ಕರಸೇವಕರ ಮೇಲೆ ನಡೆದ ಗುಂಡಿನ ದಾಳಿ ಸರಿ ಇದೆ ಎಂದ ಕೇಶವ್‌ ಪ್ರಸಾದ್‌ ಮೌರ್ಯ

KannadaprabhaNewsNetwork |  
Published : Jan 11, 2024, 01:30 AM ISTUpdated : Jan 11, 2024, 11:04 AM IST
ಗುಂಡಿನ ದಾಳಿ | Kannada Prabha

ಸಾರಾಂಶ

ಬಾಬ್ರಿ ಮಸೀದಿ ಧ್ವಂಸದ ವೇಳೆ ಪೊಲೀಸರು ಕರಸೇವಕರ ಮೇಲೆ ನಡೆಸಿದ ಬಾಂಬ್‌ ದಾಳಿಯನ್ನು ಸಮರ್ಥಿಸುವ ಮೂಲಕ ಸಮಾಜವಾದಿ ಪಕ್ಷದ ನಾಯಕ ಕೇಶವ್‌ ಪ್ರಸಾದ್‌ ಮೌರ್ಯ ವಿವಾದ ಸೃಷ್ಟಿಸಿದ್ದಾರೆ.

ಖಾಸ್ಗಂಜ್‌: ಭಾರಿ ವಿವಾದಗಳಿಂದಲೇ ಸುದ್ದಿಯಾಗುತ್ತಿರುವ ಸಮಾಜವಾದಿ ಪಕ್ಷದ ನಾಯಕ ಸ್ವಾಮಿ ಪ್ರಸಾದ್‌ ಮೌರ್ಯ ಮತ್ತೊಂದು ವಿವಾದಿತ ಹೇಳಿಕೆ ನೀಡಿದ್ದಾರೆ.

ಈ ಬಾರಿ 1990ರಲ್ಲಿ ಕರಸೇವಕರ ಮೇಲೆ ಪೊಲೀಸರು ನಡೆಸಿದ ಗುಂಡಿನ ದಾಳಿ ಸರಿ ಇದೆ ಎಂದು ಮೌರ್ಯ ಹೇಳಿದ್ದಾರೆ. ಈ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಮೌರ್ಯ,‘1990ರಲ್ಲಿ ಕರಸೇವಕರು ಕಾನೂನು ಸುವ್ಯವಸ್ಥೆಗೆ ಧಕ್ಕೆತಂದಿದ್ದರು.

ಇದನ್ನು ತಡೆವ ನಿಟ್ಟಿನಲ್ಲಿ ಅಂದಿನ ಮುಖ್ಯಮಂತ್ರಿ ಮುಲಾಯಂ ಸಿಂಗ್‌ ಯಾದವ್‌ ಕರಸೇವಕರ ಮೇಲೆ ಗುಂಡಿನ ದಾಳಿ ಮಾಡಲು ಆದೇಶಿಸಿದರು. ಈ ಮೂಲಕ ಸಂವಿಧಾನವನ್ನು ಉಳಿಸಿದರು. ಆದರೆ ಬಿಜೆಪಿ ವಿನಾಕಾರಣ ರಾಜಕಾರಣ ಮಾಡುತ್ತಿದೆ’ ಎಂದು ಮೌರ್ಯ ಕಿಡಿಕಾರಿದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಬಂಗಾಳದಲ್ಲಿ ಶೀಘ್ರ ಜಂಗಲ್‌ ರಾಜ್ಯ ಅಂತ್ಯ : ಮೋದಿ ಪಣ
ಈಗ ತೆಲಂಗಾಣದಲ್ಲೂ ದ್ವೇಷ ಭಾಷಣ ನಿಷೇಧ ಕಾಯ್ದೆ: ರೆಡ್ಡಿ