ಚುನಾವಣಾ ಸೋಲಿನ ಬೆನ್ನಲ್ಲೇ ಮಹಾರಾಷ್ಟ್ರದ ಮಹಾ ವಿಕಾಸ ಅಘಾಡಿ ಮೈತ್ರಿಕೂಟದಲ್ಲಿ ಬಿರುಕು : ಎಸ್ಪಿ ಹೊರಕ್ಕೆ

KannadaprabhaNewsNetwork |  
Published : Dec 08, 2024, 01:17 AM ISTUpdated : Dec 08, 2024, 05:49 AM IST
ಎಸ್‌ಪಿ | Kannada Prabha

ಸಾರಾಂಶ

ಚುನಾವಣಾ ಸೋಲಿನ ಬೆನ್ನಲ್ಲೇ ಮಹಾರಾಷ್ಟ್ರದ ಮಹಾ ವಿಕಾಸ ಅಘಾಡಿ (ಎಂವಿಎ) ಮೈತ್ರಿಕೂಟದಲ್ಲಿ ಬಿರುಕು ಉಂಟಾಗಿದ್ದು, ಕೂಟದಿಂದ ಹೊರಬೀಳುವುದಾಗಿ ಸಮಾಜವಾದಿ ಪಕ್ಷ (ಎಸ್ಪಿ) ಘೋಷಿಸಿದೆ,.

 ಮುಂಬೈ : ಚುನಾವಣಾ ಸೋಲಿನ ಬೆನ್ನಲ್ಲೇ ಮಹಾರಾಷ್ಟ್ರದ ಮಹಾ ವಿಕಾಸ ಅಘಾಡಿ (ಎಂವಿಎ) ಮೈತ್ರಿಕೂಟದಲ್ಲಿ ಬಿರುಕು ಉಂಟಾಗಿದ್ದು, ಕೂಟದಿಂದ ಹೊರಬೀಳುವುದಾಗಿ ಸಮಾಜವಾದಿ ಪಕ್ಷ (ಎಸ್ಪಿ) ಘೋಷಿಸಿದೆ,.

ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಆಪ್ತ ಶಾಸಕ ಮಿಲಿಂದ್ ನಾರ್ವೇಕರ್‌ ಬಾಬರಿ ಮಸೀದಿ ಧ್ವಂಸ ಮತ್ತು ಸಂಬಂಧಿತ ಪತ್ರಿಕಾ ಜಾಹೀರಾತನ್ನು ಶ್ಲಾಘಿಸಿದ ನಂತರ ಎಸ್ಪಿ ಈ ಘೋಷಣೆ ಮಾಡಿದೆ. ಮಹಾರಾಷ್ಟ್ರದಲ್ಲಿ ಎಸ್ಪಿ ಇಬ್ಬರು ಶಾಸಕರನ್ನು ಹೊಂದಿದೆ.‘ಬಾಬ್ರಿ ಮಸೀದಿ ಕೆಡವಿದ ವರ್ಷಾಚರಣೆ ದಿನವಾದ ಡಿ.6ರಂದು, ಧ್ವಂಸವನ್ನು ಅಭಿನಂದಿಸಿ ಶಿವಸೇನೆ (ಯುಬಿಟಿ) ಪಕ್ಷವು ಪತ್ರಿಕಾ ಜಾಹೀರಾತು ನೀಡಿದೆ. ಠಾಕ್ರೆ ಆಪ್ತರು ಮಸೀದಿ ಧ್ವಂಸ ಶ್ಲಾಘಿಸಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಹೀಗಾಗಿ ನಾವು ಎಂವಿಎ ಬಿಡುತ್ತಿದ್ದೇವೆ. ಈ ವಿಷಯವನ್ನು ನಮ್ಮ ನೇತಾರ ಅಖಿಲೇಶ್‌ ಯಾದವ್‌ಗೆ ತಿಳಿಸುತ್ತೇವೆ’ ಎಂದು ಮಹಾರಾಷ್ಟ್ರ ಎಸ್‌ಪಿ ಘಟಕದ ಮುಖ್ಯಸ್ಥ ಅಬು ಅಜ್ಮಿ ಹೇಳಿದರು.

‘ಎಂವಿಎಯಲ್ಲಿ ಯಾರಾದರೂ ಅಂತಹ ಭಾಷೆಯಲ್ಲಿ ಮಾತನಾಡಿದರೆ, ಬಿಜೆಪಿ ಮತ್ತು ಅವರ ನಡುವಿನ ವ್ಯತ್ಯಾಸವೇನು? ನಾವು ಅವರೊಂದಿಗೆ ಏಕೆ ಉಳಿಯಬೇಕು?’ ಅಜ್ಮಿ ಕೇಳಿದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಮೋದಿ ಜತೆ ಪ್ರಿಯಾಂಕಾ ಗಾಂಧಿ ಆತ್ಮೀಯ ಮಾತು!
ಬಾಂಗ್ಲಾ ಹಿಂದು ಯುವಕನ ನರಮೇಧ - ಬಡಿದು ಕೊಂದು, ಮರಕ್ಕೆ ಕಟ್ಟಿ ಸುಟ್ಟು ಅಟ್ಟಹಾಸ