ಉಕ್ರೇನ್‌ನಲ್ಲಿರುವ ಭಾರತೀಯ ಔಷಧ ಕಂಪನಿಯೊಂದರ ಮೇಲೆ ರಷ್ಯಾ ಕ್ಷಿಪಣಿ ದಾಳಿ : ಸಂಬಂಧದ ಮೇಲೆ ಪರಿಣಾಮ

KannadaprabhaNewsNetwork |  
Published : Apr 13, 2025, 02:06 AM ISTUpdated : Apr 13, 2025, 06:16 AM IST
ರಷ್ಯಾ | Kannada Prabha

ಸಾರಾಂಶ

ಉಕ್ರೇನ್‌ನಲ್ಲಿರುವ ಭಾರತೀಯ ಔಷಧ ಕಂಪನಿಯೊಂದರ ಗೋದಾಮಿನ ಮೇಲೆ ರಷ್ಯಾದ ಕ್ಷಿಪಣಿ ದಾಳಿ ಮಾಡಿದೆ. ಈ ದಾಳಿ ಭಾರತ-ರಷ್ಯಾ ಸಂಬಂಧದ ಮೇಲೆ ಕೊಂಚ ಪರಿಣಾಮ ಬೀರಬಹುದು ಎನ್ನಲಾಗಿದೆ.

ಕೀವ್: ಉಕ್ರೇನ್‌ನಲ್ಲಿರುವ ಭಾರತೀಯ ಔಷಧ ಕಂಪನಿಯೊಂದರ ಗೋದಾಮಿನ ಮೇಲೆ ರಷ್ಯಾದ ಕ್ಷಿಪಣಿ ದಾಳಿ ಮಾಡಿದೆ. ಈ ದಾಳಿ ಭಾರತ-ರಷ್ಯಾ ಸಂಬಂಧದ ಮೇಲೆ ಕೊಂಚ ಪರಿಣಾಮ ಬೀರಬಹುದು ಎನ್ನಲಾಗಿದೆ.

ರಷ್ಯಾ ‘ಉದ್ದೇಶಪೂರ್ವಕವಾಗಿ’ ಉಕ್ರೇನ್‌ನಲ್ಲಿರುವ ಭಾರತೀಯ ವ್ಯವಹಾರಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಭಾರತದಲ್ಲಿನ ಉಕ್ರೇನ್‌ನ ರಾಯಭಾರ ಕಚೇರಿ ಆರೋಪಿಸಿ ಟ್ವೀಟ್‌ ಮಾಡಿದೆ.

ಈ ನಡುವೆ, ‘ಇಂದು, ರಷ್ಯಾದ ಕ್ಷಿಪಣಿಯು ಉಕ್ರೇನ್‌ನಲ್ಲಿರುವ ಭಾರತೀಯ ಔಷಧ ಕಂಪನಿ ಕುಸುಮ್‌ನ ಗೋದಾಮಿನ ಮೇಲೆ ದಾಳಿ ಮಾಡಿದೆ. ಭಾರತದ ಜೊತೆ ‘ವಿಶೇಷ ಸ್ನೇಹ’ ಎಂದು ಹೇಳಿಕೊಳ್ಳುತ್ತಾ, ಮಾಸ್ಕೋ ಉದ್ದೇಶಪೂರ್ವಕವಾಗಿ ಭಾರತೀಯ ವ್ಯವಹಾರಗಳನ್ನು ಗುರಿಯಾಗಿಸಿಕೊಂಡಿದೆ. ಮಕ್ಕಳು ಮತ್ತು ವೃದ್ಧರಿಗೆ ಮೀಸಲಾದ ಔಷಧಿಗಳನ್ನು ನಾಶಪಡಿಸುತ್ತಿದೆ’ ಎಂದು ಉಕ್ರೇನ್‌ನ ರಾಯಭಾರ ಕಚೇರಿ ಕಿಡಿಕಾರಿದೆ.ಮೇ 9ಕ್ಕೆ ವಿಶ್ವಸಮರದ ವಿಜಯ ದಿವಸ ಆಚರಣೆಗೂ ಮುನ್ನ ಈ ದಾಳಿ ನಡೆದಿದೆ. ಇದಕ್ಕೆ ರಷ್ಯಾ ಸರ್ಕಾರ ಏನು ಪ್ರತಿಕ್ರಿಯೆ ನೀಡಲಿದೆ ಎಂಬುದು ಗಮನಾರ್ಹವಾಗಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಬಂಗಾಳದಲ್ಲಿ ಶೀಘ್ರ ಜಂಗಲ್‌ ರಾಜ್ಯ ಅಂತ್ಯ : ಮೋದಿ ಪಣ
ಈಗ ತೆಲಂಗಾಣದಲ್ಲೂ ದ್ವೇಷ ಭಾಷಣ ನಿಷೇಧ ಕಾಯ್ದೆ: ರೆಡ್ಡಿ