ಸ್ಟಾಲಿನ್‌ ಸ್ಟ್ಯಾಂಡ್‌ ಅಪ್ ಕಮೆಡಿಯನ್‌ : ವಿಜಯ್‌ ವ್ಯಂಗ್ಯ

KannadaprabhaNewsNetwork |  
Published : Feb 24, 2026, 03:00 AM ISTUpdated : Feb 24, 2026, 05:29 AM IST
Vijay Thalapathy

ಸಾರಾಂಶ

ತಮಿಳುನಾಡು ಮಾಜಿ ಮುಖ್ಯಮಂತ್ರಿಗಳಾದ ಕಾಮರಾಜ್, ಅಣ್ಣಾದೊರೈ ಮತ್ತು ಎಂಜಿಆರ್ ಅವರ ಅಡಿಯಲ್ಲಿ ಸೂಪರ್‌ಸ್ಟಾರ್ ರಾಜ್ಯವಾಗಿತ್ತು. ಈಗ ಸಿಎಂ ಎಂ.ಕೆ. ಸ್ಟಾಲಿನ್‌  ಸ್ಟ್ಯಾಂಡ್‌ ಅಪ್ ಕಮೆಡಿಯನ್‌ ಎಂದು ಟವಿಕೆ ಪಕ್ಷದ ಸ್ಥಾಪಕ, ನಟ ವಿಜಯ್‌ ವ್ಯಂಗ್ಯವಾಡಿದ್ದಾರೆ.

ವೆಲ್ಲೂರು: ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್‌ ಅವರನ್ನು ಸ್ಟ್ಯಾಂಡ್‌ ಅಪ್ ಕಮೆಡಿಯನ್‌ ಎಂದು ಟವಿಕೆ ಪಕ್ಷದ ಸ್ಥಾಪಕ, ನಟ ವಿಜಯ್‌ ವ್ಯಂಗ್ಯವಾಡಿದ್ದಾರೆ.

ಸೋಮವಾರ ಟಿವಿಕೆ ಸಭೆಯಲ್ಲಿ ಮಾತನಾಡಿದ ಅವರು, ‘ತಮ್ಮ ಆಳ್ವಿಕೆಯಲ್ಲಿ ತಮಿಳುನಾಡು ಸೂಪರ್‌ಸ್ಟಾರ್ ರಾಜ್ಯ ಎಂದು ಸ್ಟಾಲಿನ್ ಹೇಳುತ್ತಾರೆ. ತಮಿಳುನಾಡು ಮಾಜಿ ಮುಖ್ಯಮಂತ್ರಿಗಳಾದ ಕಾಮರಾಜ್, ಅಣ್ಣಾದೊರೈ ಮತ್ತು ಎಂಜಿಆರ್ ಅವರ ಅಡಿಯಲ್ಲಿ ಸೂಪರ್‌ಸ್ಟಾರ್ ರಾಜ್ಯವಾಗಿತ್ತು, ಆದರೆ ಸ್ಟಾಲಿನ್ ಅವರ ಅಡಿಯಲ್ಲಿ ಅಲ್ಲ. ಈಗ ಅದು ಸೂಪರ್ ಸ್ಟ್ಯಾಂಡ್-ಅಪ್ ಕಾಮಿಕ್ ನಡೆಸುವ ರಾಜ್ಯವಾಗಿದೆ’ ಎಂದು ವ್ಯಂಗ್ಯವಾಡಿದರು.

ಹುಲ್ಲು ತಿನ್ನಿಸಿ ಜಲ್ಲಿಕಟ್ಟು ಗೂಳಿಯನ್ನು ಪಳಗಿಸುವ ಪುಟ್ಟ ಬಾಲಕನಂತೆ

ಅಲ್ಲದೆ, ‘ನಾನು ಅನುಭವ ಇಲ್ಲದಿದ್ದರೂ ಹುಲ್ಲು ತಿನ್ನಿಸಿ ಜಲ್ಲಿಕಟ್ಟು ಗೂಳಿಯನ್ನು ಪಳಗಿಸುವ ಪುಟ್ಟ ಬಾಲಕನಂತೆ’ ಎಂದು ಹೇಳಿದ ವಿಜಯ್‌, ಸ್ಟಾಲಿನ್‌ರನ್ನು ಮಣಿಸುವ ಪರೋಕ್ಷ ಎಚ್ಚರಿಕೆ ನೀಡಿದರು.

