ಕನ್ನಡಿಗ ಸುಪ್ರೀಂ ಜಡ್ಜ್‌ ಎ.ಎಸ್‌. ಬೋಪಣ್ಣ ನಿವೃತ್ತಿ

KannadaprabhaNewsNetwork |  
Published : May 18, 2024, 12:31 AM ISTUpdated : May 18, 2024, 06:39 AM IST
supreme court 02.jpg

ಸಾರಾಂಶ

ಕರ್ನಾಟಕ ಮೂಲದ ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾ। ಎ.ಎಸ್‌. ಬೋಪಣ್ಣ ಶುಕ್ರವಾರ ನಿವೃತ್ತರಾದರು. ಇವರಿಗೆ ಮುಖ್ಯ ನ್ಯಾ। ಡಿ.ವೈ.ಚಂದ್ರಚೂಡ್‌ ಅವರು ಬೀಳ್ಕೊಟ್ಟರು.

ನವದೆಹಲಿ: ಕರ್ನಾಟಕ ಮೂಲದ ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾ। ಎ.ಎಸ್‌. ಬೋಪಣ್ಣ ಶುಕ್ರವಾರ ನಿವೃತ್ತರಾದರು. ಇವರಿಗೆ ಮುಖ್ಯ ನ್ಯಾ। ಡಿ.ವೈ.ಚಂದ್ರಚೂಡ್‌ ಅವರು ಬೀಳ್ಕೊಟ್ಟರು. 

1959ರಲ್ಲಿ ಜನಿಸಿದ ಬೋಪಣ್ಣ ಅವರು 1984ರಲ್ಲಿ ವಕೀಲರಾಗಿ ಸೇವೆ ಆರಂಭಿಸಿದರು. ಬಳಿಕ 2006ರಲ್ಲಿ ಕರ್ನಾಟಕ ಹೈಕೋರ್ಟ್‌ಗೆ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು. 

ಬಳಿಕ 2007ರಲ್ಲಿ ಖಾಯಂ ಆಗಿ ಸೇವೆ ಆರಂಭಿಸಿದರು. 2018ರಲ್ಲಿ ಗುವಾಹಟಿ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳಾಗಿ ಅಧಿಕಾರ ವಹಿಸಿಕೊಂಡಿದ್ದರು. ಬಳಿಕ 2019ರಲ್ಲಿ ಸುಪ್ರೀಂ ಕೋರ್ಟ್‌ ನ್ಯಾಯಾಧೀಶರಾಗಿ ಪದೋನ್ನತಿ ಹೊಂದಿದರು. 2016ರಲ್ಲಿ ನೋಟು ಅಮಾನ್ಯೀಕರಣ ನಿರ್ಧಾರದ ವಿರುದ್ಧ ಸಲ್ಲಿಸಿದ್ದ ಅರ್ಜಿಗಳ ತೀರ್ಪು ನೀಡುವಲ್ಲಿ ಇವರೂ ಒಬ್ಬರಾಗಿದ್ದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಬಾಂಗ್ಲಾ ಹಿಂದು ಯುವಕನ ನರಮೇಧಬಡಿದು ಕೊಂದು, ಮರಕ್ಕೆ ಕಟ್ಟಿ ಸುಟ್ಟು ಅಟ್ಟಹಾಸ । ಇಸ್ಲಾಮಿಕ್‌ ನಾಯಕನ ಹತ್ಯೆ ಬೆನ್ನಲ್ಲೇ ಹಿಂಸೆಟಾಪ್‌- ಬಾಂಗ್ಲಾ ಶೇಕ್‌- ಭಾರತೀಯ ರಾಯಭಾರಿಗಳ ಮನೆಗೆ ಕಲ್ಲೆಸೆತ । ಭಾರತ, ಹಿಂದು ವಿರೋಧಿ ಘೋಷಣೆ
ಹೂಡಿಕೆಗೆ ಕರೆ ನೀಡುವ ಸುಧಾಮೂರ್ತಿ ಡೀಪ್‌ಫೇಕ್‌ ವಿಡಿಯೋ ವೈರಲ್‌