ನಾಗಚೈತನ್ಯ ಮತ್ತು ಸಮಂತಾ ಅವರ ವಿಚ್ಛೇದನ ಜಕೀಯ ಪಿತೂರಿ ಆರೋಪ : ಸಚಿವೆ ವಿರುದ್ಧ ನಾಗಾರ್ಜುನ ಮಾನನಷ್ಟ ಮೊಕದ್ದಮೆ

KannadaprabhaNewsNetwork |  
Published : Oct 04, 2024, 01:01 AM ISTUpdated : Oct 04, 2024, 04:13 AM IST
ವಿಚ್ಛೇದನ | Kannada Prabha

ಸಾರಾಂಶ

ನಟ ನಾಗಚೈತನ್ಯ ಮತ್ತು ಸಮಂತಾ ಅವರ ವಿಚ್ಛೇದನದ ಬಗ್ಗೆ ತೆಲಂಗಾಣ ಸಚಿವೆ ಕೊಂಡಾ ಸುರೇಖಾ ಮಾಡಿದ್ದ ಆರೋಪದ ವಿರುದ್ಧ ನಟ ನಾಗಾರ್ಜುನ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ನಾಗಚೈತನ್ಯ ಮತ್ತು ಸಮಂತಾ ಇಬ್ಬರೂ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಪಡೆದಿದ್ದಾಗಿ ಸ್ಪಷ್ಟಪಡಿಸಿದ್ದಾರೆ.

ಹೈದರಾಬಾದ್‌: ‘ನಟ ನಾಗಚೈತನ್ಯ ಮತ್ತು ನಟಿ ಸಮಂತಾ ದೂರವಾಗಲು ಬಿಎಸ್‌ಆರ್‌ ಮುಖಂಡ ಕೆ.ಟಿ. ರಾಮರಾವ್ ಕಾರಣ’ ಎಂದಿದ್ದ ತೆಲಂಗಾಣ ಸಚಿವೆ ಕೊಂಡಾ ಸುರೇಖಾ ವಿರುದ್ಧ ನಟ ಅಕ್ಕಿನೇನಿ ನಾಗಾರ್ಜುನ ಮಾನಹಾನಿ ದಾವೆ ದಾಖಲಿಸಿದ್ದಾರೆ. ಇನ್ನು ಕೆ. ಟಿ ರಾಮರಾವ್ ಕೂಡ, ‘ನಿಮ್ಮ ಹೇಳಿಕೆ ಹಿಂತೆಗೆದುಕೊಳ್ಳಿ’ ಎಂದು ಸುರೇಖಾಗೆ ಲೀಗಲ್‌ ನೋಟಿಸ್‌ ಕಳಿಸಿದ್ದಾರೆ.

ಸಚಿವೆ ಸುರೇಖಾ ವಿರುದ್ಧ ನಾಗಚೈತನ್ಯ ಅವರ ತಂದೆ ನಾಗಾರ್ಜುನ ನಾಂಪಲ್ಲಿ ಕೋರ್ಟಿನಲ್ಲಿ ಮಾನಹಾನಿ ದಾವೆ ಹೂಡಿದ್ದು, ‘ಅಕ್ಕಿನೇನಿ ಕುಟುಂಬ ಹಾಗೂ ನನ್ನ ಮಗನ ಹೆಸರು ಕೆಡಿಸುವ ಏಕೈಕ ಉದ್ದೇಶದಿಂದ ಸುರೇಖಾ ಈ ಸುಳ್ಳು ಆರೋಪ ಮಾಡಿದ್ದಾರೆ’ ಎಂದು ದೂರಿದ್ದಾರೆ. ನಾಗಚೈತನ್ಯ ಅವರು ದೂರಿನ ಪ್ರತಿಯನ್ನು ತಮ್ಮ ಇನ್‌ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಒಪ್ಪಿಗೆಯಿಂದ ದೂರ: ನಾಗ, ಸಮಂತಾ ಸ್ಪಷ್ಟನೆ

ಹೈದರಾಬಾದ್: ‘ನಾವಿಬ್ಬರು ಪರಸ್ಪರ ಒಪ್ಪಂದದ ಮೇರೆಗೆ ವಿಚ್ಛೇದನ ಪಡೆದಿದ್ದೇವೆ’ ಎಂದು ಸಮಂತಾ ಮತ್ತು ನಾಗಚೈತನ್ಯ ಸ್ಪಷ್ಟ ಪಡಿಸಿದ್ದಾರೆ.

ಈ ಕುರಿತು ಇನ್‌ಸ್ಟಾ ಖಾತೆಯಲ್ಲಿ ಬರೆದಿರುವ ಸಮಂತಾ ‘ನನ್ನ ವಿಚ್ಛೇದನ ವೈಯಕ್ತಿಕ ವಿಚಾರ. ಇದನ್ನು ಊಹಾಪೋಹಾದಿಂದ ದೂರವಿಡಿ. ಪರಸ್ಪರ ಒಪ್ಪಿಗೆಯಿಂದ ವಿಚ್ಛೇದನವಾಗಿದೆ. ಇದರಲ್ಲಿ ರಾಜಕೀಯ ಪಿತೂರಿಯಿಲ್ಲ’ ಎಂದಿದ್ದಾರೆ.

ನಾಗಚೈತನ್ಯ ಕೂಡ ಪ್ರತಿಕ್ರಿಯಿಸಿದ್ದು, ‘ಬಹಳಷ್ಟು ಯೋಚನೆಗಳ ನಂತರ ನಾನು ಮತ್ತು ನನ್ನ ಮಾಜಿ ಸಂಗಾತಿ ಒಪ್ಪಂದದ ಮೇರೆಗೆ ವಿಚ್ಛೇದನ ಪಡೆದಿದ್ದೇವೆ’ ಎಂದಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಸಿದ್ದು ಆಪ್ತ 20 ಶಾಸಕರಿಗೆಜಾರಕಿಹೊಳಿ ಔತಣಕೂಟ : ಬೆಳಗಾವೀಲೂ ಗರಿಗೆದರಿದ ಬಣ ರಾಜಕೀಯ
ದಿಲ್ಲಿಯಲ್ಲಿ ಜ.1ರಿಂದ ಕೇಂದ್ರದ ಭಾರತ್‌ ಟ್ಯಾಕ್ಸಿ ಸಂಚಾರ