ನವದೆಹಲಿ: ಪಾರಂಪರಿಕ ಕಟ್ಟಡಗಳಲ್ಲಿ ಒಂದಾಗಿರುವ ದೆಹಲಿಯ ಕೆಂಪುಕೋಟೆಯ ಹೊಳಪು ವಾಯುಮಾಲಿನ್ಯದಿಂದ ಮಾಸುತ್ತಿದೆ ಎಂದು ಕೇಂದ್ರ ಸರ್ಕಾರದ ವರದಿ ಕಳವಳ ವ್ಯಕ್ತಪಡಿಸಿದೆ. ವಾಯುಮಾಲಿನ್ಯ ಏರಿಕೆಯಿಂದಾಗಿ ಕೆಂಪುಕೋಟೆಯ ಕೆಂಪು ಮರಳುಗಲ್ಲುಗಳ ಮೇಲೆ ಕಪ್ಪಾದ ಪದರ ಸೃಷ್ಟಿಯಾಗುತ್ತಿದೆ. ಈ ಪದರವು ಕಲ್ಲಿನ ಹೊಳಪು ಕೊಗ್ಗಿಸಿ ಕಲ್ಲಿನ ಮೇಲೆ ರಾಸಾಯನಿಕ ಅಡ್ಡ ಪರಿಣಾಮ ಬೀರುತ್ತಿದೆ ಎಂದು ವರದಿ ಹೇಳಿದೆ. ಕೇಂದ್ರ ವಿಜ್ಞಾನ ಮತ್ತು ಇಲಾಖೆ ಮತ್ತು ಇಟಲಿಯ ವಿದೇಶಾಂಗ ಇಲಾಖೆಯು ಜಂಟಿಯಾಗಿ ವರದಿಯನ್ನು ತಯಾರಿಸಿವೆ.
ಬಂಗಾಳದಲ್ಲೂ ಮತಪಟ್ಟಿ ಪರಿಷ್ಕರಣೆಗೆ ಆಯೋಗ ಸಿದ್ಧತೆ: ತರಬೇತಿ ಶುರು
ಕೋಲ್ಕತಾ: ಬಿಹಾರದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿರುವ ಚುನಾವಣಾ ಆಯೋಗದ ವಿಶೇಷ ಮತಪಟ್ಟಿ ಪರಿಷ್ಕರಣೆಯನ್ನು ನೆರೆಯ ಪಶ್ಚಿಮ ಬಂಗಾಳದಲ್ಲಿಯೂ ನಡೆಸಲು ಆಯೋಗ ತಯಾರಿ ಆರಂಭಿಸಿದೆ. ಇದರ ಭಾಗವಾಗಿ ಮಂಗಳವಾರದಿಂದ ರಾಜ್ಯದಲ್ಲಿರುವ ಪ್ರತಿ ಜಿಲ್ಲೆಯ ಜಿಲ್ಲಾ ಉಪ ವಿಭಾಗಾಧಿಕಾರಿ ಮತ್ತು ಚುನಾವಣಾ ನೋಂದಣಾಧಿಕಾರಿಗಳಿಗೆ ತರಬೇತಿ ಆರಂಭಿಸಲಿದೆ. ಒಮ್ಮೆ ಎಡಿಎಂ ಮತ್ತು ಇಆರ್ಒಗಳಿಗೆ ತರಬೇತಿ ಪೂರ್ಣಗೊಂಡ ಬಳಿಕ ಅವರು ಬೂತ್ ಮಟ್ಟದ ಅಧಿಕಾರಿಗಳಿಗೆ ತರಬೇತಿ ನೀಡಲಿದ್ದಾರೆ. ಬೂತ್ ಅಧಿಕಾರಿಗಳು ಜನರಿಗೆ ಕಾರ್ಯದ ಕುರಿತು ವಿವರಿಸಲಿದ್ದಾರೆ. ಮುಂದಿನ ವರ್ಷದ ಆರಂಭದಲ್ಲಿ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯಬೇಕಿದೆ.
