ಕಾನೂನು ಹೋರಾಟದ ಸಮಸ್ಯೆಯಿಂದ ಮುಕ್ತಿ
ನ್ಯಾ. ಕಾಂತ್ ಕನಸಿನಂತೆ ನವೆಂಬರ್ನಲ್ಲಿ ಶುರು
ನವದೆಹಲಿ: ದೇಶಸೇವೆಗೆ ಪ್ರಾಣವನ್ನೇ ಮುಡಿಪಾಗಿಟ್ಟಿರುವ ಸೈನಿಕರಿಗೆ ಸಹಾಯ ಮಾಡುವ ಉದ್ದೇಶದಿಂದ, ಅವರ ಪರಿವಾರಗಳಿಗೆ ಉಚಿತವಾಗಿ ಕಾನೂನು ನೆರವನ್ನು ಕೊಡಲು ಸರ್ಕಾರ ಮುಂದಾಗಿದೆ. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ (ನಲ್ಸಾ)ವು ವೀರ ಪರಿವಾರ ಸಹಾಯತಾ ಯೋಜನೆ 2025 ಅಡಿಯಲ್ಲಿ ಹಾಲಿ ಮತ್ತು ನಿವೃತ್ತ ಯೋಧರಿಗೆ ಭೂವ್ಯಾಜ್ಯ, ಕೌಟುಂಬಿಕ ಕಲಹ ಮೊದಲಾದ ವಿಷಯಗಳಲ್ಲಿ ಉಚಿತ ಕಾನೂನು ಸೇವೆ ನೀಡಲಿದೆ.ನ್ಯಾ.ಕಾಂತ್ ಕನಸು:
ಉಪಯೋಗವೇನು?:
ವರ್ಷದಲ್ಲಿ ಹಲವು ತಿಂಗಳು ಮನೆಯಿಂದ ದೂರವಿರುವ ಸೈನಿಕರು, ಭೂಮಿ, ಆಸ್ತಿ, ಕೌಟುಂಬಿಕ ಬಿಕ್ಕಟ್ಟುಗಳಂತಹ ಸಮಸ್ಯೆಗಳು ಕಾನೂನು ಪ್ರಕ್ರಿಯೆಗಳಿಗೆ ಒಳಗಾಗಿದ್ದರೆ, ಬೇಕೆಂದಾಗ ಊರಿಗೆ ಮರಳಲಾಗುವುದಿಲ್ಲ. ಕೆಲವು ಪ್ರಕರಣಗಳಲ್ಲಿ ಯೋಧರ ಕುಟುಂಬಕ್ಕೆ ಸೂಕ್ತ ರೀತಿಯ ಕಾನೂನು ನೆರವು ಸಿಕ್ಕಿರುವುದಿಲ್ಲ. ಹೀಗಿರುವಾಗ, ಅಂಥವರ ಅನುಕೂಲಕ್ಕಾಗಿ ನಾಲ್ಸಾ ಅವರ ನೆರವಿಗೆ ಬಂದು, ಸುಗಮ ಪ್ರಕ್ರಿಯೆಗೆ ಸಹಕಾರಿಯಾಗುತ್ತದೆ.ಈ ಸೌಲಭ್ಯವು ಬಿಎಸ್ಎಫ್, ಸಿಆರ್ಪಿಎಫ್, ಐಟಿಬಿಪಿ ಸೇರಿದಂತೆ ಅರೆಸೇನಾಪಡೆಗಳಲ್ಲಿರುವವರಿಗೂ ಲಭಿಸುತ್ತದೆ.