ಇಂಡಿಯಾ ಕೂಟದ ಸಂಚಾಲಕ ಸ್ಥಾನಕ್ಕೆ ಸ್ಟಾಲಿನ್‌ ಸೂಕ್ತ: ಅಯ್ಯರ್‌

ಪಿಟಿಐ ನವದೆಹಲಿ‘ಇಂಡಿಯಾ ಮೈತ್ರಿಕೂಟವನ್ನು ಮುನ್ನಡೆಸಲು ತಮಿಳುನಾಡು ಸಿಎಂ ಹಾಗೂ ಡಿಎಂಕೆ ನಾಯಕ ಎಂ.ಕೆ. ಸ್ಟಾಲಿನ್‌ ಸಮರ್ಥರು. ಹಾಗಾಗಿ ಅವರು ಸಂಚಾಲಕ ಸ್ಥಾನಕ್ಕೆ ಸೂಕ್ತ. ಇದು ಕಾಂಗ್ರೆಸ್‌ ಹಿತಾಸಕ್ತಿಗೂ ಒಳ್ಳೆಯದು’ ಎಂದು ಕಾಂಗ್ರೆಸ್‌ ನಾಯಕ ಮಣಿಶಂಕರ್‌ ಅಯ್ಯರ್‌ ಹೇಳಿದ್ದಾರೆ.

ಪಿಟಿಐ ಜತೆ ಈ ಬಗ್ಗೆ ಮಾತನಾಡಿರುವ ಅವರು, ‘ಪ್ರಸ್ತುತ ಇರುವ ಪರಿಸ್ಥಿತಿಯಲ್ಲಿ 2029ರ ಗುರಿ ತಲುಪಬೇಕಾದರೆ ಇಂಡಿಯಾ ಕೂಟವನ್ನು ಮುನ್ನಡೆಸಲು ಸ್ಟಾಲಿನ್‌ ಅವರಿಗಿಂತ ಉತ್ತಮರು ಬೇರೆ ಯಾರಿಲ್ಲ. ಮುಂದಿನ ಚುನಾವಣೆಯಲ್ಲಿ ಇಂಡಿಯಾ ಕೂಟ ಗೆಲ್ಲಿಸುವುದು ಅವರಿಂದ ಸಾಧ್ಯ. ಇಲ್ಲದಿದ್ದರೆ ರಾಹುಲ್‌ ಗಾಂಧಿ ಪ್ರಧಾನಿಯಾಗಲು ಸಾಧ್ಯವಿಲ್ಲ’ ಎಂದರು.ಇದೇ ವೇಳೆ ಅವರು ‘ಡಿಎಂಕೆ ಹಲವು ವರ್ಷಗಳಿಂದ ಕಾಂಗ್ರೆಸ್‌ನ ಅತ್ಯಂತ ವಿಶ್ವಾಸಾರ್ಹ ಮಿತ್ರಪಕ್ಷ. ಸ್ಟಾಲಿನ್‌ ಒಗ್ಗಟ್ಟನ್ನು ಹೇಗೆ ಸೃಷ್ಟಿಸಬೇಕೆಂದು ತಿಳಿದಿರುವ ಸಮರ್ಥ ಆಡಳಿಗಾರ’ ಎಂದು ಹೊಗಳಿದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

26ಕ್ಕೆ ರಶ್ಮಿಕಾ-ವಿಜಯ್‌ ವಿವಾಹ : ಉದಯಪುರಕ್ಕೆ ಆಗಮನ
ದೇಶದ ಮೊದಲ ಉಗ್ರ ವಿರೋಧಿ ನೀತಿ ಪ್ರಹಾರ್‌ ಬಿಡುಗಡೆ