ಅಯೋಧ್ಯೆ: ಇಲ್ಲಿನ ರಾಮ ಮಂದಿರಕ್ಕೆ ಭಕ್ತರ ಆಗಮನ ಹೆಚ್ಚುತ್ತಿದ್ದು, ಈ ನಡುವೆ ಕಳೆದ 5 ವರ್ಷದಲ್ಲಿ ಮಂದಿರ ಟ್ರಸ್ಟ್ 400 ಕೋಟಿ ರು. ತೆರಿಗೆಯನ್ನು ಸರ್ಕಾರಕ್ಕೆ ಪಾವತಿಸಿದೆ ಎಂದು ಟ್ರಸ್ಟ್ನ ಕಾರ್ಯದರ್ಶಿ ಚಂಪತ್ ರಾಯ್ ಹೇಳಿದ್ದಾರೆ.
ಕಳೆದ ವರ್ಷ ಜ.24ರಂದು ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯಾದ ಬಳಿಕ ಭಕ್ತರ ಆಗಮನ ಹೆಚ್ಚುತ್ತಲೇ ಇದೆ. ಒಂದು ವರ್ಷದಲ್ಲಿ 16 ಕೋಟಿ ಜನರು ಅಯೋಧ್ಯೆಗೆ ಭೇಟಿ ನೀಡಿದ್ದು, ಮಂದಿರಕ್ಕೆ 5 ಕೋಟಿ ಜನರು ಭೇಟಿ ನೀಡಿದ್ದಾರೆ. ಜ.13ರಿಂದ ಫೆ.26ರವರೆಗೆ ನಡೆದ ಕುಂಭಮೇಳದ ಅವಧಿಯಲ್ಲಿ 1.6 ಕೋಟಿ ಭಕ್ತರು ಭೇಟಿ ನೀಡಿದ್ದಾರೆ.