ಮುಂಬೈ: ಮಹಾರಾಷ್ಟ್ರದ ಮಹಾಯುತಿ ಸರ್ಕಾರದಲ್ಲಿ ಫಡ್ನವೀಸ್ ಮತ್ತು ಡಿಸಿಎಂ ಏಕನಾಥ್ ಶಿಂಧೆ ನಡುವೆ ಬಿರುಕು ಮೂಡಿರುವ ಹೊತ್ತಿನಲ್ಲೇ, ಶಿಂಧೆ ಬಣದ ಶಿವಸೇನೆಯ 20 ಶಾಸಕರಿಗೆ ನೀಡಲಾಗಿದ್ದ ವೈ ಶ್ರೇಣಿಯ ಭದ್ರತೆಯನ್ನು ಸರ್ಕಾರ ಹಿಂದಕ್ಕೆ ಪಡೆದಿದೆ. ಇದು ಮುಂಬರುವ ದಿನಗಳಲ್ಲಿ ಎರಡೂ ಪಕ್ಷಗಳ ನಡುವಿನ ವೈಮನಸ್ಯವನ್ನು ಇನ್ನಷ್ಟು ದೊಡ್ಡ ಮಾಡುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗಿದೆ.
2022ರಲ್ಲಿ ಶಿಂಧೆ ಶಿವಸೇನೆಯಿಂದ ಬಂಡಾಯವೆದ್ದು ಬಿಜೆಪಿಯೊಂದಿಗೆ ಕೈಜೋಡಿಸಿದ್ದಾಗ ಸರ್ಕಾರದಿಂದ ಪಕ್ಷದ 44 ಶಾಸಕರು ಹಾಗೂ 11 ಲೋಕಸಭಾ ಸದಸ್ಯರಿಗೆ ವೈ ಶ್ರೇಣಿಯ ಭದ್ರತೆ ಒದಗಿಸಲಾಗಿತ್ತು. ಇದೀಗ ಅದನ್ನು ಕಡಿತ ಮಾಡಲಾಗಿದೆ.
ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ ದೇವೆಂದ್ರ ಫಡ್ನವೀಸ್, ‘ಕಾಲಕಾಲಕ್ಕೆ ನಡೆಯುವ ಭದ್ರತಾ ಪರಿಶೀಲನಾ ಸಮಿತಿಯ ಶಿಫಾರಸಿನನ್ವಯ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದರಲ್ಲಿ ರಾಜಕೀಯ ಹಸ್ತಕ್ಷೇಪ ಇಲ್ಲ’ ಎಂದು ಸ್ಪಷ್ಟನೆ ನೀಡಿದ್ದಾರೆ.ಈ ಬಿರುಕು ಹೊಸತಲ್ಲ: