ಪಿಒಕೆ ವಶದ ಅಗತ್ಯವಿಲ್ಲ, ಅವರೇ ಬರ್ತಾರೆ: ರಾಜನಾಥ್‌

KannadaprabhaNewsNetwork |  
Published : May 06, 2024, 12:33 AM ISTUpdated : May 06, 2024, 05:36 AM IST
ರಾಜನಾಥ್‌ ಸಿಂಗ್‌ | Kannada Prabha

ಸಾರಾಂಶ

ಪಿಒಕೆ ವಶದ ಅಗತ್ಯವಿಲ್ಲ, ಅವರೇ ಬರ್ತಾರೆ ಎಂದು ಕೇಂದ್ರ ಗೃಹಸಚಿವ ರಾಜನಾಥ್‌ ಸಿಂಗ್‌ ತಿಳಿಸಿದ್ದಾರೆ. ಕಾಶ್ಮೀರದಲ್ಲಿ ಅಭಿವೃದ್ದ್ಯಾಗುತ್ತಿರುವುದನ್ನು ಕಂಡು ಅವರೇ ಇತ್ತ ಬರ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ದ ಮೇಲಿನ ತನ್ನ ಹಕ್ಕನ್ನು ಭಾರತ ಎಂದೂ ಕೈಬಿಡದು ಎಂದು ಪುನರುಚ್ಚರಿಸಿರುವ ರಕ್ಷಣಾ ಸಚಿವ ರಾಜನಾಥ ಸಿಂಗ್‌, ಇದೇ ವೇಳೆ ನಾವು ಸೇನೆಯನ್ನು ಬಳಸಿ ಪಿಒಕೆ ವಶಪಡಿಸಿಕೊಳ್ಳಬೇಕಾದ ಅಗತ್ಯವಿಲ್ಲ. ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿ ನೋಡಿ, ಪಿಒಕೆ ಜನರೇ ನಮ್ಮನ್ನು ಸೇರಿಕೊಳ್ಳಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪಿಟಿಐ ಸುದ್ದಿಸಂಸ್ಥೆ ಜತೆ ಭಾನುವಾರ ಮಾತನಾಡಿದ ಅವರು, ‘ಕಣಿವೆ ರಾಜ್ಯದಲ್ಲಿ ಇದೀಗ ಕಾನೂನು ಮತ್ತು ಸುವ್ಯವಸ್ಥೆ ಭಾರೀ ಪ್ರಮಾಣದಲ್ಲಿ ಸುಧಾರಣೆಯಾಗಿದೆ. ಕೇಂದ್ರಾಡಳಿತ ಪ್ರದೇಶದ ಮೇಲೆ ಹೇರಿರುವ ಸಶಸ್ತ್ರ ಪಡೆಗಳ ವಿಶೇಷ ಕಾಯ್ದೆ ಅಗತ್ಯವಿಲ್ಲ ಪರಿಸ್ಥಿತಿ ಕೂಡಾ ಶೀಘ್ರ ನಿರ್ಮಾಣವಾಗಲಿದೆ. ರಾಜ್ಯದಲ್ಲಿ ಆರ್ಥಿಕತೆಯಲ್ಲಿ ಉಂಟಾಗಿರುವ ಬೆಳವಣಿಗೆಗಳು ಸಹಜವಾಗಿಯೇ ಪಿಒಕೆ ಜನರೇ ನಮ್ಮ ಭೂಭಾಗವನ್ನು ಭಾರತದೊಂದಿಗೆ ವಿಲೀನ ಮಾಡಿ ಎಂದು ಬೇಡಿಕೆ ಇಡುವ ದಿನಗಳು ದೂರವಿಲ್ಲ’ ಎಂದರು.

ಈ ಮುಂಚೆ ಅವರು ಪಿಒಕೆಗೆ ನುಗ್ಗಿ ಉಗ್ರರ ದಮನ ಮಾಡಲು ಭಾರತ ಸಿದ್ಧವಿದೆ ಎಂಬ ಹೇಳಿಕೆಗಳನ್ನು ನೀಡಿ ಸುದ್ದಿಯಾಗಿದ್ದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ರಾಣಾಗೆ ಏಮ್ಸ್‌ನಲ್ಲಿ ದಯಾಮರಣ ಪ್ರಕ್ರಿಯೆ ಆರಂಭ
‘ಒನ್‌ ಬ್ಯಾಟಲ್‌ ಆಫ್ಟರ್‌ ಅನದರ್‌’ಗೆ ‘ಅತ್ಯುತ್ತಮ ಚಿತ್ರ’ ಆಸ್ಕರ್‌ ಗೌರವ