ರಶೇಖರ್‌ ಅವರು, ರಾಜ್ಯದಲ್ಲಿ ಬಿಜೆಪಿ ನೇತೃತ್ವದಲ್ಲಿ ಎನ್‌ಡಿಎ ಮೈತ್ರಿಕೂಟವನ್ನು ಗೆಲ್ಲಿಸುವ ಜವಾಬ್ದಾರಿ ನನಗೆ ವಹಿಸಲಾಗಿದೆ. ಈ ಗುರಿ ಸಾಧನೆಯ ಬಳಿಕವಷ್ಟೇ ನಾನು ವಿರಮಿಸುತ್ತೇನೆ. ನನಗೆ ಈ ಹೊಣೆಗಾರಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಮತ್ತಿತರರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಈಗ ಖರ್ಗೆ ಹೆಗಲಿಗೆ ನಿರ್ಧಾರ ಯಾರು ಆಗ್ತಾರೆ ಕೇರಳಂ ಸಿಎಂ?
ಪಶ್ಚಿಮ ಬಂಗಾಳ ವಿಧಾನಸಭೆ ವಿರ್ಸಜನೆ ಗೌರ್‍ನರ್‌ ಗೇಟ್‌ ಪಾಸ್‌ : ದೀದಿ ಈಗ ಬೀದಿಗೆ!