ವಿಷಕಾರಿ ಕ್ಯಾನ್‌ಗಳನ್ನು ಸಿಡಿಸಿ ಹಾಥ್ರಸ್‌ನಲ್ಲಿ 121 ಜನರ ಹತ್ಯೆ?

KannadaprabhaNewsNetwork |  
Published : Jul 08, 2024, 12:34 AM ISTUpdated : Jul 08, 2024, 06:16 AM IST
ಕಾಲ್ತುಳಿತಕ್ಕೆ ಬಲಿಯಾದವರು | Kannada Prabha

ಸಾರಾಂಶ

ಉತ್ತರಪ್ರದೇಶದ ಹಾಥ್ರಸ್‌ನಲ್ಲಿ ಜು.2ರಂದು 121 ಜನರ ಸಾವಿಗೆ ಕಾರಣವಾದ ಕಾಲ್ತುಳಿತಕ್ಕೆ ಜನಜಂಗುಳಿಯ ನಡುವೆ ಕೆಲವು ವ್ಯಕ್ತಿಗಳು ವಿಷಪೂರಿತ ಕ್ಯಾನ್‌ಗಳನ್ನು ತೆರೆದಿದ್ದೇ ಕಾರಣ ಎಂದು ಸ್ವಯಂಘೋಷಿತ ದೇವಮಾನವ ಭೋಲೆ ಬಾಬಾ ಪರ ವಕೀಲ ಎ.ಪಿ.ಸಿಂಗ್‌ ಹೊಸ ಆರೋಪ ಮಾಡಿದ್ದಾರೆ.

  ನವದೆಹಲಿ :  ಉತ್ತರಪ್ರದೇಶದ ಹಾಥ್ರಸ್‌ನಲ್ಲಿ ಜು.2ರಂದು 121 ಜನರ ಸಾವಿಗೆ ಕಾರಣವಾದ ಕಾಲ್ತುಳಿತಕ್ಕೆ ಜನಜಂಗುಳಿಯ ನಡುವೆ ಕೆಲವು ವ್ಯಕ್ತಿಗಳು ವಿಷಪೂರಿತ ಕ್ಯಾನ್‌ಗಳನ್ನು ತೆರೆದಿದ್ದೇ ಕಾರಣ ಎಂದು ಸ್ವಯಂಘೋಷಿತ ದೇವಮಾನವ ಭೋಲೆ ಬಾಬಾ ಪರ ವಕೀಲ ಎ.ಪಿ.ಸಿಂಗ್‌ ಹೊಸ ಆರೋಪ ಮಾಡಿದ್ದಾರೆ.

ದೆಹಲಿಯಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭೋಲೆ ಬಾಬಾ ಅವರ ಜನಪ್ರಿಯತೆ ಹೆಚ್ಚುತ್ತಿರುವುದನ್ನು ಸಹಿಸದವರಿಂದಾಗಿ ಈ ಕಾಲ್ತುಳಿತ ಸಂಭವಿಸಿದೆ ಎಂದು ದೂರಿದರು.

ವಿಷಪೂರಿತವಾದ ಕ್ಯಾನ್‌ಗಳನ್ನು ಹಿಡಿದು 15ರಿಂದ 16 ಜನರು ನಿಂತಿದ್ದರು. ಅವರು ಆ ಕ್ಯಾನ್‌ಗಳನ್ನು ತೆರೆದರು ಎಂದು ಸಾಕ್ಷಿಗಳು ನಮ್ಮನ್ನು ಸಂಪರ್ಕಿಸಿವೆ. ಮರಣೋತ್ತರ ವರದಿಗಳನ್ನೂ ಗಮನಿಸಲಾಗಿದೆ. ಗಾಯಗಳಿಂದ ಸಾವು ಸಂಭವಿಸಿಲ್ಲ. ಬದಲಾಗಿ ಉಸಿರಾಟ ಸಮಸ್ಯೆಯಿಂದಲೇ ಜನರು ಸಾವಿಗೀಡಾಗಿದ್ದಾರೆ. ಈ ರೀತಿ ಕ್ಯಾನ್‌ಗಳನ್ನು ತೆರೆದವರು ಪರಾರಿಯಾಗಲು ವಾಹನಗಳನ್ನು ಕೂಡ ನಿಲ್ಲಿಸಲಾಗಿತ್ತು. ಇದಕ್ಕೆ ನಮ್ಮ ಬಳಿ ದಾಖಲೆ ಇದೆ. ಅದನ್ನು ಸಲ್ಲಿಸುತ್ತೇವೆ ಎಂದು ಹೇಳಿದರು.

ನಮಗೆ ಮಾಹಿತಿ ನೀಡಿರುವ ಸಾಕ್ಷಿಗಳು ಬಹಿರಂಗವಾಗಿ ಕಾಣಿಸಿಕೊಳ್ಳಲು ಇಚ್ಛಿಸುತ್ತಿಲ್ಲ. ಅವರಿಗೆ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಅಮೆರಿಕ ಆರ್ಥಿಕತೆಗೆ ಏಟು ನೀಡಲು ದುಬೈಗೆ ಇರಾನ್‌ ಭಾರಿ ದಾಳಿ
ಭಾರತಕ್ಕೆ ಬೇಕಿದ್ದ ಪಾಕ್‌ ಉಗ್ರ ಅನಾಮಿಕ ವ್ಯಕ್ತಿ ಗುಂಡಿಗೆ ಬಲಿ