ಸಿಎಎ ಜಾರಿ: ಪಾಕ್‌ ನಿರಾಶ್ರಿತ ಹಿಂದೂಗಳ ಸಂಭ್ರಮ

KannadaprabhaNewsNetwork |  
Published : Mar 13, 2024, 02:03 AM IST
ಸಂಭ್ರಮ | Kannada Prabha

ಸಾರಾಂಶ

ಇದು ನಿಜವಾದ ರಾಮರಾಜ್ಯ ಎಂದು ನಿರಾಶ್ರಿತರು ಹರ್ಷ ವ್ಯಕ್ತಪಡಿಸಿದ್ದಾರೆ.

ನವದೆಹಲಿ/ಜೋಧ್‌ಪುರ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಯ ಬೆನ್ನಲ್ಲೇ ದೆಹಲಿಯಲ್ಲಿ ಹಾಗೂ ರಾಜಸ್ಥಾನದ ಜೋಧಪುರದಲ್ಲಿ ನೆಲೆಸಿರುವ ಪಾಕಿಸ್ತಾನದ ನಿರಾಶ್ರಿತ ಹಿಂದೂಗಳು ಮಂಗಳವಾರ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದ್ದಾರೆ.

ಈ ಕಾಯ್ದೆಯಿಂದ ನಾವು ಸುರಕ್ಷಿತ ಭವಿಷ್ಯಕ್ಕಾಗಿ ಎದುರು ನೋಡಬಹುದು. ನಮಗೆ ಆರಂಭದಲ್ಲಿ ಪಾಕಿಸ್ತಾನದಿಂದ ಬಂದಾಗ ನಮಗೆ ಮೂಲಭೂತ ಸೌಕರ್ಯಗಳು ಸಿಗುತ್ತಿರಲಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ಸಿಎಎ ಕಾಯ್ದೆ ಜಾರಿಗೆ ಮಾಡಿರುವುದು ಹರ್ಷ ತಂದಿದೆ ಎಂದು ದೆಹಲಿಯಲ್ಲಿ ನೆಲೆಸಿರುವ ಪಾಕಿಸ್ತಾನದ ನಿರಾಶ್ರಿತ ಹಿಂದೂಗಳು ತಿಳಿಸಿದ್ದಾರೆ.ಜೋಧಪುರದಲ್ಲಿ ನೆಲೆಸಿರುವ ಪಾಕಿಸ್ತಾನದ ನಿರಾಶ್ರಿತ ಹಿಂದೂಗಳು ‘ಇದು ನಿಜವಾದ ರಾಮ ರಾಜ್ಯ’ ಎಂದು ಹೇಳುವ ಮೂಲಕ ಸಿಎಎ ಜಾರಿಗೆಗೆ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಕ್ಷಣಕ್ಕಾಗಿ ನಾವು ಹಲವಾರು ದಿನಗಳಿಂದ ಕಾಯುತ್ತಿದ್ದೆವು. ನಾವೆಲ್ಲರೂ ಶೀಘ್ರದಲ್ಲಿ ಭಾರತದ ಪ್ರಜೆಗಳಾಗಲಿದ್ದೇವೆ ಎಂದು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಬೆಂಗಳೂರಿನದ್ದು ಸೇರಿ 16 ಉಪಗ್ರಹಗಳು ಆಗಸದಲ್ಲೇ ಕಾಣೆ
ಅಣ್ಣಾಮಲೈ ರಸಮಲೈ ಎಂದು ರಾಜ್‌ ಠಾಕ್ರೆ ಕೀಳುಭಾಷೆ ಟೀಕೆ