ನವದೆಹಲಿ: ಚುನಾವಣಾ ಆಯುಕ್ತರ ಆಯ್ಕೆ ಸಮಿತಿ ಬಗ್ಗೆ 2023ರಲ್ಲಿ ಕೇಂದ್ರ ಸರ್ಕಾರ ರೂಪಿಸಿರುವ ಕಾಯ್ದೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ಕುರಿತು ಸುಪ್ರೀಂಕೋರ್ಟ್ ಬುಧವಾರ ವಿಚಾರಣೆ ನಡೆಸಲಿದೆ.
==
ನೂತನ ಸಿಇಸಿಯಾಗಿ ಇಂದು ಜ್ಞಾನೇಶ್ ಅಧಿಕಾರ ಸ್ವೀಕಾರನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರ ಅವಧಿ ಮಂಗಳವಾರ ಮುಕ್ತಾಯವಾಯಿತು. ನೂತನ ಸಿಇಸಿಯಾಗಿ ಆಯ್ಕೆಯಾಗಿರುವ ಜ್ಞಾನೇಶ್ ಕುಮಾರ್ ಬುಧವಾರ ಅಧಿಕಾರ ಸ್ವೀಕರಿಸಲಿದ್ದಾರೆ. ಇವರ ಅವಧಿ 2029ರ ಜ.26ರ ವರೆಗೆ ಇರಲಿದೆ. ಈ ನಡುವೆ ಜ್ಞಾನೇಶ್ ಅವರ ಜಾಗಕ್ಕೆ 1989ನೇ ಬ್ಯಾಚ್ನ ಐಎಎಸ್ ಅಧಿಕಾರಿ ವಿವೇಕ್ ಜೋಶಿ ಚುನಾವಣಾ ಆಯುಕ್ತರಾಗಿ ನೇಮಕವಾಗಿದ್ದಾರೆ.ಈ ಹಿಂದಿನ ನೀತಿಯ ಅನ್ವಯ ಪ್ರಧಾನಿ, ಲೋಕಸಭೆಯ ವಿಪಕ್ಷ ನಾಯಕ ಮತ್ತು ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳ ಸಮಿತಿ ಇಸಿ ಮತ್ತು ಸಿಇಸಿಗಳ ನೇಮಕ ಮಾಡುತ್ತಿತ್ತು. ಆದರೆ 2023ರಲ್ಲಿ ಕೇಂದ್ರ ಸರ್ಕಾರ ಹೊಸ ಕಾಯ್ದೆಯ ಮೂಲಕ ಪ್ರಧಾನಿ, ಲೋಕಸಭೆ ವಿಪಕ್ಷ ನಾಯಕ ಮತ್ತು ಪ್ರಧಾನಿ ಸೂಚಿಸುವ ಕೇಂದ್ರ ಸಚಿವರೊಬ್ಬರನ್ನು ಸಮಿತಿ ಸದಸ್ಯರೆಂದು ಬದಲಾವಣೆ ಮಾಡಿತ್ತು.
ಕರ್ನಾಟಕದ ಮಾಜಿ ರಾಜ್ಯಪಾಲೆ ರಮಾದೇವಿ ಆಯ್ಕೆ ಕೆದಕಿದ ಬಿಜೆಪಿ
‘ಇನ್ನು ಮುಖ್ಯ ಚುನಾವಣಾ ಆಯುಕ್ತರಾಗಿದ್ದ ಕೆವಿಕೆ ಸುರೇಂದ್ರನ್ ಅವರಿಗೆ ಪದ್ಮಪ್ರಶಸ್ತಿ ಹಾಗೂ ಕಾನೂನು ಆಯೋಗದ ಮುಖ್ಯಸ್ಥ ಹುದ್ದೆ ನೀಡಲಾಯಿತು. ಟಿ.ಎನ್. ಶೇಷನ್ ಅವರಿಗೆ ಕಾಂಗ್ರೆಸ್ನಿಂದ 1996ರಲ್ಲಿ ಟಿಕೆಟ್ ನೀಡಲಾಗಿತ್ತು. ಎಂ.ಎಸ್. ಗಿಲ್ ಅವರನ್ನು ರಾಜ್ಯಸಭೆ ಸದಸ್ಯರನ್ನಾಗಿ ಮಾಡಿ ಕೇಂದ್ರ ಮಂತ್ರಿ ಮಾಡಲಾಗಿತ್ತು. ಜೆ.ಎಂ. ಲಿಂಗ್ಡೋ ಕಾಂಗ್ರೆಸ್ ಸೇರಿದ್ದರು. ಎನ್. ಗೋಪಾಲಸ್ವಾಮಿ ಅವರಿಗೆ ಪದ್ಮಭೂಷಣ ನೀಡಲಾಗಿತ್ತು. ಈ ರೀತಿ ಆಯುಕ್ತರನ್ನು ಕಾಂಗ್ರೆಸ್ ತನ್ನ ಲಾಭಕ್ಕೆ ಬಳಸಿಕೊಂಡಿತ್ತು’ ಎಂದು ಅವರು ಕಿಡಿಕಾರಿದ್ದಾರೆ.
