ಬಿಜೆಪಿಯಲ್ಲಿ 7 ಜನ ಆಪ್‌ ಸಂಸದರ ವಿಲೀನಕ್ಕೆ ಅಸ್ತು

Published : Apr 28, 2026, 07:52 AM IST
raghav chadha

ಸಾರಾಂಶ

ಆಪ್‌ ತೊರೆದು ಬಿಜೆಪಿ ಸೇರಿದ್ದ ರಾಜ್ಯಸಭೆ ಸದಸ್ಯರಾದ ರಾಘವ್ ಚಡ್ಢಾ, ಹರ್ಭಜನ್ ಸಿಂಗ್‌ ಸೇರಿದಂತೆ 7 ಮಂದಿಯ ಬಿಜೆಪಿ ಜತೆಗಿನ ವಿಲೀನವನ್ನು ಉಪರಾಷ್ಟ್ರಪತಿ, ರಾಜ್ಯಸಭೆಯ ಸಭಾಪತಿ ಸಿ.ಪಿ. ರಾಧಾಕೃಷ್ಣನ್‌ ಅಂಗೀಕರಿಸಿದ್ದಾರೆ. ಈ ಮೂಲಕ ಸಂಸತ್‌ ಮೇಲ್ಮನೆಯಲ್ಲಿ ಬಿಜೆಪಿ ಸದಸ್ಯ ಬಲ 113ಕ್ಕೆ ಏರಿಕೆಯಾಗಿದ್ದರೆ, ಆಪ್‌ನ ಬಲ 3ಕ್ಕೆ ಕುಸಿದಿದೆ.

 ನವದೆಹಲಿ: ಆಪ್‌ ತೊರೆದು ಬಿಜೆಪಿ ಸೇರಿದ್ದ ರಾಜ್ಯಸಭೆ ಸದಸ್ಯರಾದ ರಾಘವ್ ಚಡ್ಢಾ, ಹರ್ಭಜನ್ ಸಿಂಗ್‌ ಸೇರಿದಂತೆ 7 ಮಂದಿಯ ಬಿಜೆಪಿ ಜತೆಗಿನ ವಿಲೀನವನ್ನು ಉಪರಾಷ್ಟ್ರಪತಿ, ರಾಜ್ಯಸಭೆಯ ಸಭಾಪತಿ ಸಿ.ಪಿ. ರಾಧಾಕೃಷ್ಣನ್‌ ಅಂಗೀಕರಿಸಿದ್ದಾರೆ. ಈ ಮೂಲಕ ಸಂಸತ್‌ ಮೇಲ್ಮನೆಯಲ್ಲಿ ಬಿಜೆಪಿ ಸದಸ್ಯ ಬಲ 113ಕ್ಕೆ ಏರಿಕೆಯಾಗಿದ್ದರೆ, ಆಪ್‌ನ ಬಲ 3ಕ್ಕೆ ಕುಸಿದಿದೆ.

ಶುಕ್ರವಾರವಷ್ಟೇ ಆಪ್‌ಗೆ ರಾಜೀನಾಮೆ ನೀಡಿ, ಬಿಜೆಪಿ ಸೇರಿದ 7 ಸಂಸದರನ್ನು ರಾಜ್ಯಸಭೆಯಲ್ಲೂ ಬಿಜೆಪಿ ಸದಸ್ಯರಾಗಿ ಪರಿಗಣಿಸುವಂತೆ ಬಿಜೆಪಿ, ರಾಜ್ಯಸಭಾಧ್ಯಕ್ಷರಿಗೆ ಮನವಿ ಮಾಡಿತ್ತು.

ಈ ಬಗ್ಗೆ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಪ್ರತಿಕ್ರಿಯಿಸಿ ‘ ರಾಜ್ಯಸಭೆಯ ಗೌರವಾನ್ವಿತ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ 7 ಆಪ್‌ ಸಂಸದರ ವಿಲೀನವನ್ನು ಒಪ್ಪಿಕೊಂಡಿದ್ದಾರೆ. ಅವರು ತುಕ್ಡೆ- ತುಕ್ಡೆ ಇಂಡಿಯಾ ಕೂಟಕ್ಕೆ ವಿದಾಯ ಹೇಳಿದ್ದಾರೆ. ಬಿಜೆಪಿ ಸಂಸದರಾಗಿದ್ದಾರೆ‘ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಯಾರ್ಯಾರು ಸೇರ್ಪಡೆ?:

ರಾಘವ್ ಚಡ್ಢಾ, ಅಶೋಕ್‌ ಮಿತ್ತಲ್‌, ಹರ್ಭಜನ್‌ ಸಿಂಗ್‌, ಸಂದೀಪ್ ಪಾಠಕ್‌, ವಿಕ್ರಮಜಿತ್ ಸಾಹ್ನಿ, ಸ್ವಾತಿ ಮಲಿವಾಲ್‌, ರಾಜೀಂದರ್‌ ಗುಪ್ತಾ, ಬಿಜೆಪಿ ಸೇರಿದ ಸಂಸದರಾಗಿದ್ದಾರೆ.

ರಾಜ್ಯಸಭೆಯಲ್ಲಿ ಎನ್‌ಡಿಎ ಬಲ 148ಕ್ಕೆ

7 ಆಪ್‌ ಸಂಸದರ ಸೇರ್ಪಡೆಯೊಂದಿಗೆ ರಾಜ್ಯಸಭೆಯಲ್ಲಿ ಎನ್‌ಡಿಎ ಬಲ 148ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ಸಂಸತ್ತಿನ ಮೇಲ್ಮನೆಯಲ್ಲಿ 3ನೇ 2ರಷ್ಟು ಬಹುಮತಕ್ಕೆ (163) ಎನ್‌ಡಿಎ ಇನ್ನಷ್ಟು ಹತ್ತಿರವಾಗಿದೆ. ಈ ವರ್ಷಾಂತ್ಯಕ್ಕೆ ರಾಜ್ಯಸಭೆಯಲ್ಲಿ 30 ಸ್ಥಾನ ಖಾಲಿಯಾಗಲಿದ್ದು, ಆಗ ಬಿಜೆಪಿಗೆ ಮತ್ತೆ 5 ಸ್ಥಾನ ಸಿಗುವ ನಿರೀಕ್ಷೆ ಇದೆ. ಇದು ಮಹತ್ವದ ಮಸೂದೆಗಳಿಗೆ ಅಂಗೀಕಾರ ಪಡೆಯಲು ಕೂಟಕ್ಕೆ ನೆರವಾಗಲಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಚರ್ಚೆಯೇ ನಡೆಯದ ಸಂಸತ್‌ನ ಮುಂಗಾರು ಅಧಿವೇಶನ ಅಂತ್ಯ!
ಖರ್ಗೆ ಭಾಷಣ ಮಾಡಿದ ಸ್ಥಳದಲ್ಲಿ ಹೋಮ ಮಾಡಿ ಶುದ್ಧೀಕರಣ!