ಶಬರಿಮಲೆ ಚಿನ್ನಕ್ಕೆ ಕನ್ನ : ಟಿಡಿಬಿ ಮಾಜಿ ಅಧ್ಯಕ್ಷ ಬಂಧನ

KannadaprabhaNewsNetwork |  
Published : Nov 21, 2025, 01:45 AM ISTUpdated : Nov 21, 2025, 04:22 AM IST
padmakumar

ಸಾರಾಂಶ

ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲದ ಗರ್ಭಗುಡಿಯ ಬಾಗಿಲು ಮತ್ತು ದ್ವಾರಪಾಲಕ ವಿಗ್ರಹಗಳ ಚಿನ್ನಲೇಪಿತ ಕವಚಗಳಿಗೆ ಕನ್ನ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ತಿರುವಾಂಕೂರು ದೇವಸ್ವಂ ಮಂಡಳಿಯ (ಟಿಡಿಬಿ) ಮಾಜಿ ಅಧ್ಯಕ್ಷ ಎ. ಪದ್ಮಕುಮಾರ್‌ ಅವರನ್ನು ವಿಶೇಷ ತನಿಖಾ ತಂಡದ  ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ.

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲದ ಗರ್ಭಗುಡಿಯ ಬಾಗಿಲು ಮತ್ತು ದ್ವಾರಪಾಲಕ ವಿಗ್ರಹಗಳ ಚಿನ್ನಲೇಪಿತ ಕವಚಗಳಿಗೆ ಕನ್ನ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ತಿರುವಾಂಕೂರು ದೇವಸ್ವಂ ಮಂಡಳಿಯ (ಟಿಡಿಬಿ) ಮಾಜಿ ಅಧ್ಯಕ್ಷ ಎ. ಪದ್ಮಕುಮಾರ್‌ ಅವರನ್ನು ವಿಶೇಷ ತನಿಖಾ ತಂಡದ(ಎಸ್‌ಐಟಿ) ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ.

ಸಿಪಿಎಂ ಪಕ್ಷದ ಮಾಜಿ ಶಾಸಕರೂ

ಸಿಪಿಎಂ ಪಕ್ಷದ ಮಾಜಿ ಶಾಸಕರೂ ಆಗಿರುವ ಇವರು, 2019ರಲ್ಲಿ ಕವಚಗಳನ್ನು ಮರುಲೇಪನಕ್ಕಾಗಿ ಬೆಂಗಳೂರಿನ ಉನ್ನಿಕೃಷ್ಣನ್‌ ಪೊಟ್ಟಿಗೆ ಹಸ್ತಾಂತರಿಸುವಾಗ ಟಿಡಿಬಿಯ ಅಧ್ಯಕ್ಷರಾಗಿದ್ದರು. ಮರುಲೇಪನದ ಬಳಿಕ ಪೊಟ್ಟಿ ಕವಚಗಳನ್ನು ಹಿಂದಿರುಗಿಸುವಾಗ ಸುಮಾರು 4 ಕೆ.ಜಿ. ಚಿನ್ನ ಕಡಿಮೆಯಾಗಿತ್ತು. ಈ ಹಿನ್ನೆಲೆಯಲ್ಲಿ ಪದ್ಮಕುಮಾರ್‌ರನ್ನು ಬಂಧಿಸಿ, ಅಪರಾಧ ವಿಭಾಗದ ಕಚೇರಿಯಲ್ಲಿ ವಿಚಾರಣೆ ನಡೆಸಲಾಗಿದೆ. ಅವರನ್ನು ಕೊಲ್ಲಂನ ವಿಚಕ್ಷಣಾ ನ್ಯಾಯಾಲಯದೆದುರು ಹಾಜರುಪಡಿಸಲಾಗುವುದು ಎನ್ನಲಾಗಿದೆ.

ಶಬರಿಮಲೆ ನಿತ್ಯ ಸ್ಪಾಟ್‌ ಬುಕ್ಕಿಂಗ್‌ ಮಿತಿ 5000ಕ್ಕೆ ಇಳಿಸಿ ಟಿಡಿಬಿ ಆದೇಶ

ಪಟ್ಟಣಂತಿಟ್ಟ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿನ ಜನದಟ್ಟಣೆ ನಿರ್ವಹಿಸುವ ನಿಟ್ಟಿನಲ್ಲಿ, ಸ್ಪಾಟ್‌ ಬುಕ್ಕಿಂಗ್‌ (ಸ್ಥಳಕ್ಕೆ ಆಗಮಿಸಿದ ಬಳಿಕ ದೇವರ ದರ್ಶನಕ್ಕೆ ಪ್ರವೇಶ) ಮಿತಿಯನ್ನು 20000ದಿಂದ 5000ಕ್ಕೆ ಇಳಿಸಲಾಗಿದೆ. ಇದರಿಂದಾಗಿ ಮುಂಗಡ ಬುಕ್ಕಿಂಗ್ ಮಾಡಿದ 70000 ಜನರಿಗೆ ಮತ್ತು ಸ್ಪಾಟ್‌ಬುಕ್ಕಿಂಗ್‌ ಅವಕಾಶ ಪಡೆದ 5000 ಜನರಿಗೆ ಮಾತ್ರ ನಿತ್ಯ ದೇವರ ದರ್ಶನಕ್ಕೆ ಅವಕಾಶ ಸಿಗಲಿದೆ. 

ಈ ನಿರ್ಬಂಧ ನ.24ರವರೆಗೂ ಇರಲಿದೆ. ಜೊತೆಗೆ ಸ್ಪಾಟ್ ಬುಕಿಂಗ್‌ ವ್ಯವಸ್ಥೆ ನಿಲಕ್ಕಲ್‌, ವಂದಿಪೆರಿಯಾರ್‌ನ ಕೇಂದ್ರಕ್ಕೆ ಸೀಮಿತಗೊಳಿಸಲಾಗಿದೆ. ಪಂಪಾ, ಎರುಮೆಲಿ, ಚೆಂಗನೂರುನಲ್ಲಿ ಅವಕಾಶ ಸ್ಥಗಿತಗೊಳಿಸಲಾಗಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಬೆಂಗಳೂರಿನದ್ದು ಸೇರಿ 16 ಉಪಗ್ರಹಗಳು ಆಗಸದಲ್ಲೇ ಕಾಣೆ
ಅಣ್ಣಾಮಲೈ ರಸಮಲೈ ಎಂದು ರಾಜ್‌ ಠಾಕ್ರೆ ಕೀಳುಭಾಷೆ ಟೀಕೆ