ಶಬರಿಮಲೆ ಚಿನ್ನಕನ್ನ: ಕಾಂತಾರ ನಟಗೆ ಇ.ಡಿ. ಸಮನ್ಸ್‌

Published : Feb 07, 2026, 06:55 AM IST
jayaram

ಸಾರಾಂಶ

ಶಬರಿಮಲೆ ದ್ವಾರಪಾಲಕ ಮೂರ್ತಿ ಮತ್ತು ಗರ್ಭಗುಡಿ ದ್ವಾರದ ಚಿನ್ನ ಕಣ್ಮರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂತಾರ ಚಿತ್ರದ ಖ್ಯಾತಿಯ ಜಯರಾಂ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ನೋಟಿಸ್‌ ನೀಡಿದೆ.

 ಕೊಚ್ಚಿ: ಶಬರಿಮಲೆ ದ್ವಾರಪಾಲಕ ಮೂರ್ತಿ ಮತ್ತು ಗರ್ಭಗುಡಿ ದ್ವಾರದ ಚಿನ್ನ ಕಣ್ಮರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂತಾರ ಚಿತ್ರದ ಖ್ಯಾತಿಯ ಜಯರಾಂ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ನೋಟಿಸ್‌ ನೀಡಿದೆ.

ಚೆನ್ನೈನಲ್ಲಿ ಎಸ್‌ಐಟಿ ಎದುರು ಹಾಜರಾಗಿ ವಿಚಾರಣೆ

ಕೆಲ ದಿನಗಳ ಹಿಂದೆ ಜಯರಾಂ ಅವರು ಚೆನ್ನೈನಲ್ಲಿ ಎಸ್‌ಐಟಿ ಎದುರು ಹಾಜರಾಗಿ ವಿಚಾರಣೆ ಎದುರಿಸಿದ್ದರು. ಪೊಟ್ಟಿ ಮತ್ತು ಜಯರಾಂ ಒಟ್ಟಿಗೆ ಚೆನ್ನೈನಲ್ಲಿ ಕವಚಗಳಿಗೆ ಪೂಜೆ ಸಲ್ಲಿಸಿದ್ದ ವಿಡಿಯೋವೊಂದು ಬಹಿರಂಗವಾದ ನಂತರ ತನಿಖಾ ಸಂಸ್ಥೆಗಳು ಅವರ ಬೆನ್ನುಬಿದ್ದಿವೆ.

ಪೊಟ್ಟಿಗೂ ಇ.ಡಿ. ಬಿಸಿ?:

ಮತ್ತೊಂದೆಡೆ ಪ್ರಕರಣದಲ್ಲಿ ಬಂಧಿತನಾಗಿ ಗುರುವಾರವಷ್ಟೇ ಜಾಮೀನು ಮೇಲೆ ಬಿಡುಗಡೆ ಆದ ಪ್ರಮುಖ ಆರೋಪಿ, ಬೆಂಗಳೂರಿನ ಉನ್ನಿಕೃಷ್ಣನ್‌ ಪೊಟ್ಟಿಗೂ ಇ.ಡಿ. ಸಮನ್ಸ್‌ ನೀಡಲಿದೆ ಎಂದು ಮೂಲಗಳು ಹೇಳಿವೆ.

 

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಐಎಎಸ್‌, ಐಎಫ್ಎಸ್‌ಗಳಿಗೆ ಯುಪಿಎಸ್ಸಿ 2ನೇ ಚಾನ್ಸ್‌ ಇಲ್ಲ- ಯುಪಿಎಸ್ಸಿ ನಿಯಮ ಬದಲು
ಶ್ರೀಶೈಲ ದೇಗುಲ ಪ್ರಸಾದಕ್ಕೂ ತಿರುಪತಿ ರೀತಿ ಕಲಬೆರಕೆ ತುಪ್ಪ!