ಗುಂಡಿಕ್ಕಿಕೊಂಡು ಹರ್ಯಾಣ ಐಪಿಎಸ್‌ ಅಧಿಕಾರಿ ಆತ್ಮ*ತ್ಯೆ

KannadaprabhaNewsNetwork |  
Published : Oct 08, 2025, 01:00 AM IST
ಆತ್ಮಹತ್ಯೆ  | Kannada Prabha

ಸಾರಾಂಶ

ಹರ್ಯಾಣದ ಹಿರಿಯ ಪೊಲೀಸ್‌ ಅಧಿಕಾರಿ ವೈ. ಪೂರಣ್‌ ಕುಮಾರ್‌ ಅವರು ಇಲ್ಲಿನ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರು ತಮಗೆ ತಾವೇ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಚಂಡೀಗಢ: ಹರ್ಯಾಣದ ಹಿರಿಯ ಪೊಲೀಸ್‌ ಅಧಿಕಾರಿ ವೈ. ಪೂರಣ್‌ ಕುಮಾರ್‌ ಅವರು ಇಲ್ಲಿನ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರು ತಮಗೆ ತಾವೇ ಗುಂಡು ಹೊಡೆದುಕೊಂಡು ಆತ್ಮ*ತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.  

2001ನೇ ಬ್ಯಾಚ್‌ನ ಪೊಲೀಸ್‌ ಅಧಿಕಾರಿಯಾಗಿರುವ ಇವರು, ರೊಹ್ಟಕ್‌ನಲ್ಲಿರುವ ಪೊಲೀಸ್‌ ತರಬೇತಿ ಕೇಂದ್ರದ ಐಜಿ ಆಗಿದ್ದರು. ‘ಮಂಗಳವಾರ ಮಧ್ಯಾಹ್ನ 1:30ರ ಸುಮಾರಿಗೆ ಪೂರಣ್‌ರ ನಿವಾಸದಲ್ಲಿ ಶವ ಪತ್ತೆಯಾಗಿರುವ ಮಾಹಿತಿ ದೊರಕಿದ್ದು, ಸೆಕ್ಟರ್‌ 11ರ ಠಾಣಾಧಿಕಾರಿಯವರ ತಂಡ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.  

ಮೃತದೇಹವು ಪೂರಣ್‌ರದ್ದೇ ಎಂಬುದು ಧೃಡಪಟ್ಟಿದ್ದು, ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯಿದೆ. ವಿಧಿವಿಜ್ಞಾನ ತಂಡ ಸ್ಥಳದಲ್ಲಿ ತನಿಖೆ ನಡೆಸುತ್ತಿದೆ’ ಎಂದು ಚಂಡೀಗಢದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ವೈದ್ಯೆಯ ಹಿಜಾಬ್‌ ಎಳೆದ ಸಿಎಂ ನಿತೀಶ್‌: ವಿವಾದ
ಜ.14ರ ನಂತರ ನಿತಿನ್‌ಗೆ ಬಿಜೆಪಿ ಅಧ್ಯಕ್ಷ ಗಾದಿ?