ಎಲ್ಲಾ ಕೇಸಿಗೂ ವನತಾರಾ ರೀತಿ ಶೀಘ್ರ ನ್ಯಾಯದಾನ ಸಾಧ್ಯವೇ?: ಕೈ ವ್ಯಂಗ್ಯ
ನವದೆಹಲಿ: ‘ವನತಾರಾ ಪ್ರಕರಣದಂತೆ ಎಲ್ಲ ಪ್ರಕರಣಗಳನ್ನು ಸುಪ್ರೀಂಕೋರ್ಟ್ ಇಷ್ಟು ತ್ವರಿತ ಮತ್ತು ಸ್ಪಷ್ಟವಾಗಿ ಇತ್ಯರ್ಥಪಡಿಸುತ್ತದೆಯೇ?’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮಂಗಳವಾರ ಪ್ರಶ್ನಿಸಿದ್ದಾರೆ. ಜತೆಗೆ, ‘ದೀರ್ಘ ವಿಳಂಬಗಳಿಗೆ ಹೆಸರಾಗಿರುವ ಭಾರತೀಯ ನ್ಯಾಯಾಂಗ ವ್ಯವಸ್ಥೆ ಈಗ ಹೆಚ್ಚಿನ ವೇಗದಲ್ಲಿ ಚಲಿಸುತ್ತಿದೆ’ ಎಂದು ಅಣಕವಾಡಿದ್ದಾರೆ. ‘ಆ.17ಕ್ಕೆ ವನತಾರಾ ವಿರುದ್ಧ ಅರ್ಜಿ ಸಲ್ಲಿಕೆಯಾಗಿತ್ತು. ಸೆ.15ಕ್ಕೆ ಮುಚ್ಚಿದ ಲಕೋಟೆಯಲ್ಲಿ ಎಸ್ಐಟಿ ಸಲ್ಲಿಸಿದ ವರದಿ ಆಧರಿಸಿ ವನತಾರಾವನ್ನು ನ್ಯಾಯಾಲಯ ದೋಷಮುಕ್ತ ಮಾಡಿದೆ. ಈ ಮುಚ್ಚಿದ ಲಕೋಟೆ ವ್ಯವಹಾರವಿಲ್ಲದೆ ಎಲ್ಲ ಪ್ರಕರಣಗಳ ಶೀಘ್ರ ಇತ್ಯರ್ಥ ಸಾಧ್ಯವೇ?’ ಎಂದು ರಮೇಶ್ ಕೇಳಿದ್ದಾರೆ.
==
==
ಅನೈತಿಕತೆ ತಡೆಯುವ ಹೆಸರಲ್ಲಿ ವೈ ಫೈ ಸೇವೆಗೆ ಆಫ್ಫನ್ ತಾಲಿ‘ಬ್ಯಾನ್’ಜಲಾಲಬಾದ್: 2021ರಲ್ಲಿ ಅಫ್ಘಾನಿಸ್ತಾನದ ಆಡಳಿತ ವಹಿಸಿಕೊಂಡಾಗಿನಿಂದ ಒಂದಲ್ಲ ಒಂದು ರೀತಿಯ ನಿರ್ಬಂಧ ನೀತಿಯನ್ನು ಅನುಸರಿಸುತ್ತಿರುವ ತಾಲಿಬಾನ್ ಸರ್ಕಾರ ಇದೀಗ ದೇಶಾದ್ಯಂತ ವೈಫೈ ಇಂಟರ್ನೆಟ್ ನಿಷೇಧಿಸಿದೆ.ಇಲ್ಲಿನ ಬಾಲ್ಖ್ ಪ್ರಾಂತ್ಯದಲ್ಲಿ ‘ಅನೈತಿಕತೆಯನ್ನು ತಡೆಯುವ’ ನಿಟ್ಟಿನಲ್ಲಿ ವೈಫೈ ನಿಷೇಧಿಸಲಾಗಿದೆ ಎಂದು ಅಲ್ಲಿನ ಅಧಿಕಾರಿಗಳು ಘೋಷಿಸಿದ್ದಾರೆ. ವೈಫೈಗೆ ಪರ್ಯಾಯವಾಗಿ ಬೇರೆ ವ್ಯವಸ್ಥೆಯನ್ನು ದೇಶೀಯವಾಗಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಇದರಿಂದಾಗಿ ಸರ್ಕಾರಿ ಕಚೇರಿಗಳು, ಖಾಸಗಿ ನೆಲೆಗಳಲ್ಲಿ ವೈಫೈ ರದ್ದಾಗಿದೆ. ವೈಫೈ ನಿಷೇಧದ ಹೊರತು ಮೊಬೈಲ್ ಇಂಟರ್ನೆಟ್ ಸೇವೆ ಎಂದಿನಂತೆ ಕಾರ್ಯನಿರ್ವಹಿಸಲಿದೆ.==
ಟ್ರಂಪ್ ತೆರಿಗೆ ಕಿರಿಕ್ ಬಳಿಕ ಮತ್ತೆ ವ್ಯಾಪಾರ ಒಪ್ಪಂದ ಚರ್ಚೆ ಸುಗಮನವದೆಹಲಿ: ಭಾರತ-ಅಮೆರಿಕ ನಡುವಿನ ವ್ಯಾಪಾರಕ್ಕೆ ಸಂಬಂಧಿಸಿದಂತೆ ಉಭಯ ದೇಶಗಳ ನಡುವೆ ಮಂಗಳವಾರ 6ನೇ ಸುತ್ತಿನ ಮಾತುಕತೆ ನಡೆದಿದ್ದು, ಆದಷ್ಟು ಬೇಗ ಅಂತಿಮ ನಿರ್ಧಾರ ಕೈಗೊಳ್ಳುವ ಭರವಸೆ ಎರಡೂ ಕಡೆಯಿಂದ ವ್ಯಕ್ತವಾಗಿದೆ. ಭಾರತದ ಆಮದುಗಳ ಮೇಲೆ ಅಧ್ಯಕ್ಷ ಟ್ರಂಪ್ ಶೇ.50ರಷ್ಟು ತೆರಿಗೆ ಹೇರಿರುವ ನಡುವೆಯೂ, ಆ ಬಗ್ಗೆ ಚರ್ಚೆ ನಡೆಸಲು ಅಮೆರಿಕಾದ ಸಂಧಾನಕಾರ ಬ್ರೆಂಡನ್ ಲಿಂಚ್ ಅವರ ತಂಡ ಭಾರತಕ್ಕೆ ಆಗಮಿಸಿದ್ದು, ರಾಜೇಶ್ ಅಗರ್ವಾಲ್ ಜೊತೆ ಸಭೆ ನಡೆಸಿದ್ದಾರೆ. ಈ ವೇಳೆ ಯಾವೆಲ್ಲಾ ತೀರ್ಮಾನ ಕೈಗೊಳ್ಳಲಾಯಿತು ಎಂಬ ಬಗ್ಗೆ ಮಾಹಿತಿ ಲಭಿಸಿಲ್ಲ. ಆದರೆ ಮಾತುಕತೆ ಸಕಾರಾತ್ಮಕವಾಗಿತ್ತು ಎಂದು ಉಭಯ ದೇಶಗಳು ಹೇಳಿವೆ.==
‘ಹೋಗಿ ವಿಷ್ಣುನನ್ನೇ ಕೇಳು’: ವಿಗ್ರಹದ ಕುರಿತು ಸಿಜೆಐ ಗವಾಯಿ ಹೇಳಿಕೆ ವಿವಾದನವದೆಹಲಿ: ಖಜುರಾಹೋ ದೇಗುಲದಲ್ಲಿ ವಿಷ್ಣುವಿನ ವಿರೂಪಗೊಂಡಿದ್ದ ವಿಗ್ರಹ ಸರಿಪಡಿಸುವಂತೆ ಸುಪ್ರೀಂ ಕೋರ್ಟ್ಗೆ ಸಲ್ಲಿಕೆಯಾಗಿದ್ದ ಅರ್ಜಿಯನ್ನು ತಿರಸ್ಕರಿಸಿದ ಮುಖ್ಯ ನ್ಯಾ। ಬಿ.ಆರ್.ಗವಾಯಿ ಅವರು ‘ನೀನು ವಿಷ್ಣುವಿನ ಪರಮಭಕ್ತನಲ್ಲವೇ ಹೋಗಿ ವಿಷ್ಣುವನ್ನೇ ಕೇಳು. ಹೋಗಿ ಪ್ರಾರ್ಥನೆ ಮಾಡು’ ಎಂದು ಹೇಳಿದ್ದು ವಿವಾದಕ್ಕೆ ಕಾರಣವಾಗಿದೆ. ರಾಕೇಶ್ ದಲಾಲ್ ಎಂಬುವರು 7 ಅಡಿ ಎತ್ತರದ ತಲೆ ತುಂಡಾಗಿರುವ ವಿಗ್ರಹ ಸರಿಪಡಿಸುವಂತೆ ಸರ್ಕಾರಗಳಿಗೆ ಮನವಿ ಕೊಟ್ಟು ಸಾಕಾಗಿದೆ. ವಿರೂಪಗೊಂಡ ವಿಗ್ರಹವು ಮೂಲಭೂತ ಹಕ್ಕಿಗೆ ಧಕ್ಕೆಯಾಗಿದೆ. ಹೀಗಾಗಿ ಅನುಮತಿ ಕೊಡಬೇಕು ಎಂದು ಮನವಿ ಮಾಡಿದ್ದರು. ಈ ಅರ್ಜಿ ವಿಚಾರಣೆ ವೇಳೆ ಸಿಜೆ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಆಕ್ರೋಶ ವ್ಯಕ್ತವಾಗಿದೆ.