ಪಿಟಿಐ ನವದೆಹಲಿ
‘ರಾಷ್ಟ್ರೀಯ ಮಟ್ಟದಲ್ಲಿ ಜನಸಂಖ್ಯೆಯನ್ನು ಸ್ಥಿರಗೊಳಿಸಿದ್ದರೂ, ಎಲ್ಲಾ ಧರ್ಮಗಳು ಮತ್ತು ಪ್ರದೇಶಗಳಲ್ಲಿ ಇದು ಒಂದೇ ರೀತಿ ಸ್ಥಿರ ಆಗುತ್ತಿಲ್ಲ. ಕೆಲವು ಪ್ರದೇಶಗಳಲ್ಲಿ, ವಿಶೇಷವಾಗಿ ಗಡಿ ಜಿಲ್ಲೆಗಳಲ್ಲಿ ಗಮನಾರ್ಹ ಮುಸ್ಲಿಂ ಜನಸಂಖ್ಯೆಯ ಬೆಳವಣಿಗೆ ಆಗುತ್ತಿದೆ. ಅಂದರೆ ದೇಶದ ಗಡಿಗೆ ಹೊಂದಿಕೊಂಡಿರುವ ಪ. ಬಂಗಾಳ, ಬಿಹಾರ, ಅಸ್ಸಾಂ ಮತ್ತು ಉತ್ತರಾಖಂಡದಂಥ ರಾಜ್ಯಗಳಲ್ಲಿ ಅಕ್ರಮ ವಲಸೆಯಿಂದ ಅಸ್ವಾಭಾವಿಕ ಜನಸಂಖ್ಯಾ ಬೆಳವಣಿಗೆ ಆಗುತ್ತಿದೆ’ ಎಂದು ಕಳವಳ ವ್ಯಕ್ತಪಡಿಸಿದೆ.
‘ಪ್ರಜಾಪ್ರಭುತ್ವದಲ್ಲಿ ಶಾಸನಸಭಾ ಸಂಖ್ಯೆಗಳು ನಿರ್ಣಾಯಕವಾಗುತ್ತವೆ. ಇಂಥ ಶಾಸನಸಭಾ ಸಂಖ್ಯೆಗಳು ನಿರ್ಣಯ ಆಗುವುದು ಜನಸಂಖ್ಯೆ ಆಧರಿಸಿ. ಹೀಗಾಗಿ ಜನಸಂಖ್ಯಾ ಅಸಮತೋಲನದ ಪ್ರವೃತ್ತಿಯು ಸಂಸತ್ತಿನ ಸ್ಥಾನಗಳ ಮೇಲೆ ಪರಿಣಾಮ ಬೀರಬಹುದು. ಈ ಬಗ್ಗೆ ಇನ್ನಷ್ಟು ಜಾಗರೂಕರಾಗಿರಬೇಕು’ ಎಂದು ಅದು ಕರೆ ಕೊಟ್ಟಿದೆ.‘ಆದರೆ ಇಂದು ರಾಹುಲ್ ಗಾಂಧಿ ಹಿಂದೂಗಳಿಗೆ ಬೈಯುತ್ತಾರೆ. ಮಮತಾ ಬ್ಯಾನರ್ಜಿ ಮುಸ್ಲಿಂ ಮಂತ್ರ ಜಪಿಸುತ್ತಾರೆ. ಡಿಎಂಕೆ ನಾಯಕರು ಸನಾತನ ಧರ್ಮವನ್ನು ಬೈಯುತ್ತಾರೆ. ಇದಕ್ಕೆ ಮುಸ್ಲಿಂ ಮತ ಬ್ಯಾಂಕ್ ಹೆಚ್ಚಳದ ಕಾರಣ ಆ ಪಕ್ಷಗಳಲ್ಲಿ ಮೂಡಿರುವ ವಿಶ್ವಾಸವೇ ಕಾರಣ. ಇಂಥ ಪ್ರವೃತ್ತಿ ನಿಲ್ಲಬೇಕು ಎಂದರೆ ಸಮಗ್ರ ರಾಷ್ಟ್ರೀಯ ಜನಸಂಖ್ಯಾ ನೀತಿ ಜಾರಿಗೊಳಿಸಬೇಕು’ ಎಂದು ಆರ್ಗನೈಸ್ ಕರೆ ನೀಡಿದೆ.