ರಾಜೀವ್ ವಿರುದ್ಧ ಸುಳ್ಳು ಸುದ್ದಿ: ತರೂರ್ ವಿರುದ್ಧ ಕೇಸ್

KannadaprabhaNewsNetwork |  
Published : Apr 22, 2024, 02:03 AM ISTUpdated : Apr 22, 2024, 05:23 AM IST
ರಾಜೀವ್‌ | Kannada Prabha

ಸಾರಾಂಶ

ತಿರುವನಂತಪುರ ಕ್ಷೇತ್ರದಲ್ಲಿ ಚುನಾವಣಾ ಸ್ಪರ್ಧಿಗಳ ನಡುವಿನ ಸಮರ ತಾರಕಕ್ಕೇರಿದ್ದು, ರಾಜೀವ್‌ ಚಂದ್ರಶೇಖರ್‌ ಶಶಿ ತರೂರ್‌ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ತಿರುವನಂತಪುರಂ: ತಿರುವನಂತಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ವಿರುದ್ಧ ಸುಳ್ಳು ಪ್ರಚಾರ ನಡೆಸಿದ ಆರೋಪದ ಮೇಲೆ ಕಾಂಗ್ರೆಸ್ ಅಭ್ಯರ್ಥಿ ಶಶಿ ತರೂರ್ ವಿರುದ್ಧ ಪ್ರಕರಣ ದಾಖಲಾಗಿದೆ.

ತರೂರ್ ವಿರುದ್ಧ ಬಿಜೆಪಿ ನಾಯಕ ಜೆ. ಆರ್ . ಪದ್ಮಕುಮಾರ್ ಎನ್ನುವವರು ಪ್ರಕರಣ ದಾಖಲಿಸಿದ್ದಾರೆ.

ರಾಜೀವ್ ಕರಾವಳಿ ಭಾಗದ ಮತದಾರರ ಮೇಲೆ ಪ್ರಭಾವ ಬೀರಿದ್ದಾರೆ ಎಂದು ಟೀವಿ ಕಾರ್ಯಕ್ರಮವೊಂದರಲ್ಲಿ ಶಶಿ ತರೂರ್‌ ಆಪಾದಿಸಿದ್ದಲ್ಲದೆ, ಈ ವೇಳೆ ಅವಹೇಳನಕಾರಿ ಪದ ಪ್ರಯೋಗಿಸಿದ್ದಾರೆಂದು ಆರೋಪಿಸಲಾಗಿದೆ.

ಏಪ್ರಿಲ್ 15 ರಂದೇ ಈ ಪ್ರಕರಣ ದಾಖಲಾಗಿದ್ದು ಸೈಬರ್ ಪೊಲೀಸರು ಭಾನುವಾರ ಈ ಕುರಿತು ಮಾಹಿತಿ ಬಿಡುಗಡೆ ಮಾಡಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ರಾಣಾಗೆ ಏಮ್ಸ್‌ನಲ್ಲಿ ದಯಾಮರಣ ಪ್ರಕ್ರಿಯೆ ಆರಂಭ
‘ಒನ್‌ ಬ್ಯಾಟಲ್‌ ಆಫ್ಟರ್‌ ಅನದರ್‌’ಗೆ ‘ಅತ್ಯುತ್ತಮ ಚಿತ್ರ’ ಆಸ್ಕರ್‌ ಗೌರವ