ಮಧ್ಯರಾತ್ರಿ ಸಿಇಸಿ ಆಯ್ಕೆ ಸಂವಿಧಾನದ ಸ್ಫೂರ್ತಿಗೆ ಮಾಡಿದ ಅಪಚಾರ: ರಾಹುಲ್
ಎಕ್ಸ್ ಪೋಸ್ಟ್ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸಿರುವ ರಾಹುಲ್, ‘ಮುಖ್ಯ ಚುನಾವಣಾ ಆಯುಕ್ತರು ಹಾಗೂ ಅನ್ಯ ಆಯುಕ್ತರ ಆಯ್ಕೆಯಲ್ಲಿ ಕಾರ್ಯಾಂಗದ ಹಸ್ತಕ್ಷೇಪ ಇರಬಾರದು. ಸುಪ್ರೀಂ ಕೋರ್ಟ್ನ ಆದೇಶವನ್ನು ಉಲ್ಲಂಘಿಸಿ ಆಯ್ಕೆ ಸಮಿತಿಯಿಂದ ಮುಖ್ಯ ನ್ಯಾಯಮೂರ್ತಿಗಳನ್ನು ತೆಗೆದುಹಾಕುವ ಮೂಲಕ ಮೋದಿ ಸರ್ಕಾರ ಲಕ್ಷಾಂತರ ಮತದಾರರ ಕಳವಳಕ್ಕೆ ಕಾರಣವಾಗಿದೆ’ ಎಂದರು.ಇದೇ ವೇಳೆ, 1949ರಲ್ಲಿ ಸಂವಿಧಾನ ಸಭೆಯಲ್ಲಿ ಸ್ವತಂತ್ರ ಚುನಾವಣಾ ಆಯೋಗ ಸ್ಥಾಪನೆಯ ಬಗ್ಗೆ ಮಾತನಾಡಿದ್ದ ಬಿ.ಆರ್. ಅಂಬೇಡ್ಕರ್ ಅವರು ಕಾರ್ಯಾಂಗದ ಹಸ್ತಕ್ಷೇಪದ ಬಗ್ಗೆ ಎಚ್ಚರಿಸಿದ್ದರು ಎಂದೂ ರಾಹುಲ್ ನೆನಪಿಸಿದರು. ಜೊತೆಗೆ, ಆಯ್ಕೆ ಸಮಿತಿಯಲ್ಲಿ ಪ್ರಧಾನಿ, ವಿಪಕ್ಷ ನಾಯಕ ಹಾಗೂ ಮುಖ್ಯ ನ್ಯಾಯಮೂರ್ತಿ ಇರಬೇಕು ಎಂಬ ಸುಪ್ರೀಂ ಕೋರ್ಟ್ನ 2023ರ ಮಾ.2ರ ತೀರ್ಪನ್ನು ಉಲ್ಲೇಖಿಸುತ್ತಾ, ‘ಕೇಂದ್ರ ಸರ್ಕಾರವು ಮುಖ್ಯ ನ್ಯಾಯಮೂರ್ತಿಗಳ ಬದಲಿಗೆ ಕೇಂದ್ರ ಸಚಿವರೊಬ್ಬರನ್ನು ನೇಮಿಸಿತು’ ಎಂದರು.