ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಸ್ಥಾನ: ಇಂದಿನಿಂದ ಮಂಡಲ ಪೂಜೆ, ಡಿ.26ರ ತನಕ ದರ್ಶನಕ್ಕೆ ಅವಕಾಶ

KannadaprabhaNewsNetwork |  
Published : Nov 15, 2024, 12:36 AM ISTUpdated : Nov 15, 2024, 04:49 AM IST
ಶಬರಿಮಲೆ | Kannada Prabha

ಸಾರಾಂಶ

ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಸ್ಥಾನವು ಮಂಡಲ ಪೂಜೆಗಾಗಿ ನ.15ರಂದು ತೆರೆಯಲಿದ್ದು, ಡಿ.26ರ ತನಕ ದರ್ಶನಕ್ಕೆ ಅವಕಾಶವಿದೆ.

ಪತ್ತನಂತಿಟ್ಟ: ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಸ್ಥಾನವು ಮಂಡಲ ಪೂಜೆಗಾಗಿ ನ.15ರಂದು ತೆರೆಯಲಿದ್ದು, ಡಿ.26ರ ತನಕ ದರ್ಶನಕ್ಕೆ ಅವಕಾಶವಿದೆ. ನಿತ್ಯ 70000 ಜನರಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲು ದೇಗುಲದ ಆಡಳಿತ ಮಂಡಳಿ ನಿರ್ಧರಿಸಿದ್ದು, ಒಂದು ವೇಳೆ ಜನಸಂದಣಿ ತೀರಾ ಹೆಚ್ಚಾದಲ್ಲಿ ಅರ್ಧಗಂಟೆ ಕಾಲ ದರ್ಶನದ ಸಮಯ ವಿಸ್ತರಿಸಲು ಚಿಂತಿಸಲಾಗಿದೆ. 

ಈಗಾಗಲೇ ವರ್ಚುವಲ್‌ ಕ್ಯೂ ಮೂಲಕ ಲಕ್ಷಾಂತರ ಭಕ್ತರು ನ.15- ಡಿ.29ರವರೆಗಿನ ಸಮಯವನ್ನು ಮುಂಗಡವಾಗಿ ಭೇಟಿಗಾಗಿ ಕಾದಿರಿಸಿದ್ದಾರೆ. ಇದರ ಜೊತೆಗೆ , ಪಂಪಾ, ಎರುಮೆಲಿ, ವಂದಿಪೆರಿಯಾರ್‌ಗಳಲ್ಲಿಯೂ ನಿತ್ಯ 10,000 ಭಕ್ತರಿಗೆ ಬುಕಿಂಗ್‌ ಮಾಡಿಸಲು ಅವಕಾಶವಿದ್ದು, ಇದಕ್ಕೆ ಆಧಾರ್‌ ಕಾರ್ಡ್‌, ವೋಟರ್‌ ಐಡಿ, ಪಾಸ್‌ಪೂರ್ಟ್‌ ಪ್ರತಿ ತೋರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

ಶಬರಿಮಲೆ ಯಾತ್ರಿಗರಿಗೆಂದೇ ಪ್ರತ್ಯೇಕ ಹವಾಮಾನ ಮಾಹಿತಿ

ತಿರುವನಂತಪುರ: ಅಮರನಾಥ ಹಾಗೂ ಚಾರ್‌ಧಾಮ್‌ ಯಾತ್ರೆಯ ವೇಳೆ ನೀಡಲಾಗುವಂತೆ, ಶಬರಿಮಲೆ ಯಾತ್ರಾರ್ಥಿಗಳಿಗೆಂದೇ ಪ್ರತ್ಯೇಕ ಹವಾಮಾನ ಮುನ್ಸೂಚನೆ ನೀಡಲು ಭಾರತೀಯ ಹವಾಮಾನ ಇಲಾಖೆ ನಿರ್ಧರಿಸಿದೆ. ಈ ಸಂಬಂಧ ಶಬರಿಮಲೆಯ 3 ಜಾಗಗಳಲ್ಲಿ ಮಳೆ, ಉಷ್ಣಾಂಶ ಮಾಪಕಗಳನ್ನು ಸ್ಥಾಪಿಸಲಾಗಿದೆ.

ಮೊದಲ ಹಂತದಲ್ಲಿ ಮುಂದಿನ ಮೂರು ದಿನಗಳ ಹವಾಮಾನ ಮಾಹಿತಿ ಹಂಚಿಕೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ಇದನ್ನು ತತ್‌ಕ್ಷಣದ ಮಾಹಿತಿ ನೀಡುವ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಐಎಂಡಿಯ ಸ್ಥಳೀಯ ನಿರ್ದೇಶಕಿ ನೀತಾ ಕೆ. ಗೋಪಾಲ್‌ ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಉಂಟಾಗುವ ತಾಪಮಾನ ಏರಿಕೆ, ಅಧಿಕ ತೇವಾಂಶ, ಭಾರೀ ಮಳೆಯನ್ನು ಗಮನದಲ್ಲಿಟ್ಟುಕೊಂಡು ಪಟ್ಟಣಂತಿಟ್ಟ ಜಿಲ್ಲಾಧಿಕಾರಿ ಮಾಡಿದ ಮನವಿಯಿಂದ ಈ ವ್ಯವಸ್ಥೆ ಮಾಡಲಾಗಿದೆ.==

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಸಿದ್ದು ಆಪ್ತ 20 ಶಾಸಕರಿಗೆಜಾರಕಿಹೊಳಿ ಔತಣಕೂಟ : ಬೆಳಗಾವೀಲೂ ಗರಿಗೆದರಿದ ಬಣ ರಾಜಕೀಯ
ದಿಲ್ಲಿಯಲ್ಲಿ ಜ.1ರಿಂದ ಕೇಂದ್ರದ ಭಾರತ್‌ ಟ್ಯಾಕ್ಸಿ ಸಂಚಾರ