ಬಾಹ್ಯಾಕಾಶದಲ್ಲಿ ಬೆಂಗಳೂರಿನ ನೀರು ಕರಡಿ ಶುಭಾಂಶು ಪ್ರಯೋಗ ಯಶಸ್ವಿ

KannadaprabhaNewsNetwork |  
Published : Jul 07, 2025, 12:34 AM ISTUpdated : Jul 07, 2025, 04:33 AM IST
ಶುಕ್ಲಾ | Kannada Prabha

ಸಾರಾಂಶ

ಆಕ್ಸಿಯೋಂ-4 ಮಿಷನ್‌ನ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐಎಸ್‌ಎಸ್‌)ಕ್ಕೆ ತೆರಳಿರುವ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ, ನೀರುಕರಡಿ (ವಾಯೇಜರ್‌ ಟಾರ್ಡಿಗ್ರೇಡ್) ಪ್ರಯೋಗ ಪೂರ್ಣಗೊಳಿಸಿದ್ದಾರೆ. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಈ ಪ್ರಯೋಗವನ್ನು ಸಿದ್ಧಪಡಿಸಿತ್ತು.

ನವದೆಹಲಿ: ಆಕ್ಸಿಯೋಂ-4 ಮಿಷನ್‌ನ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐಎಸ್‌ಎಸ್‌)ಕ್ಕೆ ತೆರಳಿರುವ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ, ನೀರು ಕರಡಿ (ವಾಯೇಜರ್‌ ಟಾರ್ಡಿಗ್ರೇಡ್) ಪ್ರಯೋಗ ಪೂರ್ಣಗೊಳಿಸಿದ್ದಾರೆ. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಈ ಪ್ರಯೋಗವನ್ನು ಸಿದ್ಧಪಡಿಸಿತ್ತು.

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಇಸ್ರೋ, ‘ಶುಭಾಂಶು ಶುಕ್ಲಾ ಐಎಸ್‌ಎಸ್‌ನಲ್ಲಿ ನೀರು ಕರಡಿಗಳನ್ನು ಒಳಗೊಂಡ ಸೂಕ್ಷ್ಮ ಗುರುತ್ವಾಕರ್ಷಣೆಯ ಪ್ರಯೋಗವನ್ನು ಪೂರ್ಣಗೊಳಿಸಿದ್ದಾರೆ. ಅಧ್ಯಯನವು ಬಾಹ್ಯಾಕಾಶದಲ್ಲಿ ಅವುಗಳ ಬದುಕುಳಿಯುವಿಕೆ, ಪುನರುಜ್ಜೀವನ ಮತ್ತು ಸಂತಾನೋತ್ಪತ್ತಿ ಮೇಲೆ ಕೇಂದ್ರೀಕರಿಸಿದೆ. ಈ ಅಧ್ಯಯನವು ಸೂಕ್ಷ್ಮ ಗುರುತ್ವಾಕರ್ಷಣೆಯ ಪರಿಸರದಲ್ಲಿ ನೀರುಕರಡಿಗಳ ಜೈವಿಕ ಕಾರ್ಯವಿಧಾನಗಳ ಬಗ್ಗೆ ಅಮೂಲ್ಯ ಒಳನೋಟಗಳನ್ನು ಒದಗಿಸುತ್ತದೆ’ ಎಂದು ತಿಳಿಸಿದೆ.

14 ದಿನಗಳ ಕಾಲ ಐಎಸ್‌ಎಸ್‌ನಲ್ಲಿ ಇರಲಿರುವ ಶುಕ್ಲಾ ಒಟ್ಟು 7 ಪ್ರಯೋಗಗಳನ್ನು ಕೈಗೊಳ್ಳಲಿದ್ದಾರೆ. ಈ ಪೈಕಿ 4 ಪ್ರಯೋಗಗಳನ್ನು ಕರ್ನಾಟಕದ ವಿಜ್ಞಾನಿಗಳು ಸಿದ್ಧಪಡಿಸಿದ್ದಾರೆ.

  • ಆಕ್ಸಿಯೋಂ-4 ಮಿಷನ್‌ನ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐಎಸ್‌ಎಸ್‌)ಕ್ಕೆ ತೆರಳಿರುವ ಭಾರತೀಯ ಗಗನಯಾತ್ರಿ ಶುಭಾಂಶು
  • -ಬೆಂಗಳೂರಿನ ಐಐಎಸ್‌ಸಿ ಸಿದ್ಧಪಡಿಸಿದ್ದ ಪ್ರಯೋಗ
  • -ಗಗನಯಾತ್ರಿ ಶುಭಾಂಶು ಶುಕ್ಲಾರಿಂದ ಪೂರ್ಣ

ಐಐಎಸ್‌ಸಿಯಿಂದ 5 ವರ್ಷ ಅಧ್ಯಯನ:

ವಿಜ್ಞಾನಿ ಸಂದೀಪ್ ಈಶ್ವರಪ್ಪ ಮತ್ತು ಐಐಎಸ್‌ಸಿಯ ತಂಡವು, 5 ವರ್ಷಗಳ ಕಾಲ ನೀರುಕರಡಿಗಳ ಕುರಿತು ಅಧ್ಯಯನ ನಡೆಸಿದೆ. ಸೂಕ್ಷ್ಮ ಜೀವಿಗಳಾದ ಇವು ಮಾರಕ ಅಲ್ಟ್ರಾವೈಲಟ್ ವಿಕಿರಣಗಳಿಗೆ ಒಡ್ಡಿಕೊಂಡಾಗ, ಹಾನಿಕಾರಕ ವಿಕಿರಣಗಳನ್ನು ಹೀರಿಕೊಂಡು ನಿರಪಾಯಕಾರಿ ನೀಲಿ ವಿಕರಣಗಳನ್ನು ಹೊರಸೂಸುತ್ತವೆ. ಇವುಗಳನ್ನು ಶುಕ್ಲಾ ಜತೆ ಐಎಸ್‌ಎಸ್‌ಗೆ ಕಳಿಸಲಾಗಿತ್ತು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಆಸ್ಟ್ರೇಲಿಯಾದಲ್ಲಿ 426 ಕೆಜಿಯ ಗಾಂಧಿ ಕಂಚಿನ ಪ್ರತಿಮೆ ಧ್ವಂಸ, ಕಳವು
6 ಕ್ಷೇತ್ರದ ಚುನಾವಣಾ ಉಸ್ತುವಾರಿ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