ಹಿಂದೂ ಧರ್ಮದಲ್ಲಿ ಅಸ್ಪೃಶ್ಯತೆ ಮತ್ತು ಸಾಮಾಜಿಕ ಅಸಮಾನತೆ ಇರುವ ತನಕ ಮೀಸಲಾತಿ ಇರಲಿದೆ : ಮಲ್ಲಿಕಾರ್ಜುನ ಖರ್ಗೆ

KannadaprabhaNewsNetwork |  
Published : Sep 22, 2024, 01:47 AM ISTUpdated : Sep 22, 2024, 05:12 AM IST
ಖರ್ಗೆ | Kannada Prabha

ಸಾರಾಂಶ

ದೇಶದಲ್ಲಿ ಹಿಂದೂ ಧರ್ಮದಲ್ಲಿ ಅಸ್ಪೃಶ್ಯತೆ ಮತ್ತು ಸಾಮಾಜಿಕ ಅಸಮಾನತೆ ಇರುವ ತನಕ ಮೀಸಲಾತಿ ಇರಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಮೀಸಲಾತಿಗೆ ಕಾಂಗ್ರೆಸ್ ಸಂಪೂರ್ಣ ಬೆಂಬಲವಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಜಮ್ಮು: ‘ದೇಶದಲ್ಲಿ ಹಿಂದೂ ಧರ್ಮದಲ್ಲಿ ಅಸ್ಪೃಶ್ಯತೆ ಮತ್ತು ಸಾಮಾಜಿಕ ಅಸಮಾನತೆ ಇರುವ ತನಕ ಮೀಸಲಾತಿ ಇರಲಿದೆ. ಕಾಂಗ್ರೆಸ್‌ ಮೀಸಲಾತಿಗೆ ಸಂಪೂರ್ಣವಾಗಿ ಬೆಂಬಲಿಸಲಿದೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಮೀಸಲಾತಿ ಕುರಿತಾಗಿ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸಿದ ಖರ್ಗೆ, ‘ಅವರು ಹಾಗೇ ಹೇಳಿಲ್ಲ. ಹಾಗೇ ಹೇಳುವುದಿಲ್ಲ, ಆ ರೀತಿ ಹೇಳುವುದಕ್ಕೆ ನಾವು ಬಿಡುವುದಿಲ್ಲ. ನಮ್ಮ ಪಕ್ಷ ಸಂಪೂರ್ಣವಾಗಿ ಮೀಸಲಾತಿಗೆ ಬೆಂಬಲಿಸುತ್ತದೆ. ಮೀಸಲಾತಿ ಹೋಗುವುದಿಲ್ಲ. ನಾವು ಅದಕ್ಕಾಗಿ ಹೋರಾಡುತ್ತೇವೆ’ ಎಂದಿದ್ದಾರೆ

ಜಮ್ಮು ಕಾಶ್ಮೀರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಖರ್ಗೆ, ‘ ಹಿಂದೂ ಧರ್ಮದಲ್ಲಿ ಜಾತಿ ಪದ್ಧತಿ ಇರುವ ತನಕ ಮೀಸಲಾತಿ ರದ್ದಾಗುವುದಿಲ್ಲ. ಎಲ್ಲಿಯವರೆಗೆ ಅಸ್ಪೃಶ್ಯತೆ, ಸಾಮಾಜಿಕ ಅಸಮಾನತೆ ಇರುತ್ತದೆಯೋ ಅಲ್ಲಿಯ ತನಕ ಮೀಸಲಾತಿ ಮುಂದುವರೆಯುತ್ತದೆ. ನಾನು ಸಾಯುವ ತನಕವೂ ಮೀಸಲಾತಿ ಇರುತ್ತದೆ. ನನ್ನ ಮಕ್ಕಳಿಗೆ ಇದಕ್ಕೆ ಹೋರಾಡಲು ಹೇಳುತ್ತೇನೆ’ ಎಂದಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಮೈಸೂರು ಸ್ಯಾಂಡಲ್ ಸೋಪು ಉತ್ಪನ್ನ : ದಾಖಲೆ ಬರೆದ ಕೆಎಸ್‌ಡಿಎಲ್‌
ಮೇಘಾಲಯ ಮೇಲಿಲ್ಲ ಬಾಂಗ್ಲಾ ಸಂಘರ್ಷ ಪರಿಣಾಮ : ವಿಜಯ್‌