ಕರಸೇವಕರ ಮೇಲೆ ನಡೆದ ಗುಂಡಿನ ದಾಳಿ ಸರಿ ಇದೆ ಎಂದ ಕೇಶವ್‌ ಪ್ರಸಾದ್‌ ಮೌರ್ಯ

KannadaprabhaNewsNetwork |  
Published : Jan 11, 2024, 01:30 AM ISTUpdated : Jan 11, 2024, 11:04 AM IST
ಗುಂಡಿನ ದಾಳಿ | Kannada Prabha

ಸಾರಾಂಶ

ಬಾಬ್ರಿ ಮಸೀದಿ ಧ್ವಂಸದ ವೇಳೆ ಪೊಲೀಸರು ಕರಸೇವಕರ ಮೇಲೆ ನಡೆಸಿದ ಬಾಂಬ್‌ ದಾಳಿಯನ್ನು ಸಮರ್ಥಿಸುವ ಮೂಲಕ ಸಮಾಜವಾದಿ ಪಕ್ಷದ ನಾಯಕ ಕೇಶವ್‌ ಪ್ರಸಾದ್‌ ಮೌರ್ಯ ವಿವಾದ ಸೃಷ್ಟಿಸಿದ್ದಾರೆ.

ಖಾಸ್ಗಂಜ್‌: ಭಾರಿ ವಿವಾದಗಳಿಂದಲೇ ಸುದ್ದಿಯಾಗುತ್ತಿರುವ ಸಮಾಜವಾದಿ ಪಕ್ಷದ ನಾಯಕ ಸ್ವಾಮಿ ಪ್ರಸಾದ್‌ ಮೌರ್ಯ ಮತ್ತೊಂದು ವಿವಾದಿತ ಹೇಳಿಕೆ ನೀಡಿದ್ದಾರೆ.

ಈ ಬಾರಿ 1990ರಲ್ಲಿ ಕರಸೇವಕರ ಮೇಲೆ ಪೊಲೀಸರು ನಡೆಸಿದ ಗುಂಡಿನ ದಾಳಿ ಸರಿ ಇದೆ ಎಂದು ಮೌರ್ಯ ಹೇಳಿದ್ದಾರೆ. ಈ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಮೌರ್ಯ,‘1990ರಲ್ಲಿ ಕರಸೇವಕರು ಕಾನೂನು ಸುವ್ಯವಸ್ಥೆಗೆ ಧಕ್ಕೆತಂದಿದ್ದರು.

ಇದನ್ನು ತಡೆವ ನಿಟ್ಟಿನಲ್ಲಿ ಅಂದಿನ ಮುಖ್ಯಮಂತ್ರಿ ಮುಲಾಯಂ ಸಿಂಗ್‌ ಯಾದವ್‌ ಕರಸೇವಕರ ಮೇಲೆ ಗುಂಡಿನ ದಾಳಿ ಮಾಡಲು ಆದೇಶಿಸಿದರು. ಈ ಮೂಲಕ ಸಂವಿಧಾನವನ್ನು ಉಳಿಸಿದರು. ಆದರೆ ಬಿಜೆಪಿ ವಿನಾಕಾರಣ ರಾಜಕಾರಣ ಮಾಡುತ್ತಿದೆ’ ಎಂದು ಮೌರ್ಯ ಕಿಡಿಕಾರಿದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಈಗ ಖರ್ಗೆ ಹೆಗಲಿಗೆ ನಿರ್ಧಾರ ಯಾರು ಆಗ್ತಾರೆ ಕೇರಳಂ ಸಿಎಂ?
ಪಶ್ಚಿಮ ಬಂಗಾಳ ವಿಧಾನಸಭೆ ವಿರ್ಸಜನೆ ಗೌರ್‍ನರ್‌ ಗೇಟ್‌ ಪಾಸ್‌ : ದೀದಿ ಈಗ ಬೀದಿಗೆ!